ದೆಹಲಿಯ ವಿಜ್ಞಾನ ಭವನದಲ್ಲಿ 69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕೈಯಿಂದ ಪ್ರಶಸ್ತಿ ಪುರಸ್ಕೃತರು ಖುಷಿಯಿಂದ ಪ್ರಶಸ್ತಿ ಸ್ವೀಕರಿಸಿದರು. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹಾಜರಿದ್ದರು 
ಸಿನಿಮಾ

69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪುರಸ್ಕೃತರ ಮುಖದಲ್ಲಿ ಮಂದಹಾಸ- Photos

ದೆಹಲಿಯ ವಿಜ್ಞಾನ ಭವನದಲ್ಲಿ 69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕೈಯಿಂದ ಪ್ರಶಸ್ತಿ ಪುರಸ್ಕೃತರು ಖುಷಿಯಿಂದ ಪ್ರಶಸ್ತಿ ಸ್ವೀಕರಿಸಿದರು.

ಅತ್ಯುತ್ತಮ ಕನ್ನಡ ಚಿತ್ರ '777 ಚಾರ್ಲಿ'ಗೆ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ನಟ-ನಿರ್ದೇಶಕ-ನಿರ್ಮಾಪಕ ರಕ್ಷಿತ್ ಶೆಟ್ಟಿ
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತ್ಯುತ್ತಮ ಕನ್ನಡ ಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದ ಚಾರ್ಲಿ 777 ಸಿನಿಮಾ ನಿರ್ದೇಶಕ ಕಿರಣ್ ರಾಜ್
ನಾನ್-ಫೀಚರ್ ಸಿನಿಮಾ ವಿಭಾಗದಲ್ಲಿ ಪ್ರಶಸ್ತಿ ಪಡೆದ ಬಾಳೇ ಬಂಗಾರ ಸಾಕ್ಷ್ಯಚಿತ್ರ ತಂಡದ ನಟ ಅನಿರುದ್ಧ್
ನಿರ್ದೇಶಕ ಸಂಜಯ ಲೀಲಾ ಬನ್ಸಾಲಿಯವರ ಗಂಗೂಬಾಯಿ ಕಥಿವಾಡಿ ಚಿತ್ರದಲ್ಲಿನ ಪಾತ್ರಕ್ಕಾಗಿ ಅತ್ಯುತ್ತಮ ನಟಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ ಅಲಿಯಾ ಭಟ್
ಪ್ರಶಸ್ತಿ ಸ್ವೀಕರಿಸಿದ ನಂತರ ಪತಿ ನಟ ರಣಬೀರ್ ಕಪೂರ್ ಜೊತೆ ಪ್ರಶಸ್ತಿ ಜೊತೆ ಖುಷಿಯಿಂದ ಫೋಸ್ ಕೊಟ್ಟ ನಟಿ ಅಲಿಯಾ
ಮೀಮಿ ಚಿತ್ರದ ನಟನೆಗಾಗಿ ಕೃತಿ ಸೆನೂನ್ ಸಹ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು.
ಪುಷ್ಪ ದಿ ರೈಸಿಂಗ್ ಚಿತ್ರದ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ ಪಡೆದ ತೆಲುಗು ನಟ ಅಲ್ಲು ಅರ್ಜುನ್
'ಕಾಶ್ಮೀರ ಫೈಲ್ಸ್' ರಾಷ್ಟ್ರೀಯ ಏಕೀಕರಣದ ಅತ್ಯುತ್ತಮ ಚಲನಚಿತ್ರಕ್ಕಾಗಿ ನರ್ಗೀಸ್ ದತ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ತಂಡದ ಪರವಾಗಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪ್ರಶಸ್ತಿ ಸ್ವೀಕರಿಸಿದರು.
ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದ ವಿವೇಕ್ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಷಿ
ಮಲಯಾಳಂ ಚಲನಚಿತ್ರ, ಮೆಪ್ಪಾಡಿಯನ್‌ಗಾಗಿ ಅತ್ಯುತ್ತಮ ಚೊಚ್ಚಲ ನಿರ್ದೇಶಕ ಪ್ರಶಸ್ತಿ ಪಡೆದ ವಿಷ್ಣು ಮೋಹನ್
ಶ್ರೇಯಾ ಘೋಷಾಲ್ 5ನೇ ಬಾರಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ಪ್ರಶಸ್ತಿಯನ್ನು ತಮಿಳು ಚಲನಚಿತ್ರ ಇರಾವಿನ್ ನಿಜಾಲ್‌ನ ಮಾಯವ ಚಾಯವ ಗೀತೆಗಾಗಿ ಪಡೆದರು.
ನಿರ್ದೇಶಕ ಎಸ್ ಎಸ್ ರಾಜಮೌಳಿಯವರ ಆರ್ ಆರ್ ಆರ್ ಸಿನಿಮಾ 6 ಪ್ರಶಸ್ತಿಗಳನ್ನು ಬಾಚಿಕೊಂಡಿದೆ.
ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಚಿತ್ರ ನಿರ್ಮಾಪಕ ಕರಣ್ ಜೋಹರ್ ನಿರ್ಮಾಣದ ಶೇರ್ಷಾ ವಿಶೇಷ ತೀರ್ಪುಗಾರರ ಪ್ರಶಸ್ತಿ ಪಡೆದಿದೆ.
ಮಿಮಿ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಪಂಕಜ್ ತ್ರಿಪಾಠಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಪಡೆದರು.
ನಟ ಆರ್ ಮಾಧವನ್ ಅವರ ನಿರ್ದೇಶನದ ಪ್ರಾಜೆಕ್ಟ್ ರಾಕೆಟ್ರಿ: ನಂಬಿ ಎಫೆಕ್ಟ್ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಅವರು ತೆಲುಗು ಬ್ಲಾಕ್‌ಬಸ್ಟರ್ ಚಿತ್ರ ಪುಷ್ಪ: ದಿ ರೈಸ್‌ನ ಸಂಗೀತ ಸಂಯೋಜನೆಗಾಗಿ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು ಪಡೆದರು.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಹಿಳೆಯರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೊತೆ ಫೋಟೋಗೆ ಫೋಸ್ ನೀಡಿದರು.
ಖ್ಯಾತ ವಸ್ತ್ರ ವಿನ್ಯಾಸಕ ಸಬ್ಯಸಾಚಿ ವಿನ್ಯಾಸದ ಸೀರೆ ಧರಿಸಿ ಪತಿ ರಣಬೀರ್ ಜೊತೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಗಮಿಸಿದ ನಟಿ ಅಲಿಯಾ ಭಟ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್ ವಿಜಯ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

450 ಕೋಟಿ ರೂ. ಮೌಲ್ಯದ ಧರ್ಮೇಂದ್ರ ಆಸ್ತಿ ಯಾರ ಪಾಲಾಗುತ್ತೆ? ಕುತೂಹಲ ಕೆರಳಿಸಿದ ಹೇಮಾ ಮಾಲಿನಿ ಪೋಸ್ಟ್!

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

SCROLL FOR NEXT