ವೈದ್ಯಕೀಯ ಕ್ಷೇತ್ರದಲ್ಲಿ ನಾನು ಹುದ್ದೆಗಳನ್ನು ನಿರ್ವಹಿಸುತ್ತಿರುವ ಶಾಲಾ ಸ್ನೇಹಿತೆಯರು ಒಂದು ದಿನದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು 11 ಮಂದಿ ದುರ್ಮರಣ ಹೊಂದಿದ್ದಾರೆ.
ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಿನಿ ಬಸ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಅದರಲ್ಲಿ ಬಸ್ ಚಾಲಕ, 10 ಮಂದಿ ಮಹಿಳೆಯರು ಮೃತಪಟ್ಟಿದ್ದಾರೆ.ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.ಧಾರವಾಡದಲ್ಲಿ ನಡೆದ ಅಪಘಾತದಲ್ಲಿ 11 ಸಾವನ್ನಪ್ಪಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.ಅಪಘಾತ ಭೀಕರ ಚಿತ್ರಗಳುಅಪಘಾತ ಭೀಕರ ಚಿತ್ರಗಳುಅಪಘಾತ ಭೀಕರ ಚಿತ್ರಗಳುಅಪಘಾತ ಭೀಕರ ಚಿತ್ರಗಳುಅಪಘಾತ ಭೀಕರ ಚಿತ್ರಗಳುಅಪಘಾತ ಭೀಕರ ಚಿತ್ರಗಳುಅಪಘಾತ ಭೀಕರ ಚಿತ್ರಗಳುFollow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos