2010ರ ಮೇ ತಿಂಗಳಿನಲ್ಲಿ ಬಿಜೆಪಿ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದ ಹರತಾಳ್ ಹಾಲಪ್ಪ ಅವರು ಇದೇ ಸೆಕ್ಸ್ ಸಿಡಿ ಬಯಲು ಪ್ರಕರಣದಿಂದಾಗಿ ರಾಜೀನಾಮೆ ನೀಡಿದ್ದರು. ಸ್ನೇಹಿತನ ಮನೆಗೆ ಹೋಗಿ ಆತನ ಪತ್ನಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಹಾಲಪ್ಪ ಅವರ ಮೇಲೆ ಕೇಳಿಬಂದಿತ್ತು. ಅತ್ಯಾಚಾರದ ನಂತರದ ದ2012ರ ಫೆಬ್ರವರಿ 7ರಂದು ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಆರೋಪಕ್ಕಾಗಿ ಬಿಜೆಪಿಯ ಮೂವರು ಸಚಿವರ ತಲೆದಂಡವಾಗಿತ್ತು. ಆಗಿನ ಸಹಕಾರ ಸಚಿವರಾಗಿದ್ದ ಲಕ್ಷ್ಮಣ್ ಸವದಿ, ಪರಿಸರ ಮತ್ತು ಜೀವ ವೈವಿಧ್ಯ ಸಚಿವ ಜೆ.ಕೃಷ್ಣಪಾಲೇಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿದ್ದ ಸಿ.ಸಿ.ಪಾಟೀಲ್ ಅವರುಗಳು ಕಲಾಕಾಂಗ್ರೆಸ್ ಸರ್ಕಾರದಲ್ಲೂ ಈ ರೀತಿಯ ಹಗರಣವೊಂದು ಬಯಲಿಗೆ ಬಂದು ಅಬಕಾರಿ ಸಚಿವರಾಗಿದ್ದ ಎಚ್.ವೈ.ಮೇಟಿ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವರಾಗಿದ್ದ ಎಚ್.ವೈ.ಮೇಟಿ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಆರ್ಯುವೇದ ಆಸ್ಪತ್ರೆಯಲ್ಲಿ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯನ್ಮಹಿಳೆಯ ಪರವಾಗಿ ಆರ್ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ನವದೆಹಲಿಯಲ್ಲಿ ದೃಶ್ಯಾವಳಿಗಳನ್ನು ಒಳಗೊಂಡ ಸಿಡಿ ಬಿಡುಗಡೆ ಮಾಡಿದ್ದರು. ಈಗಿನಂತೆಯೇ ಆಗಲೂ ಸಂತ್ರಸ್ತ ಮಹಿಳೆ ಆರಂಭದಲ್ಲಿ ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ. ಆದರೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಪೆÇಲೀಸರಿಂದ ವರದಿ ಪಡೆದು ಎಚ್.ವೈ.ಮೇಇದಾದ ಬಳಿಕ ಕಳೆದ ಜನವರಿಯಲ್ಲಿ ವಿಧಾನ ಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಅವರು ನೀಲಿ ಚಿತ್ರ ವೀಕ್ಷಣೆ ಮಾಡಿರುವ ಆರೋಪ ಕೇಳಿಬಂದಿತ್ತು. ಈ ಆರೋಪವನ್ನು ಪ್ರಕಾಶ್ ರಾಥೋಡ್ ಅಲ್ಲಗಳೆದಿದ್ದರು. ನಾನು ಅಂತಹದ್ದೇನು ನೋಡಲಿಲ್ಲ. ಮೊಬೈಲ್ ನಲ್ಲಿ ಕೆಲವು ಮೆಸೇಜ್ ಗಳು ಹೆಚ್ಚಾಗಿದ್ದವು. ಅದನ್ನು ಡಿಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಸೇರಿದ ಸಿಡಿ ಬಿಡುಗಡೆಯಾಗಿ ಭಾರಿ ಸುದ್ದಿಗೆ ಗ್ರಾಸವಾಗಿದೆ. ಸಚಿವರ ವಿರುದ್ಧ ಗಂಭೀರ ಸ್ವರೂಪದ ಆರೋಪಗಳು ಕೇಳಿಬಂದಾಗ ಈ ಹಿಂದೆ ಮುಲಾಜಿಲ್ಲದೆ ಕ್ರಮ ಜರುಗಿಸಿದ್ದ ಯಡಿಯೂರಪ್ಪ ಅವರು ಈಗ ರಮೇಶ್ ಜಾರಕಿಹೊಳಿ ಅವರ ವಿಷಯದಲ್ಲೂ ಕೂಡ ಕಠಿಣವಾಗಿ ನಡೆದುಕೊಂಡು ರಾಜೀನಾಮೆ ಪಡೆದುಕೊಂ