ಸಿದ್ದಗಂಗಾಮಠದ ನಡೆದಾಡುವ ದೇವರು, ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ಗುರುವಾರ ರಾಹುಲ್ ಅವರು ಮಠಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು. ಬಳಿಕ ರಾತ್ರಿ ಬೆಂಗಳೂರಿಗೆ ಆಗಮಿಸಿ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಸಹ ಭೇಟಿ ಕೊಟ್ಟರು 
ಕರ್ನಾಟಕ

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಅಪ್ಪು ನಿವಾಸಕ್ಕೆ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಸಿದ್ದಗಂಗಾಮಠದ ನಡೆದಾಡುವ ದೇವರು, ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ಗುರುವಾರ ರಾಹುಲ್ ಅವರು ಮಠಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು. ಬಳಿಕ ರಾತ್ರಿ ಬೆಂಗಳೂರಿಗೆ ಆಗಮಿಸಿ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಸಹ ಭೇಟಿ ನೀಡಿದರು.

ಅಕಾಲಿಕ ಮರಣ ಕಂಡ ಕನ್ನಡದ ಯುವರತ್ನ ಡಾ.ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಅವರು ಗತಿಸಿ 5 ತಿಂಗಳು ಕಳೆದ ನಂತರವೂ ಗಣ್ಯರು, ಸೆಲೆಬ್ರಿಟಿಗಳು ಭೇಟಿ ನೀಡುವುದು ಕಡಿಮೆಯಾಗಿಲ್ಲ.
ರಾಜ್ಯ ಭೇಟಿಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಅಪ್ಪು ನಿವಾಸಕ್ಕೆ ಭೇಟಿ ಕೊಟ್ಟು ಅವರ ಪತ್ನಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಭೇಟಿಯ ಫೋಟೋಗಳನ್ನು ಟ್ವೀಟ್ ಮಾಡಿ ಕನ್ನಡದಲ್ಲಿ ಬರೆದುಕೊಂಡಿದ್ದಾರೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ ಮತ್ತು ರಾಘಣ್ಣಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದರು. ಈ ವೇಳೆ ರಾಹುಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ವಾಮಿ ಸಾಥ್ ಕೊಟ್ಟಿದ್ದರು.
ಸಿದ್ದಗಂಗಾಮಠದ ನಡೆದಾಡುವ ದೇವರು, ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ಗುರುವಾರ ರಾಹುಲ್ ಅವರು ಮಠಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು.
ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಪ್ರಮುಖ ನಾಯಕರು ಹಾಜರಿದ್ದರು.
ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮಿಗಳೊಂದಿಗೆ ನಿನ್ನೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ
ರಾಹುಲ್ ಗಾಂಧಿಯವರಿಗೆ ಶ್ರೀಗಳಿಂದ ಸನ್ಮಾನ
ಸಿದ್ದಗಂಗಾ ಮಠದಲ್ಲಿ ಕಾಂಗ್ರೆಸ್ ನಾಯಕರು
ಡಾ ಶಿವಕುಮಾರ ಸ್ವಾಮಿಗಳ ಗದ್ದುಗೆ ಬಳಿ ರಾಹುಲ್ ಗಾಂಧಿ ಮತ್ತು ಇತರರು
ಸಿದ್ದಗಂಗಾ ಶ್ರೀಗಳೊಂದಿಗೆ ಸಮಾಲೋಚನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT