ಇಂದು ಗುರುವಾರ ಬೆಳಗ್ಗೆ ಮಂಗಳೂರು ಜಂಕ್ಷನ್-ಹಾಸನ/ಮೈಸೂರು/ಬೆಂಗಳೂರು ವಿಭಾಗದಲ್ಲಿ ಮಂಗಳೂರು ಜಂಕ್ಷನ್ ಮತ್ತು ಪಡೀಲ್ ವಿಭಾಗದ ನಡುವೆ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಕೆಲವು ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವೆಡೆ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದ್ದು, ಹಲವ 
ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವೆಡೆ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದ್ದು, ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.

ರೈಲು ಸಂಖ್ಯೆ 06488 ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ ಕಾಯ್ದಿರಿಸದ ವಿಶೇಷ ಎಕ್ಸ್ ಪ್ರೆಸ್ ಮತ್ತು ರೈಲು ಸಂಖ್ಯೆ 06489 ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರಸ್ತೆ ಕಾಯ್ದಿರಿಸದ ಎಕ್ಸ್‌ಪ್ರೆಸ್ ವಿಶೇಷ ರೈಲುಗಳನ್ನು ದಿನದ ಮಟ್ಟಿಗೆ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟ
ಭೂಕುಸಿತದಿಂದ ಉಂಟಾದ ಅವಶೇಷಗಳನ್ನು ಬಹುತೇಕ ತೆರವುಗೊಳಿಸಲಾಗಿದ್ದರೂ, ರೈಲು ಕಾರ್ಯಾಚರಣೆಗಾಗಿ ಹಳಿಯನ್ನು ತೆರವುಗೊಳಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳಬಹುದು. ಇಂದು ಸಂಜೆ 4.30 ರ ವೇಳೆಗೆ ಮಂಗಳೂರು ಜಂಕ್ಷನ್-ಪಡೀಲ್ ವಿಭಾಗದಲ್ಲಿ ಭೂಕುಸಿತವನ್ನು ತೆರವುಗೊಳಿಸುವ ಸಾಧ್ಯತೆಯಿದೆ ಎಂದು ಪಾಲಕ್ಕಾಡ್ ರೈಲ್ವೆ ತಿಳಿಸಿದೆ
ರೈಲ್ವೆ ಮೂಲಗಳ ಪ್ರಕಾರ, ಹಾಸನ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, ಮುಂಬೈ (ಕೊಂಕಣ ರೈಲ್ವೆ)-ಮಂಗಳೂರು ಜಂಕ್ಷನ್ ಮತ್ತು ಮುಂದೆ ಕೇರಳ ಕಡೆಗೆ ಮತ್ತು ಮುಂಬೈ-ಹಾಸನ ಮಾರ್ಗಗಳಲ್ಲಿ ಏನೂ ಸಮಸ್ಯೆಯಾಗಿಲ್ಲ (ಪಡೀಲ್ ಬೈಪಾಸ್) ಮಂಗಳೂರು ಮತ್ತು ಹಾಸನ/ಬೆಂಗಳೂರು ನಡುವಿನ ರೈಲು ಸೇವೆಗಳಿಗೆ ತೊಂದರೆಯಾಗಿದೆ ಎಂದು ಅವರು ಹೇ
ರೈಲು ಸಂಖ್ಯೆ 06484 ಕಬಕ ಪುತ್ತೂರು-ಮಂಗಳೂರು ಸೆಂಟ್ರಲ್ ಕಾಯ್ದಿರಿಸದ ಎಕ್ಸ್‌ಪ್ರೆಸ್ ವಿಶೇಷ ರೈಲು ಪುತ್ತೂರಿನಿಂದ ಬೆಳಿಗ್ಗೆ 7.55 ಕ್ಕೆ ಹೊರಟು ಬಂಟ್ವಾಳದಲ್ಲಿ ಸಂಚಾರವನ್ನು ಅರ್ಧಕ್ಕೆ ನಿಲ್ಲಿಸಿದೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಮತ್ತು ಬರುವ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಮುಂಬೈ ಮಾರ್ಗದ ಜೋಕಟ್ಟೆ
ಈ ಮಧ್ಯೆ, ಬೆಳಿಗ್ಗೆ 11 ಗಂಟೆಗೆ ಮಂಗಳೂರು ಜಂಕ್ಷನ್‌ಗೆ ಆಗಮಿಸಿದ ರೈಲು ಸಂಖ್ಯೆ 16516 ಕಾರವಾರ-ಯಶವಂತಪುರ ವಾರಕ್ಕೆ ಮೂರು ದಿನ ಸಂಚರಿಸುವ ಎಕ್ಸ್‌ಪ್ರೆಸ್ ಬೆಂಗಳೂರು ಕಡೆಗೆ ಹೋಗಬೇಕಾಗಿತ್ತು. ಹಳಿ ಸಂಪೂರ್ಣ ತೆರವುಗೊಳ್ಳದಿದ್ದಲ್ಲಿ ಜೋಕಟ್ಟೆಗೆ ಪಡೀಲ್ ಬೈಪಾಸ್ ಮೂಲಕ ಹಾಸನ ಕಡೆಗೆ ಕೊಂಡೊಯ್ಯುವ ಸಾಧ್ಯತೆ ಇದೆ.
ಅದೇ ರೀತಿ, ಮಧ್ಯಾಹ್ನ 12.40ಕ್ಕೆ ಜಂಕ್ಷನ್‌ಗೆ ಆಗಮಿಸಬೇಕಿದ್ದ ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು ಬಂಟ್ವಾಳದಲ್ಲಿ ಸಂಚಾರ ಕೊನೆಗೊಳ್ಳುವ ಸಾಧ್ಯತೆಯಿದೆ.
ಭಾರೀ ಮಳೆಗೆ ಮಂಗಳೂರು ನಗರದಲ್ಲಿ ರಸ್ತೆಗಳು ಜಲಾವೃತವಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT