ಇಂದು ಗುರುವಾರ ಬೆಳಗ್ಗೆ ಮಂಗಳೂರು ಜಂಕ್ಷನ್-ಹಾಸನ/ಮೈಸೂರು/ಬೆಂಗಳೂರು ವಿಭಾಗದಲ್ಲಿ ಮಂಗಳೂರು ಜಂಕ್ಷನ್ ಮತ್ತು ಪಡೀಲ್ ವಿಭಾಗದ ನಡುವೆ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಕೆಲವು ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವೆಡೆ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದ್ದು, ಹಲವ 
ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವೆಡೆ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದ್ದು, ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.

ರೈಲು ಸಂಖ್ಯೆ 06488 ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ ಕಾಯ್ದಿರಿಸದ ವಿಶೇಷ ಎಕ್ಸ್ ಪ್ರೆಸ್ ಮತ್ತು ರೈಲು ಸಂಖ್ಯೆ 06489 ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರಸ್ತೆ ಕಾಯ್ದಿರಿಸದ ಎಕ್ಸ್‌ಪ್ರೆಸ್ ವಿಶೇಷ ರೈಲುಗಳನ್ನು ದಿನದ ಮಟ್ಟಿಗೆ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟ
ಭೂಕುಸಿತದಿಂದ ಉಂಟಾದ ಅವಶೇಷಗಳನ್ನು ಬಹುತೇಕ ತೆರವುಗೊಳಿಸಲಾಗಿದ್ದರೂ, ರೈಲು ಕಾರ್ಯಾಚರಣೆಗಾಗಿ ಹಳಿಯನ್ನು ತೆರವುಗೊಳಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳಬಹುದು. ಇಂದು ಸಂಜೆ 4.30 ರ ವೇಳೆಗೆ ಮಂಗಳೂರು ಜಂಕ್ಷನ್-ಪಡೀಲ್ ವಿಭಾಗದಲ್ಲಿ ಭೂಕುಸಿತವನ್ನು ತೆರವುಗೊಳಿಸುವ ಸಾಧ್ಯತೆಯಿದೆ ಎಂದು ಪಾಲಕ್ಕಾಡ್ ರೈಲ್ವೆ ತಿಳಿಸಿದೆ
ರೈಲ್ವೆ ಮೂಲಗಳ ಪ್ರಕಾರ, ಹಾಸನ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, ಮುಂಬೈ (ಕೊಂಕಣ ರೈಲ್ವೆ)-ಮಂಗಳೂರು ಜಂಕ್ಷನ್ ಮತ್ತು ಮುಂದೆ ಕೇರಳ ಕಡೆಗೆ ಮತ್ತು ಮುಂಬೈ-ಹಾಸನ ಮಾರ್ಗಗಳಲ್ಲಿ ಏನೂ ಸಮಸ್ಯೆಯಾಗಿಲ್ಲ (ಪಡೀಲ್ ಬೈಪಾಸ್) ಮಂಗಳೂರು ಮತ್ತು ಹಾಸನ/ಬೆಂಗಳೂರು ನಡುವಿನ ರೈಲು ಸೇವೆಗಳಿಗೆ ತೊಂದರೆಯಾಗಿದೆ ಎಂದು ಅವರು ಹೇ
ರೈಲು ಸಂಖ್ಯೆ 06484 ಕಬಕ ಪುತ್ತೂರು-ಮಂಗಳೂರು ಸೆಂಟ್ರಲ್ ಕಾಯ್ದಿರಿಸದ ಎಕ್ಸ್‌ಪ್ರೆಸ್ ವಿಶೇಷ ರೈಲು ಪುತ್ತೂರಿನಿಂದ ಬೆಳಿಗ್ಗೆ 7.55 ಕ್ಕೆ ಹೊರಟು ಬಂಟ್ವಾಳದಲ್ಲಿ ಸಂಚಾರವನ್ನು ಅರ್ಧಕ್ಕೆ ನಿಲ್ಲಿಸಿದೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಮತ್ತು ಬರುವ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಮುಂಬೈ ಮಾರ್ಗದ ಜೋಕಟ್ಟೆ
ಈ ಮಧ್ಯೆ, ಬೆಳಿಗ್ಗೆ 11 ಗಂಟೆಗೆ ಮಂಗಳೂರು ಜಂಕ್ಷನ್‌ಗೆ ಆಗಮಿಸಿದ ರೈಲು ಸಂಖ್ಯೆ 16516 ಕಾರವಾರ-ಯಶವಂತಪುರ ವಾರಕ್ಕೆ ಮೂರು ದಿನ ಸಂಚರಿಸುವ ಎಕ್ಸ್‌ಪ್ರೆಸ್ ಬೆಂಗಳೂರು ಕಡೆಗೆ ಹೋಗಬೇಕಾಗಿತ್ತು. ಹಳಿ ಸಂಪೂರ್ಣ ತೆರವುಗೊಳ್ಳದಿದ್ದಲ್ಲಿ ಜೋಕಟ್ಟೆಗೆ ಪಡೀಲ್ ಬೈಪಾಸ್ ಮೂಲಕ ಹಾಸನ ಕಡೆಗೆ ಕೊಂಡೊಯ್ಯುವ ಸಾಧ್ಯತೆ ಇದೆ.
ಅದೇ ರೀತಿ, ಮಧ್ಯಾಹ್ನ 12.40ಕ್ಕೆ ಜಂಕ್ಷನ್‌ಗೆ ಆಗಮಿಸಬೇಕಿದ್ದ ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು ಬಂಟ್ವಾಳದಲ್ಲಿ ಸಂಚಾರ ಕೊನೆಗೊಳ್ಳುವ ಸಾಧ್ಯತೆಯಿದೆ.
ಭಾರೀ ಮಳೆಗೆ ಮಂಗಳೂರು ನಗರದಲ್ಲಿ ರಸ್ತೆಗಳು ಜಲಾವೃತವಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT