ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. 
ಕರ್ನಾಟಕ

KIA ಟರ್ಮಿನಲ್ 2; ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿ, ವಿಶೇಷತೆಗಳು

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.

ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಟರ್ಮಿನಲ್ 2 ಎರಡನೇ ರನ್‌ ವೇ, ಮಲ್ಟಿಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯಗಳು ಪ್ರಯಾಣಿಕರಿಗೆ ಲಭ್ಯವಾಗಲಿವೆ.
ಇದು ದೊಡ್ಡ ಕೃತಕ ಒಳಾಂಗಣ ಉದ್ಯಾನವನ್ನು ಹೊಂದಿದ್ದು, ಈ ಗಾರ್ಡನ್ ಬೆಂಗಳೂರನ್ನು ಭಾರತದ ಉದ್ಯಾನ ನಗರಿ ಎಂದು ಕರೆಯಲಾದ ಬಿರುದನ್ನು ಎತ್ತಿಹಿಡಿಯಲಿದೆ ಎಂದೇ ವ್ಯಾಖ್ಯಾನಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ಬೆಂಗಳೂರು ವಿಮಾನ ನಿಲ್ದಾಣವನ್ನು ಕ್ಯಾಂಪಸ್‌ನಾದ್ಯಂತ ನವೀಕರಿಸಬಹುದಾದ ಶಕ್ತಿಯನ್ನು ಬಳಸಿಕೊಂಡು 100% ಸುಸ್ಥಿರತೆಯೊಂದಿಗೆ ರಚಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಬೆಂಗಳೂರು ನಗರ ಸ್ಥಾಪಕ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಗೊಳ್ಳಲಿದೆ.
2ನೇ ಟರ್ಮಿನಲ್‌ನ ಮೊದಲ ಹಂತದ ನಿರ್ಮಾಣದ ಅಂದಾಜು ವೆಚ್ಚ 13,000 ಕೋಟಿ ರೂ ಎನ್ನಲಾಗಿದೆ. ಈ ಟರ್ಮಿನಲ್ ಸರಿಸುಮಾರು 2.5 ಲಕ್ಷ ಚದರ ಮೀಟರ್‌ನ ಬಿಲ್ಟ್-ಅಪ್ ಪ್ರದೇಶವನ್ನು ಹೊಂದಿರುತ್ತದೆ.
2ನೇ ಹಂತದಲ್ಲಿ ಈ ಟರ್ಮಿನಲ್‌ಗೆ ಇನ್ನೂ 4.41 ಲಕ್ಷ ಚ.ಮೀ ಹೊಸದಾಗಿ ಸೇರ್ಪಡೆಗೊಳ್ಳಲಿದೆ. ಹೊಸ ಟರ್ಮಿನಲ್‌ನ ಮೊದಲ ಹಂತವು ಒಂದು ವರ್ಷದಲ್ಲಿ 25 ಮಿಲಿಯನ್ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ನಿರೀಕ್ಷೆಯಿದೆ.
ಸ್ವಯಂ ಚೆಕ್-ಇನ್ ಮತ್ತು ಬ್ಯಾಗ್‌ಡ್ರಾಪ್ ಸೌಲಭ್ಯಗಳಂತಹ ಇತರ ಸೌಲಭ್ಯಗಳೊಂದಿಗೆ ಈ ಸೌಲಭ್ಯವು ಸುಂದರವಾದ ಒಳಾಂಗಣ ಉದ್ಯಾನವನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT