ಕರ್ನಾಟಕ

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಲಕ್ಷಾಂತರ ಮಂದಿ ಸಾಕ್ಷಿ, ಜೈಕಾರ, ಘೋಷಣೆಗಳೊಂದಿಗೆ ತಾಯಿ ಚಾಮುಂಡೇಶ್ವರಿಗೆ ನಮನ

Srinivasamurthy VN
ಬುಧವಾರ ಸಂಜೆ 5.37ಕ್ಕೆ ಅರಮನೆ ಆವರಣದಲ್ಲಿ ಚಾಲನೆ ದೊರಕಿದ ಬಳಿಕ ಜಂಬೂಸವಾರಿ ರಾಜಪಥವನ್ನು ಪ್ರವೇಶಿಸಿದಾಗ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು.
ಬುಧವಾರ ಸಂಜೆ 5.37ಕ್ಕೆ ಅರಮನೆ ಆವರಣದಲ್ಲಿ ಚಾಲನೆ ದೊರಕಿದ ಬಳಿಕ ಜಂಬೂಸವಾರಿ ರಾಜಪಥವನ್ನು ಪ್ರವೇಶಿಸಿದಾಗ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು.
ಮಧ್ಯಾಹ್ನ 2.34ಕ್ಕೆ ಅರಮನೆ ಹೊರ ಆವರಣದ ಕೋಟೆ ಆಂಜನೇಯ ಗುಡಿಯ ಮುಂದೆ ನಂದಿ ಧ್ವಜಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂಜೆ ಸಲ್ಲಿಸಿದ ಬಳಿಕ ಸ್ತಬ್ದಚಿತ್ರ ಮತ್ತು ಕಲಾತಂಡಗಳ ಮೆರವಣಿಗೆ ಆರಂಭವಾಯಿತು.
3ನೇ ಬಾರಿಗೆ ಅಭಿಮನ್ಯು ಆನೆ ದೇವಿ ಚಾಮುಂಡೇಶ್ವರಿ ವಿರಾಜಮಾನಳಾಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗಿದೆ. ಅಭಿಮನ್ಯುವಿನೊಂದಿಗೆ ಅರ್ಜುನ ನಿಶಾನೆ ಆನೆ, ಚೈತ್ರ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜಂಬೂ ಸವಾರಿಯಲ್ಲಿ ಸಾಗಲಿವೆ. ಒಟ್ಟು 9 ಆನೆಗಳು ರಾಜ ಬೀದಿಗಳಲ್ಲಿ ಸಾಗುತ್ತಿದೆ.
ಜಂಬೂಸವಾರಿಯನ್ನು ಅರಮನೆಯ ಹೊರಗಿನಿಂದ ವೀಕ್ಷಿಸಲು ಚಾಮರಾಜೇಂದ್ರ ವೃತ್ತ, ಕೆ.ಆರ್‌.ವೃತ್ತ, ಸಯ್ಯಾಜಿರಾವ್‌ ರಸ್ತೆಯಲ್ಲಿ ಸಾವಿರಾರು ಮಂದಿ ನೆರೆದಿದ್ದರು. ದೀಪಾಲಂಕಾರಕ್ಕೆಂದು ಅಳವಡಿಸಿದ್ದ ಕಂಬಗಳು, ಕಟೌಟ್‌ಗಳ ಮೇಲೂ ಅಪಾಯ ಲೆಕ್ಕಿಸದೆ ಕುಳಿತಿದ್ದರು.
ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌, ಎಸ್.ಎ.ರಾಮದಾಸ್ , ಮೇಯರ್ ಶಿವಕುಮಾರ್ , ಜಿಲ್ಲಾಧಿಕಾರಿ ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಚಂದ್ರ ಗುಪ್ತ, ವೇದಿಕೆಯಲ್ಲಿದ್ದರು.
ಆಕರ್ಷಕವಾದ ಸ್ತಬ್ದ ಚಿತ್ರಗಳು, ಪೊಲೀಸ್‌ ಪಡೆ, ಅಶ್ವಾರೋಹಿ ಪಡೆಗಳೊಂದಿಗೆ, ಮಂಗಳವಾದ್ಯ, ವೀರಗಾಸೆ, ಕತ್ತಿ ವರಸೆ, ನಗಾರಿ, ಡೊಳ್ಳು, ಕಂಸಾಳೆ, ತಾಳಮದ್ದಲೆ, ಪಟ ಕುಣಿತ, ಗೊಂಬೆ ಕುಣಿತ ಸೇರಿದಂತೆ 53 ಜನಪದ ಕಲಾ ತಂಡಗಳ ನೂರಾರು ಕಲಾವಿದರು ನೃತ್ಯ–ನಡಿಗೆಯ ಮೂಲಕ ಕಲೆ–ಸಾಂಸ್ಕೃತಿಕ ವೈಭವವನ್ನು ಸೃಷ್ಟಿಸಿ ಮೆರವಣಿಗೆಗ
ಈ ಬಾರಿ ವಿಶೇಷವಾಗಿ ನಟ ದಿ. ಪುನೀತ್​ ರಾಜಕುಮಾರ್​ ಭಾವಚಿತ್ರ ಇರುವ ಸ್ತಬ್ಧಚಿತ್ರ ಸೇರಿದೆ.
SCROLL FOR NEXT