ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. 
ಕರ್ನಾಟಕ

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಲಕ್ಷಾಂತರ ಮಂದಿ ಸಾಕ್ಷಿ, ಜೈಕಾರ, ಘೋಷಣೆಗಳೊಂದಿಗೆ ತಾಯಿ ಚಾಮುಂಡೇಶ್ವರಿಗೆ ನಮನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಬುಧವಾರ ಸಂಜೆ 5.37ಕ್ಕೆ ಅರಮನೆ ಆವರಣದಲ್ಲಿ ಚಾಲನೆ ದೊರಕಿದ ಬಳಿಕ ಜಂಬೂಸವಾರಿ ರಾಜಪಥವನ್ನು ಪ್ರವೇಶಿಸಿದಾಗ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು.
ಮಧ್ಯಾಹ್ನ 2.34ಕ್ಕೆ ಅರಮನೆ ಹೊರ ಆವರಣದ ಕೋಟೆ ಆಂಜನೇಯ ಗುಡಿಯ ಮುಂದೆ ನಂದಿ ಧ್ವಜಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂಜೆ ಸಲ್ಲಿಸಿದ ಬಳಿಕ ಸ್ತಬ್ದಚಿತ್ರ ಮತ್ತು ಕಲಾತಂಡಗಳ ಮೆರವಣಿಗೆ ಆರಂಭವಾಯಿತು.
3ನೇ ಬಾರಿಗೆ ಅಭಿಮನ್ಯು ಆನೆ ದೇವಿ ಚಾಮುಂಡೇಶ್ವರಿ ವಿರಾಜಮಾನಳಾಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗಿದೆ. ಅಭಿಮನ್ಯುವಿನೊಂದಿಗೆ ಅರ್ಜುನ ನಿಶಾನೆ ಆನೆ, ಚೈತ್ರ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜಂಬೂ ಸವಾರಿಯಲ್ಲಿ ಸಾಗಲಿವೆ. ಒಟ್ಟು 9 ಆನೆಗಳು ರಾಜ ಬೀದಿಗಳಲ್ಲಿ ಸಾಗುತ್ತಿದೆ.
ಜಂಬೂಸವಾರಿಯನ್ನು ಅರಮನೆಯ ಹೊರಗಿನಿಂದ ವೀಕ್ಷಿಸಲು ಚಾಮರಾಜೇಂದ್ರ ವೃತ್ತ, ಕೆ.ಆರ್‌.ವೃತ್ತ, ಸಯ್ಯಾಜಿರಾವ್‌ ರಸ್ತೆಯಲ್ಲಿ ಸಾವಿರಾರು ಮಂದಿ ನೆರೆದಿದ್ದರು. ದೀಪಾಲಂಕಾರಕ್ಕೆಂದು ಅಳವಡಿಸಿದ್ದ ಕಂಬಗಳು, ಕಟೌಟ್‌ಗಳ ಮೇಲೂ ಅಪಾಯ ಲೆಕ್ಕಿಸದೆ ಕುಳಿತಿದ್ದರು.
ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌, ಎಸ್.ಎ.ರಾಮದಾಸ್ , ಮೇಯರ್ ಶಿವಕುಮಾರ್ , ಜಿಲ್ಲಾಧಿಕಾರಿ ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಚಂದ್ರ ಗುಪ್ತ, ವೇದಿಕೆಯಲ್ಲಿದ್ದರು.
ಆಕರ್ಷಕವಾದ ಸ್ತಬ್ದ ಚಿತ್ರಗಳು, ಪೊಲೀಸ್‌ ಪಡೆ, ಅಶ್ವಾರೋಹಿ ಪಡೆಗಳೊಂದಿಗೆ, ಮಂಗಳವಾದ್ಯ, ವೀರಗಾಸೆ, ಕತ್ತಿ ವರಸೆ, ನಗಾರಿ, ಡೊಳ್ಳು, ಕಂಸಾಳೆ, ತಾಳಮದ್ದಲೆ, ಪಟ ಕುಣಿತ, ಗೊಂಬೆ ಕುಣಿತ ಸೇರಿದಂತೆ 53 ಜನಪದ ಕಲಾ ತಂಡಗಳ ನೂರಾರು ಕಲಾವಿದರು ನೃತ್ಯ–ನಡಿಗೆಯ ಮೂಲಕ ಕಲೆ–ಸಾಂಸ್ಕೃತಿಕ ವೈಭವವನ್ನು ಸೃಷ್ಟಿಸಿ ಮೆರವಣಿಗೆಗ
ಈ ಬಾರಿ ವಿಶೇಷವಾಗಿ ನಟ ದಿ. ಪುನೀತ್​ ರಾಜಕುಮಾರ್​ ಭಾವಚಿತ್ರ ಇರುವ ಸ್ತಬ್ಧಚಿತ್ರ ಸೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT