ಮೈಸೂರಿನಲ್ಲಿ ಜೆಡಿಎಸ್‌ ಪಂಚರತ್ನಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಹೆಚ್ ಡಿ ದೇವೇಗೌಡರು, ತಾವು ಪ್ರಧಾನಮಂತ್ರಿ ಆಗಿದ್ದಾಗ, ರೈತನ ಮಗನಾಗಿ ರೈತರ ಹಕ್ಕುಗಳ ರಕ್ಷಣೆಗೆ ಮಾಡಿದ ಕಾರ್ಯಗಳನ್ನು ಬಿಚ್ಚಿಟ್ಟರು. 
ಕರ್ನಾಟಕ

ಜೆಡಿಎಸ್‌ ಪಂಚರತ್ನ ಯಾತ್ರೆಯಲ್ಲಿ ಹೆಚ್ ಡಿ ದೇವೇಗೌಡ ಭಾಗಿ

ಮೈಸೂರಿನಲ್ಲಿ ನಿನ್ನೆ ಭಾನುವಾರ ನಡೆದ ಜೆಡಿಎಸ್‌ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಹೆಚ್ ಡಿ ದೇವೇಗೌಡ ಭಾವುಕರಾದರು. 

ಪ್ರಧಾನಮಂತ್ರಿಯಾಗಿ ಆಡಳಿತ ನಡೆಸಿದ ಇಷ್ಟು ವರ್ಷಗಳ ನಂತರವೂ ದೇಶ, ವಿದೇಶದ ಜನರು ಸ್ಮರಿಸುತ್ತಾರೆ. ಹಲವು ಮಹನೀಯರು ಹುಟ್ಟಿದ ನಾಡಿನಲ್ಲಿ ಜಗತ್ತಿನ ಏಳಿಗೆಗಾಗಿ ಒಂದು ಸಣ್ಣ ದೀಪವನ್ನು ಹಚ್ಚಿದ್ದೇನೆ ಎಂಬ ತೃಪ್ತಿಯಿದೆ ಎಂದು ಭಾವುಕರಾದರು.
ಜಾತಿ, ಮತ ಆಧಾರದ ಮೇಲೆ ಅಧಿಕಾರ ಹಿಡಿಯುವುದು ನಿಂತಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಹಾಗೂ ರೈತರ ಹಕ್ಕುಗಳಿಗೆ ನ್ಯಾಯ ಒದಗಿಸಿದ್ದೇನೆ. ರೈತರ ಹಕ್ಕಿಗಾಗಿ, ಕಾವೇರಿ, ಗಂಗೆ, ಕೃಷ್ಣೆ ಸೇರಿ ಹಲವು ನೀರಾವರಿ ಯೋಜನೆಗಳಿಗೆ ಮಾಡಿದ್ದೇನೆ ಎಂದರು.
ನಾನು ಪ್ರಧಾನಮಂತ್ರಿ ಆಗಿದ್ದಾಗ ಕಾನೂನು ರೂಪಿಸಲು ಮುಂದಾದಾಗ ಅಧಿಕಾರ ಕಳೆದುಕೊಂಡೆನು. ನಂತರ ಅಧಿಕಾರಕ್ಕೆ ಬಂದವರು ಕಾನೂನು ರೂಪಿಸಿದರೂ, ಅದಕ್ಕೆ ಯೋಜನೆ ಹಾಕಿದ್ದ ನನ್ನ ಹೆಸರು ಹೇಳುವುದನ್ನೇ ಮರೆತುಬಿಟ್ಟರು ಎಂದು ಹೇಳಿದರು.
ನನ್ನ 70 ವರ್ಷಗಳ ಅಧಿಕಾರದಲ್ಲಿ ಎಂದಿಗೂ ಕೊಟ್ಟ ಭರವಸೆ ಈಡೇರಿಸಲು ವಿಫಲವಾಗಿಲ್ಲ. ಒಂದು ವೇಳೆ ನಾನು ಕೊಟ್ಟ ಭರವಸೆ ಈಡೇರಿಸಲಿದ್ದಾಗ ರಾಜಿನಾಮೆ ಕೊಟ್ಟಿದ್ದೇನೆ. ನಾನು ಎಲ್ಲ ಕಾಲಕ್ಕೂ ಅಭಿವೃದ್ಧಿ ಮಂತ್ರ ಜಪಿಸಿದ್ದೇನೆ. ನಾನು ಬೆರಳೆಣಿಕೆ ವರ್ಷಗಳಷ್ಟು ಮಾತ್ರ ಅಧಿಕಾರದಲ್ಲಿ ಇದ್ದು, ದೇವರಾಣೆಗೂ ನಾನು ಜನರ ಅಭಿವೃದ
ರಾಜ್ಯದಲ್ಲಿ ಸುವರ್ಣ ಯುಗವನ್ನು ಮರಳಿ ತರಲು ಎರಡೂ ರಾಷ್ಟ್ರೀಯ ಪಕ್ಷಗಳನ್ನು (ಕಾಂಗ್ರೆಸ್ ಮತ್ತು ಬಿಜೆಪಿ) ತಿರಸ್ಕರಿಸಿ, ಜೆಡಿಎಸ್ ಪಕ್ಷಕ್ಕೆ ಬಹುಮತವನ್ನು ನೀಡುವಂತೆ ಮತದಾರರಿಗೆ ಹೆಚ್.ಡಿ.ಕುಮಾರಸ್ವಾಮಿಯವರು ಮನವಿ ಮಾಡಿದರು.
ರಾಜ್ಯದಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭವನ್ನು ನೀವು ರೂಪಿಸಿದ್ದೀರಿ. ಕುಮಾರಸ್ವಾಮಿ ತಮ್ಮ ಆರೋಗ್ಯ ಲೆಕ್ಕಿಸದೇ ರಾಜ್ಯ ಸಂಚಾರ ಮಾಡಿದ್ದಾರೆ. ಅವರು ರಾಜ್ಯ ಸುತ್ತಾಡಿದ್ದನ್ನು ನೊಡಿ ಕಣ್ಣು ತುಂಬಿಕೊಂಡಿದ್ದೇನೆ. ನನ್ನ ಆರೋಗ್ಯ ಸರಿಯಾಗಿದ್ದರೆ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೆನು.
ಟ್ರ್ಯಾಲಿಯಲ್ಲಿ ದೇವೇಗೌಡರನ್ನು ಅವರ ಮಕ್ಕಳು, ಮೊಮ್ಮಕ್ಕಳು ಕೂರಿಸಿ ಜನರ ಮಧ್ಯೆ ಕರೆದುಕೊಂಡು ಹೋದರು
ಭಗವಂತನು ಈ ಕಾರ್ಯಕ್ರಮದಲ್ಲಿ ಒಮ್ಮೆಯಾದರೂ ಭಾಗಿಯಾಗುವಂತೆ ಮಾಡಪ್ಪಾ ಎಂದು ಬೇಡಿಕೊಂಡಿದ್ದೆನು. ನನ್ನ ಆಸೆಯನ್ನು ಕೇಳಿಕೊಂಡ ಭಗವಂತ ನನ್ನನ್ನು ನಿಮ್ಮಮುಂದೆ ನಿಲ್ಲಿಸಿದ್ದಾನೆ. ನಾನು ಭಗವಂತನ ಆಶೀರ್ವಾದದ ಭಾಗವಾಗಿದ್ದೇನೆ. ಆದರೆ, ನನ್ನ ಶಕ್ತಿ ನೀವು ಆಗಿದ್ದೀರಿ ಎಂದರು
ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾಗ ಬೆಂಗಳೂರು- ಮೈಸೂರು ಹೆದ್ದಾರಿ ಅಭಿವೃದ್ಧಿಗೆ ಏನು ತೀರ್ಮಾನ ಕೈಗೊಂಡಿದ್ದೇನೆ ಎಂಬುದು ಗೊತ್ತಿದೆ. ಅದರೆ, ನಾನು ಪ್ರಚಾರವನ್ನು ಪಡೆಯುವುದಿಲ್ಲ ಎಂದರು.
ಜಾತಿ, ಮತ ಆಧಾರದ ಮೇಲೆ ಅಧಿಕಾರ ಹಿಡಿಯುವುದು ನಿಂತಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಹಾಗೂ ರೈತರ ಹಕ್ಕುಗಳಿಗೆ ನ್ಯಾಯ ಒದಗಿಸಿದ್ದೇನೆ. ರೈತರ ಹಕ್ಕಿಗಾಗಿ, ಕಾವೇರಿ, ಗಂಗೆ, ಕೃಷ್ಣೆ ಸೇರಿ ಹಲವು ನೀರಾವರಿ ಯೋಜನೆಗಳಿಗೆ ಮಾಡಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್‌; ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ, ಸಿದ್ಧತೆ ಆರಂಭ: CM ಸಿದ್ದರಾಮಯ್ಯ

ರಾಹುಲ್ ಗಾಂಧಿ ಪ್ರಭು ಶ್ರೀರಾಮನಿದ್ದಂತೆ: ಶೋಷಿತರಿಗೆ ನ್ಯಾಯ ಒದಗಿಸುತ್ತಿದ್ದಾರೆ - ನಾನಾ ಪಟೋಲೆ

ಕೋಗಿಲು ತೆರವು: ಕೇವಲ 90 ಜನರಿಗೆ ಮಾತ್ರ ಮನೆ ಹಂಚಿಕೆ - ಸಚಿವ ಭೈರತಿ ಸುರೇಶ್

ಬಾಂಗ್ಲಾದೇಶದಲ್ಲಿ ಜೈಶಂಕರ್ ಹ್ಯಾಂಡ್ ಶೇಕ್: ಪಾಕ್ ವರದಿಗಳು ದೊಡ್ಡ "ಜೋಕ್" ಎಂದ ಮಾಜಿ ರಾಯಭಾರಿ!

SCROLL FOR NEXT