ಇಸಿಸ್ ಉಗ್ರ ಸಂಘಟನೆಯೊಂದಿಗೆ ಟ್ವಿಟರ್ ಮೂಲಕ ನಂಟು ಬೆಳೆಸಿದ್ದ ಆರೋಪದ ಮೇಲೆ ಡಿಸೆಂಬರ್ 13ರಂದು ಮೆಹ್ದಿ ಮಸ್ರೂರ್ ಬಿಸ್ವಾಸ್ನನ್ನು ಸಿಸಿಬಿ ಪೊಲೀಸರು ಜಾಲಾಹಳ್ಳಿಯ ಅಪಾರ್ಟ್ಮೆಂಟ್ವೊಂದರಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದರು. ಪ್ರಕರಣ ಸಂಬಂಧ ಮೆಹ್ದಿಯನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. 
ಹಿನ್ನೋಟ 2014

ಸದ್ದು ಮಾಡಿದ ಅಪರಾಧ ಸುದ್ದಿಗಳು 2014

ಮಾಜಿ ಕೇಂದ್ರ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ದೆಹಲಿಯ ಲೀಲಾ ಹೋಟೆಲ್‌ನಲ್ಲಿ ಜನವರಿ 15 ರಂದು ನಿಗೂಡ ರೀತಿಯಲ್ಲಿ ಸಾವನ್ನಪ್ಪಿದರು. ಈ ಸಂಬಂಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡರು. ಆದರೆ ಇಲ್ಲಿಯವರೆಗೆ ಸುನಂದಾ ಪುಷ್ಕರ್ ಅವರ ಸಾವಿನ ರಹಸ್ಯ ನಿಗೂಡವಾಗಿಯೇ ಉಳಿದಿದೆ.
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ವಿರುದ್ದದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 18 ವರ್ಷಗಳ ಸುಧೀರ್ಘ ವಿಚಾರಣೆಯ ಬಳಿಕ ಅಕ್ಟೋಬರ್ 27 ರಂದು ಪರಪ್ಪನ ಅಗ್ರಹಾರದಲ್ಲಿನ ಬೆಂಗಳೂರು ವಿಶೇಷ ನ್ಯಾಯಾಲಯ ಜಯಲಲಿತಾ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರುಪಾಯಿ ದಂಡ ವಿಧಿಸಿ ಮಹತ್ವದ
ಡಿಸೆಂಬರ್ 16ರಂದು ಪಾಕಿಸ್ತಾನದ ಪೇಶಾವರದಲ್ಲಿನ ಸೈನಿಕ ಶಾಲೆಗೆ ತಾಲಿಬಾನಿ ಉಗ್ರರು ದಾಳಿ ನಡೆಸಿ 130 ಶಾಲಾ ಮಕ್ಕಳು ಸೇರಿದಂತೆ 140ಕ್ಕೂ ಹೆಚ್ಚು ಮಂದಿಯನ್ನು ಬಲಿತೆಗೆದುಕೊಂಡರು. ಉಗ್ರರ ಈ ಪೈಶಾಚಿಕ ಕೃತ್ಯಕ್ಕೆ ಭಾರತ ಸೇರಿದಂತೆ ವಿಶ್ವದ ಎಲ್ಲ ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿದವು.
ತೀರ್ಥಹಳ್ಳಿಯ ನಂದಿತ ಸಾವು ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಅಕ್ಟೋಬರ್ 29 ರಂದು ವಿಷಪ್ರಾಶನಕ್ಕೆ ಒಳಗಾಗಿದ್ದ ನಂದಿತಾ ನವೆಂಬರ್ 1 ರಂದು ಉಡುಪಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಅಪ್ರಾಪ್ತ ಬಾಲಕಿಯನ್ನು ಮೂವರು ದುಷ್ಕರ್ಮಿಗಳು ಅಪಹರಿಸಿ ವಿಷಪ್ರಾಶನ ಮಾಡಿದ್ದರು ಎನ್ನಲಾಗಿದ್ದು, ಸರ್ಕಾರ ಕೂ
ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಹುನಗುಂದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ದ ಜುಲೈ 2 ರಂದು ದೂರು ದಾಖಲಿಸಲಾಯಿತು. ಪೊಲೀಸ್ ಪೇದೆಗಳಾಗಿದ್ದ ಕಿರಣ್, ಪ್ರಶಾಂತ್ ನಾಯಕ್ ಕಾಶಪ್ಪನವರ್ ಹಲ್ಲೆ ನಡೆಸಿದ್ದ ಕುರಿತು ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದರು.
'ಕೊಟ್ಲಲ್ಲಪ್ಪೋ ಕೈ' ಕುಖ್ಯಾತಿಯ ನಟಿ ನಯನಾ ಕೃಷ್ಣಾ, ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡಿದಳು ಎಂದು ಆಕೆಯ ವಿರುದ್ಧ ಬೆಂಗಳೂರಿನ ವೈದ್ಯರೊಬ್ಬರು ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಆಕೆಯ ಪತ್ತೆಗಾಗಿ ಸಿಸಿಬಿ ಪೊಲೀಸರು ಜಾಲಾ ಬೀಸಿದ್ದರು. ಹಲವು ದಿನಗಳ ಬಳಿಕ ಅಕ್ಟೋಬರ್ 7 ರಂದು ಬಂಧಿಸಿದ್ದರು. ಪ್ರಕರಣ ಸಂಬಂಧ ನಯನಾ ಕೃ
2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಕೇರಳದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖಂಡ ಅಬ್ದುಲ್ ನಾಸಿರ್ ಮದನಿಗೆ ಜುಲೈ 11ರಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿತು. 2008ರ ಜುಲೈ 25ರಂದು ಬೆಂಗಳೂರು ಸರಣಿ ಬಾಂಬ್ ಸ್ಫೋಟದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು
ಸೆ.3 ಬೆಂಗಳೂರಿನಲ್ಲಿ ಬ್ರೈನ್ ಡೆತ್‌ನಿಂದ ಮೃತಪಟ್ಟಿದ್ದ ಮಹಿಳೆಯೊಬ್ಬರ ಜೀವಂತ ಹೃದಯವನ್ನು ಚೆನ್ನೈನ ರೋಗಿಯೊಬ್ಬರಿಗೆ 6 ಗಂಟೆಗಳಲ್ಲಿ ಹೃದಯ ಅಳವಡಿಸುವಲ್ಲಿ ಉಭಯ ರಾಜ್ಯಗಳ ವೈದ್ಯ ತಂಡ ಯಶಸ್ವಿಯಾಯಿತು. ಬ್ರೈನ್ ಡೆತ್‌ಗೆ ಒಳಗಾಗಿದ್ದ ವ್ಯಕ್ತಿಯ ಹೃದಯದ ಅವಧಿ ಕೇವಲ 6 ಗಂಟೆಗಳಾಗಿದ್ದು, ಅಷ್ಟರಲ್ಲಿ ಬೆಂಗಳೂರಿನಿಂದ
ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಭಾರತೀಯ ಸ್ವಾಮೀಜಿ ವಿರುದ್ಧ ಬೆಂಗಳೂರು ಮೂಲದ ದಿವಾಕರ ಶಾಸ್ತ್ರೀ ಮತ್ತು ಪ್ರೇಮಲತಾ ದಂಪತಿ, ಲೈಂಗಿಕ ಕಿರುಕುಳ ಆರೋಪದ ಮೇಲೆ ದೂರು ಸಲ್ಲಿಸಿದ್ದರು. ಈ ಸಂಬಂಧ ಆಗಸ್ಟ್ 27 ರಂದು ರಾಘವೇಶ್ವರ ಸ್ವಾಮಿಗಳ ವಿರುದ್ಧ ಐಪಿಸಿ ಸೆಕ್ಷನ್ 506, 354ಎ ಅಡಿಯಲ್ಲಿ ಬನಶಂಕರಿ ಪೊಲೀಸರು ಎಫ್‌
ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಸಿಬ್ಬಿಂದಿ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಅಂತಿಮ ದರ್ಶನಕ್ಕೆ ಬಂದಿದ್ದ ಐಎಎಸ್ ಅಧಿಕಾರಿ ರಶ್ಮಿ ಅವರ ಮೇಲೆ, ಮೃತ ವೆಂಕಟೇಶ್ ಸಂಬಂಧಿಕರು ಅ.15 ರಂದು ಹಲ್ಲೆ ನಡೆಸಿದ್ದರು. ಸ್ಥಳದಲ್ಲಿದ್ದ ಪೊಲೀಸರು ರಶ್ಮಿ ಅವರನ್ನು ಕೂಡಲೇ ಸ್ಥಳದಿಂದ ಕರೆದೊಯ್ದರು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, 2 ಸಾವಿರಕ್ಕೂ ಅಧಿಕ ಸರ್ಕಾರಿ ವೈದ್ಯರು ಸರ್ಕಾರದ ವಿರುದ್ಧ ಸಾಮೂಹಿಕ ಮುಷ್ಕರ ನಡೆಸಿದರು. ವೈದ್ಯರ ಮುಷ್ಕರದಿಂದಾಗಿ ಹೈಕೋರ್ಟ್ ಮಧ್ಯಪ್ರವೇಶಿಸಿ, ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು.
ಕೇಂದ್ರ ಸಚಿವ ಸದನಂದಾಗೌಡ ಪುತ್ರ ಕಾರ್ತಿಕ್ ಗೌಡ ವಿರುದ್ಧ ನಟಿ ಮೈತ್ರಿಯಾ ಗೌಡ ಆಗಸ್ಟ್ 30 ರಂದು ಬೆಂಗಳೂರಿನ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಮತ್ತು ಅತ್ಯಾಚಾರ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗಿ ಹಲವು ದಿನಗಳ ಕಾಲ ಕಣ್ಮರೆಯಾಗಿದ್ದ ಕಾರ್ತಿಕ್‌ಗೌಡ ಪೊಲೀಸರ ಮುಂದೆ ಹಾಜರಾಗಿ ಜಾಮೀನು ಅರ್ಜಿ ಸಲ್ಲಿ
ನೈತಿಕ ಪೊಲೀಸ್‌ಗಿರಿ ವಿರೋಧಿಸಿ ಕೇರಳದ ಕೊಚ್ಚಿಯಲ್ಲಿ ಕಿಸ್ ಆಫ್ ಲವ್ ಪ್ರತಿಭಟನೆ ಆಯೋಜಿಸಲಾಗಿತ್ತು. ಇದನ್ನು ವಿರೋಧಿಸಿದ ಪೊಲೀಸರು ನೂರಾರು ಯುವಕ ಯುವತಿಯರನ್ನು ಬಂಧಿಸಿದ್ದರು. ಈ ಬಳಿಕ ಬೆಂಗಳೂರಿನಲ್ಲಿ ನವೆಂಬರ್ 22 ರಂದು ಕಿಸ್ ಆಫ್ ಲವ್ ಪ್ರತಿಭಟನೆ ಅನುಮತಿ ನೀಡುವಂತೆ ಸ್ವಯಂ ಸೇವಕ ಸಂಸ್ಥೆ ಅನುಮತಿ ಕೋರಿತ್ತು
ಬೆಂಗಳೂರಿನ ಆರ್ಕಿಡ್ಸ್ ಶಾಲೆಯ 3 ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಘಟನೆ ಇಡೀ ಬೆಂಗಳೂರನ್ನು ತಲ್ಲಣಗೊಳಿಸಿತ್ತು. ಆರೋಪಿಯನ್ನು ಪತ್ತೆ ಹಚ್ಚುವಂತೆ ಪೋಷಕರು ಸಾಮೂಹಿಕವಾಗಿ ಪ್ರತಿಭಟನೆ ನಡೆಸಿದರು. ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದಾಗಿ, ಆರೋಪಿ ಪತ್ತೆಯಾದನು. ಶಾಲೆ ಸಹಾಯಕ ಸಿಬ್ಬಂದಿ ಗುಂಡಪ್ಪ ಎಂಬಾತನ
ಅಕ್ರಮ ಗಣಿಗಾರಿಕೆ ಸಂಬಂಧ ಸಿಬಿಐ ಪೊಲೀಸರು 2011 ಸೆ.5 ರಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯನ್ನು ಬಂಧಿಸಿದ್ದರು. ಅಕ್ರಮ ಗಣಿಗಾರಿಯ ಸಂಬಂಧ ರೆಡ್ಡಿ ವಿರುದ್ದ ಒಟ್ಟು 8 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಬೇಲೆಕೇರಿ ಅಕ್ರಮ ಅದಿರು ನಾಪತ್ತೆ, ಒಬಳಾಪುರಂ ಅಕ್ರಮ ಗಣಿಗಾರಿಕೆ, ಬೇಲ್‌ಗಾಗಿ ಡೀಲ್ ಸೇರಿದಂತೆ ರೆಡ
ಡಿ.15 ರಂದು ದೆಹಲಿಯಲ್ಲಿ ಎಂಎನ್ಸಿ ಕಂಪನಿಯ ಮಹಿಳಾ ಉದ್ಯೋಗಿಯನ್ನು ಉಬರ್ ಟ್ಯಾಕ್ಸಿ ಸಂಸ್ಥೆಯ ಚಾಲಕ, ತನ್ನ ಕಾರಿನಲ್ಲೇ ಅತ್ಯಾಚಾರ ಎಸಗಿ ಪರಾರಿಯಾಗಿದ್ದನು. ಘಟನೆ ಸಂಬಂಧ ಯುವತಿ ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದಳು. ಘಟನೆ ಸಂಭವಿಸಿ 48 ಗಂಟೆಗಳಲ್ಲಿ ದೆಹಲಿ ಪೊಲೀಸರು ಅತ್ಯಾಚಾರಿ ಶಿವಕುಮಾರ್ ಯಾದವ್(32)ನನ್ನು
2008ರ ಸರಣಿ 4 ಚರ್ಚ್ ಸ್ಫೋಟ ಪ್ರಕರಣ ಸಂಬಂಧ ದೀನ್‌ದಾರ್ ಸಂಘಟನೆಯ 22 ಮಂದಿ ಆರೋಪಿಗಳಿಗೆ ಬೆಂಗಳೂರು ಹೈಕೋರ್ಟ್ ಡಿಸೆಂಬರ್ 17 ರಂದು ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

SCROLL FOR NEXT