2014ರ ಏಪ್ರಿಲ್ 8 ರಂದು ಈಶಾನ್ಯ ದೆಹಲಿಯ ಸುಲ್ತಾನಪುರಿಯಲ್ಲಿ ಲೋಕಸಭಾ ಅಭ್ಯರ್ಥಿ ರಾಖಿ ಬಿರ್ಲಾ ಪರ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆಟೋ ಚಾಲಕನೊಬ್ಬ ಕಪಾಳಮೋಕ್ಷ ಮಾಡಿದ್ದ.ಮಾರ್ಚ್ 28ರಂದು ಹರಿಯಾಣದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಕೇಜ್ರಿವಾಲ್ ಬೆನ್ನಿನ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದ.ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ್ದ ಹಿನ್ನೆಲೆಯಲ್ಲಿ ಮಾರ್ಚ್ 25 ಉತ್ತರಪ್ರದೇಶದ ವಾರಣಾಸಿಯಲ್ಲಿ ಜನಭಿಪ್ರಾಯ ಸಂಗ್ರಹಣೆಗೆ ಬಂದಿದ್ದ ಸಂದರ್ಭದಲ್ಲಿ ಕೇಜ್ರಿವಾಲ್ಗೆ ವ್ಯಕ್ತಿಯೋರ್ವ ಕಪ್ಪುಮಸಿ ಎರಚಿದ್ದ.