ತಮಿಳು ನಾಡಿನ ಕೂನೂರು ಬಳಿ ಅಪಘಾತಕ್ಕೀಡಾಗಿ ಮೃತಪಟ್ಟ ಭಾರತದ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಇತರ 11 ಮಂದಿ ಸೇನಾಧಿಕಾರಿಗಳ ಪಾರ್ಥಿವ ಶರೀರವನ್ನು ದೆಹಲಿಗೆ ಕರೆತಂದು ಪಲಾಮಾ ವಾಯುನೆಲೆಯಲ್ಲಿ ಇರಿಸಲಾಯಿತು. ಗಣ್ಯರು ನಿನ್ನೆ ಪಾರ್ಥಿವ ಶರೀರಕ್ಕೆ ಅಂತಿಮ ನಮನ 
ದೇಶ

ಭಾರತ ಮಾತೆಯ ಹೆಮ್ಮೆಯ ಪುತ್ರರಿಗೆ ಅಂತಿಮ ನಮನ 

ತಮಿಳು ನಾಡಿನ ಕೂನೂರು ಬಳಿ ಅಪಘಾತಕ್ಕೀಡಾಗಿ ಮೃತಪಟ್ಟ ಭಾರತದ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಇತರ 11 ಮಂದಿ ಸೇನಾಧಿಕಾರಿಗಳ ಪಾರ್ಥಿವ ಶರೀರಕ್ಕೆ ಗಣ್ಯರು ಅಂತಿಮ ನಮನ ಸಲ್ಲಿಸಿದರು. 

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿನ್ನೆ ದೆಹಲಿಯ ಪಲಾಮ ವಾಯುನೆಲೆಯಲ್ಲಿ ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ 11 ಮಂದಿ ಸೇನಾಧಿಕಾರಿಗಳಿಗೆ ಅಂತಿಮ ನಮನ ಸಲ್ಲಿಸಿ, ದೇಶ ಸೇನಾಧಿಕಾರಿಗಳ ಕೊಡುಗೆಯನ್ನು, ದೇಶಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದರು.
ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ದೆಹಲಿ ಕಂಟೋನ್ಮೆಂಟ್ ನ ಬ್ರಾರ್ ಸ್ಕ್ವಾರ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.
ಜನರಲ್ ಬಿಪಿನ್ ರಾವತ್ ಅವರ ಮಕ್ಕಳಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ
ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ದೆಹಲಿ ಕಂಟೋನ್ಮೆಂಟ್ ನ ಬ್ರಾರ್ ಸ್ಕ್ವಾರ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಬಿಪಿನ್ ರಾವತ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಂತಿಮ ನಮನ ಸಲ್ಲಿಸಿದರು.
ಭಾರತೀಯ ಸೇನಾಪಡೆ ಮುಖ್ಯಸ್ಥ ಜನರಲ್ ಎಂ ಎಂ ನರವಣೆ
ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಅವರು ಸಹ ಅಂತಿಮ ನಮನ ಸಲ್ಲಿಸಿದರು.
ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಅವರು ಅಂತಿಮ ನಮನ ಸಲ್ಲಿಸಿದರು.
ಭೂತಾನ್ ದೊರೆಯಿಂದ ಜ.ಬಿಪಿನ್ ರಾವತ್ ಮತ್ತು ಅವರ ಪತ್ನಿಯವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ
ಇಂದು ಬೆಳಗ್ಗೆ ಅಂತ್ಯಕ್ರಿಯೆಯಾದ ಬ್ರಿಗೇಡಿಯರ್ ಲಖ್ವಿಂದರ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಅವರ ಪತ್ನಿಯಿಂದ ಅಂತಿಮ ನಮನ
ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಪತನಕ್ಕೀಡಾದ ನಂತರದ ದೃಶ್ಯ
ದೆಹಲಿಯ ಪನಾಮಾ ವಾಯುನೆಲೆಯಲ್ಲಿ ಸೇನಾಧಿಕಾರಿಗಳ ಪಾರ್ಥಿವ ಶರೀರವನ್ನಿಡಲಾಗಿದ್ದು ಇಂದು ಮಧ್ಯಾಹ್ನದಿಂದ ದೆಹಲಿಯ ರಾಜಪಥದಲ್ಲಿ ಮೆರವಣಿಗೆ ಸಾಗಲಿದೆ
ಪನಾಮಾ ವಾಯುನೆಲೆಯಲ್ಲಿ ಇಟ್ಟಿರುವ ಸೇನಾಧಿಕಾರಿಗಳ ಪಾರ್ಥಿವ ಶರೀರಗಳು
ಜನರಲ್ ಬಿಪಿನ್ ರಾವತ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT