ಫೆ.03 ರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬೆಂಗಳೂರಿನ ಯಲಹಂಕಾ ವಾಯುನೆಲೆಯಲ್ಲಿ ಏರೋ ಇಂಡಿಯಾ ಶೋ-2021 ಕ್ಕೆ ಚಾಲೆನೆ ನೀಡಿದ್ದರು. 
ದೇಶ

ಏರೋ ಇಂಡಿಯಾ-2021: ಯುದ್ಧ ವಿಮಾನ ತೇಜಸ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ

ಏರೋ ಇಂಡಿಯಾ ಶೋ-2021 ರ ಎರಡನೇ ದಿನದಂದು ಲಘು ಯುದ್ಧ ವಿಮಾನ 'ತೇಜಸ್' ನಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ವಾಯು ಸೇನಾ ಸಿಬ್ಬಂದಿಯೊಂದಿಗೆ ಹಾರಾಟ ನಡೆಸಿದರು. 

ಏರೋ ಇಂಡಿಯಾ ಶೋ-2021 ರಲ್ಲಿ ಲಘು ಯುದ್ಧ ವಿಮಾನ ತೇಜಸ್ ಆಕರ್ಷಣೆಯ ಕೇಂದ್ರಬಿಂದುವಾಗಿದ್ದು, ಉದ್ಘಾಟನೆಯ ದಿನದಂದು 48,000 ಕೋಟಿ ರೂಪಾಯಿ ವೆಚ್ಚದಲ್ಲಿ 83 ತೇಜಸ್ ವಿಮಾನಗಳ ಖರೀದಿಗೆ ಹೆಚ್ಎಎಲ್-ಕೇಂದ್ರ ಸರ್ಕಾರದ ನಡುವೆ ಒಪ್ಪಂದ ನಡೆದಿದೆ.
ಏರೋ ಇಂಡಿಯಾ ಪ್ರದರ್ಶನಕ್ಕೆ ಎರಡನೇ ದಿನವಾದ ಫೆ.04 ರಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದು ಲಘು ಯುದ್ಧ ವಿಮಾನ ತೇಜಸ್ ನಲ್ಲಿ ಹಾರಾಟ ನಡೆಸಿದ್ದು ವಿಶೇಷವಾಗಿತ್ತು.
ಕೇಂದ್ರ ಸರ್ಕಾರ ಹೆಚ್ಎಎಲ್ ನಿಂದ 48,000 ಕೋಟಿ ರೂ ವೆಚ್ಚದಲ್ಲಿ ತೇಜಸ್ ವಿಮಾನಗಳನ್ನು ಖರೀದಿಸಲು ನಿರ್ಧರಿಸಿರುವುದಕ್ಕೆ ತೇಜಸ್ವಿ ಸೂರ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ವಾಯು ಸೇನಾ ಸಿಬ್ಬಂದಿಯೊಂದಿಗೆ ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ ಸುಮಾರು 30 ನಿಮಿಷಗಳ ಕಾಲ ತೇಜಸ್ ಯುದ್ಧ ವಿಮಾನದಲ್ಲಿದ್ದರು
ದೇಶೀಯವಾಗಿ ತಯಾರಾಗಿರುವ ತೇಜಸ್ ವಿಮಾನವನ್ನು ಖರೀದಿಸುವ ಮೂಲಕ ಬೆಂಗಳೂರು ನಗರವನ್ನು ವಿಶ್ವಮಟ್ಟದ ತಂತ್ರಜ್ಞಾನ ಮತ್ತು ರಕ್ಷಣಾ ಕ್ಷೇತ್ರದ ಅಗ್ರಗಣ್ಯ ನಗರವನ್ನಾಗಿ ಮಾರ್ಪಡಿಸಲು ಪಣತೊಟ್ಟಿರುವ ಸರ್ಕಾರದ ಕ್ರಮವನ್ನು ಸಂಸದರು ಸ್ವಾಗತಿಸಿದ್ದಾರೆ.
ಕೇಂದ್ರ ಸರ್ಕಾರದ ಈ ಕ್ರಮದಿಂದಾಗಿ ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಹತ್ವಾಕಾಂಕ್ಷಿ ಯೋಜನೆ ''ಮೇಕ್ ಇನ್ ಇಂಡಿಯಾ'' ಗೆ ಉತ್ತೇಜನ ಸಿಗಲಿದೆ ಎಂದು ಸಂಸದರು ಇದೇ ವೇಳೆ ಹೇಳಿದ್ದಾರೆ.
48000 ಕೋಟಿ ರೂಪಾಯಿ ಯೋಜನೆಯಿಂದ 600 ಸಂಸ್ಥೆಗಳು ಅಥವಾ ಎಂಎಸ್ಎಂಇ ಗಳು ಯುದ್ಧ ವಿಮಾನ ತಯಾರಿಕೆಯಲ್ಲಿ ತೊಡಗಲಿವೆ. ಬೆಂಗಳೂರಿನಲ್ಲಿ ಕೈಗಾರಿಕೆಗಳು ಸುಧಾರಣೆಯಾಗಲಿದ್ದು, ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.
ತೇಜಸ್ ಕನಸು ನನಸಾಗುವುದಕ್ಕೆ ಬೆಂಬಲಿಸಿದ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೂ ತೇಜಸ್ವಿ ಸೂರ್ಯ ಇದೇ ವೇಳೆ ಧನ್ಯವಾದ ಅರ್ಪಿಸಿದ್ದಾರೆ
ತೇಜಸ್ ಯುದ್ಧವಿಮಾನವನ್ನು ಹೆಚ್ಚು ರಫ್ತು ಮಾಡುವ ಮೂಲಕ ವಿಶ್ವ ದರ್ಜೆಯ ಬ್ರಾಂಡ್ ನ್ನಾಗಿಸಬೇಕೆಂದು ತೇಜಸ್ವಿ ಸೂರ್ಯ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT