ನೂತನ ಮೋದಿ ಸಂಪುಟದಲ್ಲಿ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಕ್ಯಾಬಿನೆಟ್ ಸಚಿವರಾಗಿ ಮುಂದುವರೆದಿದ್ದು, ಏಳು ಮಹಿಳಾ ಸಚಿವರು ರಾಜ್ಯ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. 
ದೇಶ

ಇವರೇ ನೋಡಿ ನೂತನ ಮೋದಿ ಸಂಪುಟದ 11 ಮಹಿಳಾ ಸಚಿವರು!

ನೂತನ ಮೋದಿ ಸಂಪುಟದಲ್ಲಿ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಕ್ಯಾಬಿನೆಟ್ ಸಚಿವರಾಗಿ ಮುಂದುವರೆದಿದ್ದು, ಏಳು ಮಹಿಳಾ ಸಚಿವರು ರಾಜ್ಯ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. 

ಬಿಜೆಪಿ ಮೈತ್ರಿ ಪಕ್ಷ ಅಪ್ನಾ ದಳ (ಎಸ್ ) ಅಧ್ಯಕ್ಷರು ಹಾಗೂ ಉತ್ತರ ಪ್ರದೇಶದ ಮಿರ್ಜಾಪುರ ಕ್ಷೇತ್ರದ ಲೋಕಸಭಾ ಸದಸ್ಯರಾಗಿರುವ ಅನುಪ್ರಿಯಾ ಸಿಂಗ್ ಪಟೇಲ್ ,ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಮೋದಿ ಸಂಪುಟದಲ್ಲಿ ಆರೋಗ್ಯ ಸಚಿವಾಲಯದ ರಾಜ್ಯ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇವ
ನವದೆಹಲಿಯಿಂದ ಲೋಕಸಭೆ ಪ್ರತಿನಿಧಿಸುವ ಮೀನಾಕ್ಷಿ ಲೇಖಿ, ನೂತನ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. 2014ಕ್ಕೂ ಮುಂಚೆ ಇವರು ಬಿಜೆಪಿ ವಕ್ತಾರೆಯಾಗಿದ್ದರು. 2010ರಲ್ಲಿ ಬಿಜೆಪಿ ಮಹಿಳಾ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಸಶಸ್ತ್ರ ಪಡೆಗಳಲ್ಲಿ ಮಹಿಳೆಯರನ್ನು ಶಾಶ್ವತವಾಗಿ ನಿಯೋಜಿಸುವುದಕ್ಕೆ
ಅನ್ನಪೂರ್ಣ ದೇವಿ: ಜಾರ್ಖಂಡ್‌ನ ಕೋಡರ್ಮಾದಿಂದ ಮೊದಲ ಬಾರಿಗೆ ಗೆದ್ದು ಸಂಸದರಾಗಿರುವ ಇವರು ನಾಲ್ಕು ಬಾರಿ ಶಾಸಕರಾಗಿದ್ದರು.ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾಂಚಿ ವಿಶ್ವವಿದ್ಯಾಲಯದಿಂದ ಇತಿಹಾಸ ವಿಷಯದಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ.
ಪ್ರತಿಮಾ ಭೂಮಿಕ್: ತ್ರಿಪುರ ಪಶ್ಚಿಮ ಲೋಕಸಭಾ ಸ್ಥಾನದಿಂದ ಮೊದಲ ಬಾರಿಗೆ ಸಂಸದರಾಗಿದ್ದಾರೆ. 52 ವರ್ಷದ ಬಿಜೆಪಿ ನಾಯಕಿ ವಿನಮ್ರ ಹಿನ್ನೆಲೆಯಿಂದ ಬಂದವರು. ಜೈವಿಕ ವಿಜ್ಞಾನದಲ್ಲಿ ಪದವಿ ಪಡೆದಿದ್ದಾರೆ. ಮೂರು ದಶಕಗಳಲ್ಲಿ ರಾಜ್ಯದಿಂದ ಸಚಿವರಾದ ಮೊದಲನೇಯವಾಗಿದ್ದಾರೆ.
ಭಾರತಿ ಪ್ರವೀಣ್ ಪವಾರ್: ಮಹಾರಾಷ್ಟ್ರದ ದಿಂಡೋರಿಯಿಂದ ಮೊದಲ ಬಾರಿಗೆ ಗೆದ್ದು ಲೋಕಸಭಾ ಸಂಸದರಾಗಿದ್ದಾರೆ. ಎಂಬಿಬಿಎಸ್ ಪದವಿ ಪಡೆದಿದ್ದಾರೆ ಮತ್ತು ರಾಜಕೀಯಕ್ಕೆ ಸೇರುವ ಮೊದಲು ವೈದ್ಯಕೀಯದಲ್ಲಿ ತರಬೇತಿ ಪಡೆಯುತ್ತಿದ್ದರು. ನಾಸಿಕ್ ಜಿಲಾ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಶೋಭಾ ಕರಂದ್ಲಾಜೆ: ಕರ್ನಾಟಕದ ಉಡುಪಿ- ಚಿಕ್ಕಮಗಳೂರಿನ ಲೋಕಸಭಾ ಸಂಸದೆ. ಈ ಹಿಂದೆ ಎಂಎಲ್‌ಎ ಮತ್ತು ಎಂಎಲ್‌ಸಿ ಆಗಿದ್ದರು; ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದಾರೆ; ಈ ಮೊದಲು ಅವರ ಸಂಪುಟದಲ್ಲಿ ಸಚಿವರಾಗಿದ್ದರು.
ದರ್ಶನಾ ವಿಕ್ರಮ್ ಜರ್ದೋಶ್: ಗುಜರಾತ್‌ನ ಸೂರತ್‌ನಿಂದ ಮೂರನೇ ಬಾರಿಗೆ ಸಂಸದರಾಗಿದ್ದಾರೆ. ಗುಜರಾತ್ ಸಮಾಜ ಕಲ್ಯಾಣ ಮಂಡಳಿಯ ಸದಸ್ಯರಾಗಿದ್ದರು; ಸಂಸತ್ತಿನ ವಿವಿಧ ಸಮಿತಿಗಳ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವರಾಗಿ ಮುಂದುವರೆದಿದ್ದಾರೆ.
ಸಂಪುಟ ಪುನರ್ ರಚನೆ ನಂತರ ಸ್ಮೃತಿ ಇರಾನಿ ಅವರನ್ನು ಕ್ಯಾಬಿನೆಟ್ ಸಚಿವರಾಗಿ ಉಳಿಸಿಕೊಳ್ಳಲಾಗಿದೆ
ಸಾಧ್ವಿ ನಿರಂಜನ್ ಜ್ಯೋತಿ ಮತ್ತೆ ಸಚಿವರಾಗಿ ಮುಂದುವರೆಯಲು ಅವಕಾಶ ನೀಡಲಾಗಿದೆ
ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಸಹಾಯಕ ಸಚಿವರಾಗಿ ರೇಣುಕಾ ಸಿಂಗ್ ಸಾರುಟಾ ಮತ್ತೆ ಅಧಿಕಾರ ಸ್ವೀಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT