ಬ್ರಿಟೀಷರ ಆಳ್ವಿಕೆಯಿಂದ ಮುಕ್ತಿ ಪಡೆದು, ಭಾರತ ಆ.15 ರಂದು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಭಾರತ ಸರ್ಕಾರ ಆಯೋಜಿಸಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿತ್ತು. ಈ ಅಭಿಯಾನದ ಭಾಗವಾಗಿ ವಿಜಯವಾಡದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ರ್ಯಾಲಿಯಲ್ಲಿ 
ದೇಶ

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ದೃಶ್ಯಗಳು...

ಬ್ರಿಟೀಷರ ಆಳ್ವಿಕೆಯಿಂದ ಮುಕ್ತಿ ಪಡೆದು, ಭಾರತ ಆ.15 ರಂದು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಭಾರತ ಸರ್ಕಾರ ಆಯೋಜಿಸಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿತ್ತು. ಈ ಅಭಿಯಾನದ ಭಾಗವಾಗಿ ವಿಜಯವಾಡದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದರು.  

ಕೇರಳದ ಕೊಚ್ಚಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಇಸ್ರೇಲ್ ನ ಪ್ರವಾಸಿಗರ ತಂಡವೊಂದು ಸಂತಸದಿಂದ ಭಾರತದ ತಿರಂಗಾದೊಂದಿಗೆ ಫೋಟೋ ತೆಗೆಸಿಕೊಂಡಿದ್ದು ಹೀಗೆ...
ಒಡಿಶಾದ ಭುವನೇಶ್ವರದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ವಂದೇ ಮಾತರಂ ಎಂಬ ಸಾಮಾಜಿಕ ಕಾರ್ಯಕರ್ತರ ತಂಡ ದೇಶಭಕ್ತಿಯ ರೋಡ್ ಶೋ ಆಯೋಜಿಸಿತ್ತು.
ತಿರುಪತಿಯಲ್ಲಿ ಇಬ್ಬರು ವ್ಯಕ್ತಿಗಳು ಮಹಾತ್ಮ ಗಾಂಧಿ ಪುತ್ಥಳಿ ಬಳಿ ತಿರಂಗಾ ಸ್ಥಾಪಿಸುತ್ತಿರುವುದು....
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಆರ್ ಕೆ ಬೀಚ್ ನಲ್ಲಿ ತಿರಂಗಾದೊಂದಿಗೆ ಸೆಲ್ಫಿ ತೆಗೆದುಕೊಂಡ ಮಹಿಳೆ
ತಮಿಳುನಾಡಿನ ಚೆನ್ನೈ ನ ಮಿಂಟ್ ಸ್ಟ್ರೀಟ್ ನಲ್ಲಿ ತಿರಂಗಾ ರ್ಯಾಲಿಯನ್ನು ನಡೆಸಲಾಯಿತು.
ತಿರಂಗಾ ಬಣ್ಣದ ದೀಪಗಳಿಂದ ಅಲಂಕೃತಗೊಂಡಿರುವ ಒಡಿಶಾದ ಪುರಿಯಲ್ಲಿರುವ ಕೊನಾರ್ಕ್ ಸೂರ್ಯ ದೇವಾಲಯ
ಕೇರಳದ ಕೋಯಿಕ್ಕೋಡ್ ನಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಕ್ಕಳು ಮನೆಯ ಹೊರಬಂದು ಧ್ವಜ ಹಿಡಿದು ಬೆಂಬಲಿಸಿರುವುದು
ತಮಿಳುನಾಡಿನ ಕೊಯಂಬತ್ತೂರಿನಲ್ಲಿ ರೆಡ್ ಕ್ರಾಸ್ ಜಂಕ್ಷನ್ ನ್ನು ತಿರಂಗಾ ದೀಪಗಳಿಂದ ಅಲಂಕರಿಸಲಾಗಿತ್ತು.
ಸಿಕಂದರಾಬಾದ್ ನಲಿ ಸೇನಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನೆಯ ಅಂಗವಾಗಿ ಕಳರಿಪಯಟ್ಟು ಪ್ರದರ್ಶನ
ಆಂಧ್ರಪ್ರದೇಶದ ವಿಜಯವಾಡದಲ್ಲಿ ಮಕ್ಕಳನ್ನು ಸ್ವಾತಂತ್ರ್ಯ ಯೋಧರಾದ ಅಲ್ಲೂರಿ ಸೀತಾರಾಮ ರಾಜು, ಅಬ್ದುಲ್ ಕಲಾಮ್ ಆಜಾದ್, ಭಾರತ ಮಾತೆಯಂತೆ ಅಲಂಕರಿಸಿ ರ್ಯಾಲಿ ನಡೆಸಲಾಯಿತು.
75 ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಚೆನ್ನೈ ವಿಮಾನ ನಿಲ್ದಾಣಕ್ಕೆ ತಿರಂಗಾ ದೀಪದ ಅಲಂಕಾರ
ತಿರಂಗಾ ದೀಪಗಳ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಭವಾನಿ ಸಾಗರ್ ಜಲಾಶಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT