ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್ ಕಾರು ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡಿದ್ದಾರೆ.
ದೆಹಲಿ ಹಾಗೂ ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿನ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಷಭ್ ಪಂತ್ ಅವರ ತಲೆ ಹಾಗೂ ಕಾಲುಗಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.ರಿಷಭ್ ಪಂತ್ ಅವರು ದೆಹಲಿಯಿಂದ ಉತ್ತರಾಖಂಡಕ್ಕೆ ಮರಳುತ್ತಿದ್ದ ವೇಳೆ ಹಮ್ಮಾದ್ಪುರ್ ಝಾಲ್ ಸಮೀಪ ಈ ದುರ್ಘಟನೆ ನಡೆದಿದೆ.ರಿಷಬ್ ಪಂತ್ ಮರ್ಸಿಡಿಸ್ ಕಾರು ಚಲಾಯಿಸುತ್ತಿದ್ದರು. ಕಾರು ವೇಗವಾಗಿದ್ದ ಕಾರಣ ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿತ್ತು.ಈ ವೇಳೆ ಪಂತ್ ಕಾರಿನ ಕಿಟಕಿ ಗಾಜನ್ನು ಹೊಡೆದು ಹೊರಬಂದು ಜೀವ ಉಳಿಸಿಕೊಂಡಿದ್ದಾರೆ. ಬೆಂಕಿಯಿಂದಾಗಿ ಅವರ ಬೆನ್ನು ಸಂಪೂರ್ಣವಾಗಿ ಸುಟ್ಟುಹೋಗಿದೆ.ರಿಷಬ್ ಪಂತ್ ಮರ್ಸಿಡಿಸ್ ಕಾರು ಚಲಾಯಿಸುತ್ತಿದ್ದರು. ಕಾರು ವೇಗವಾಗಿದ್ದ ಕಾರಣ ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿತ್ತು.ಹೀಗಾಗಿ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಅಲ್ಲಿ ಅವರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುತ್ತದೆ. ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ.ಸದ್ಯ ರಿಷಬ್ ಪರಿಸ್ಥಿತಿ ಸ್ಥಿರವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ರಿಷಬ್ ಪಂತ್ ಕಾರು ಅಪಘಾತದ ದೃಶ್ಯFollow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos