ಸಿದ್ಧರಾಮಯ್ಯ 
ರಾಜಕೀಯ

ಬೆಳಗಾವಿಯಲ್ಲೇ ಕೆಎಟಿ ಪೀಠ: ಸಿಎಂ ಭರವಸೆ

ಬೆಳಗಾವಿಯಲ್ಲಿ ಕೆಎಟಿ ಪೀಠ ಸ್ಥಾಪಿಸಲು...

ನವದೆಹಲಿ: ಬೆಳಗಾವಿಯಲ್ಲಿ ಕೆಎಟಿ ಪೀಠ ಸ್ಥಾಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಚಳವಳಿ ನಿರತ ವಕೀಲರು ಮುಷ್ಕರ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. ತಾಂತ್ರಿಕ ಕಾರಣಗಳಿಗಾಗಿ ಕೆಎಟಿ ಪೀಠವನ್ನು ಘೋಷಣೆ ಮಾಡುತ್ತಿಲ್ಲ. ಕೆಎಟಿ ಎರಡು ಪೀಠಗಳಿಗೆ ನ್ಯಾಯಾಧೀಶರಿಲ್ಲ. ನ್ಯಾಯಾಧೀಶರ ನೇಮಕಕ್ಕೆ ಶಿಫಾರಸು ಮಾಡಲಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಿದ್ಧರಾಮಯ್ಯ ವಿವರಿಸಿದ್ದಾರೆ.

ಕೇಂದ್ರ ಕಾನೂನು ಸಚಿವ ಸದಾನಂದ ಗೌಡ ಅವರೊಂದಿಗೆ ಈ ಬಗ್ಗೆ ಸಮಾಲೋಚಿಸಲಾಗಿದೆ. ಅವರು ತ್ವರಿತವಾಗಿ ನ್ಯಾಯಾಧೀಶರ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಹಾಲಿ ಪೀಠಗಳಿಗೆ ನ್ಯಾಯಾಧೀಶರ ನೇಮಕವಾದ ನಂತರವಷ್ಟೇ ನಾವು ಬೆಳಗಾವಿಯಲ್ಲಿ ಹೊಸಪೀಠ ಘೋಷಣೆ ಮಾಡಬಹುದು. ಆದ್ದರಿಂದ ವಕೀಲರು ಚಳವಳಿ ಕೈ ಬಿಟ್ಟು ಸಹಕರಿಸಬೇಕು ಎಂದರು.

ಕಾಲಾವಕಾಶ ಕೋರಿಕೆ: ಪಶ್ಚಿಮ ಘಟ್ಟದ ಆಯ್ದ ಭಾಗವನ್ನು ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಡಾ.ಕಸ್ತೂರಿ ರಂಗನ್ ವರದಿಗೆ ಅಭಿಪ್ರಾಯ ತಿಳಿಸಲು ರಾಜ್ಯ ಸರ್ಕಾರ ಕಲಾವಕಾಶ ಕೋರಲಿದೆ.

ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಸಂಸತ್ ಸದಸ್ಯರ ಸಭೆ ಬಳಿಕ ಈ ವಿಷಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT