ಸಿದ್ಧರಾಮಯ್ಯ 
ರಾಜಕೀಯ

ಬೆಳಗಾವಿಯಲ್ಲೇ ಕೆಎಟಿ ಪೀಠ: ಸಿಎಂ ಭರವಸೆ

ಬೆಳಗಾವಿಯಲ್ಲಿ ಕೆಎಟಿ ಪೀಠ ಸ್ಥಾಪಿಸಲು...

ನವದೆಹಲಿ: ಬೆಳಗಾವಿಯಲ್ಲಿ ಕೆಎಟಿ ಪೀಠ ಸ್ಥಾಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಚಳವಳಿ ನಿರತ ವಕೀಲರು ಮುಷ್ಕರ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. ತಾಂತ್ರಿಕ ಕಾರಣಗಳಿಗಾಗಿ ಕೆಎಟಿ ಪೀಠವನ್ನು ಘೋಷಣೆ ಮಾಡುತ್ತಿಲ್ಲ. ಕೆಎಟಿ ಎರಡು ಪೀಠಗಳಿಗೆ ನ್ಯಾಯಾಧೀಶರಿಲ್ಲ. ನ್ಯಾಯಾಧೀಶರ ನೇಮಕಕ್ಕೆ ಶಿಫಾರಸು ಮಾಡಲಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಿದ್ಧರಾಮಯ್ಯ ವಿವರಿಸಿದ್ದಾರೆ.

ಕೇಂದ್ರ ಕಾನೂನು ಸಚಿವ ಸದಾನಂದ ಗೌಡ ಅವರೊಂದಿಗೆ ಈ ಬಗ್ಗೆ ಸಮಾಲೋಚಿಸಲಾಗಿದೆ. ಅವರು ತ್ವರಿತವಾಗಿ ನ್ಯಾಯಾಧೀಶರ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಹಾಲಿ ಪೀಠಗಳಿಗೆ ನ್ಯಾಯಾಧೀಶರ ನೇಮಕವಾದ ನಂತರವಷ್ಟೇ ನಾವು ಬೆಳಗಾವಿಯಲ್ಲಿ ಹೊಸಪೀಠ ಘೋಷಣೆ ಮಾಡಬಹುದು. ಆದ್ದರಿಂದ ವಕೀಲರು ಚಳವಳಿ ಕೈ ಬಿಟ್ಟು ಸಹಕರಿಸಬೇಕು ಎಂದರು.

ಕಾಲಾವಕಾಶ ಕೋರಿಕೆ: ಪಶ್ಚಿಮ ಘಟ್ಟದ ಆಯ್ದ ಭಾಗವನ್ನು ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಡಾ.ಕಸ್ತೂರಿ ರಂಗನ್ ವರದಿಗೆ ಅಭಿಪ್ರಾಯ ತಿಳಿಸಲು ರಾಜ್ಯ ಸರ್ಕಾರ ಕಲಾವಕಾಶ ಕೋರಲಿದೆ.

ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಸಂಸತ್ ಸದಸ್ಯರ ಸಭೆ ಬಳಿಕ ಈ ವಿಷಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT