ಇಕ್ಬಾಲ್ ಅನ್ಸಾರಿ (ಸಾಂದರ್ಭಿಕ ಚಿತ್ರ) 
ರಾಜಕೀಯ

ಶಾಸಕರಿಗೆ ಎಚ್‌ಡಿಕೆ ಕುಮಾರಸ್ವಾಮಿ ಸ್ಪಂದಿಸುತ್ತಿಲ್ಲ: ಇಕ್ಬಾಲ್ ಅನ್ಸಾರಿ

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪಕ್ಷದ ಶಾಸಕರಿಗೆ ಸ್ಪಂದಿಸುತ್ತಿಲ್ಲ, ಅವರ ನೋವನ್ನು ಆಲಿಸುತ್ತಿಲ್ಲ ಎಂದು ಜೆಡಿಎಸ್‌ನ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರು ಮೂರನೇ ಶಾಸಕ ಅನ್ಸಾರಿ. ಈ ಮೊದಲು ಜಮೀರ್ ಅಹಮದ್ ಹಾಗೂ ಬಸವರಾಜ ಹೊರಟ್ಟಿ ಪಕ್ಷದ ವರಿಷ್ಠರ ವಿರುದ್ಧ ಅತೃಪ್ತಿ ಹೊರಗೆಡವಿದ್ದರು. ಕೊಪ್ಪಳ ಸಮೀಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನ್ಸಾರಿ, ನಾಯಕರ ತಪ್ಪು ನಿರ್ಧಾರಗಳು ಪಕ್ಷಕ್ಕೆ ಸಂಕಷ್ಟ ತಂದಿದೆ ಎನ್ನುವ ಧಾಟಿಯಲ್ಲಿ ಮಾತನಾಡಿದರು.

ಸಮಸ್ಯೆ ಆಲಿಸುವುದಿಲ್ಲ: ವಿಧಾನ ಮಂಡಲ ಅಧಿವೇಶನಕ್ಕೆ ಹೋದಾಗ ಶಾಸಕರ ಯಾವ ಸಮಸ್ಯೆಯನ್ನೂ ಕುಮಾರಸ್ವಾಮಿ ಆಲಿಸುವುದಿಲ್ಲ. ಅವರ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರಶ್ನೆ ಮಾಡುವ ಗೋಜಿಗೂ ಹೋಗುವುದಿಲ್ಲ. ಅಷ್ಟೇ ಏಕೆ, ಜೆಡಿಎಸ್ ಶಾಸಕರನ್ನು ಸಿಎಂ ಬಳಿಗೆ ಕರೆದುಕೊಂಡು ಹೋಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಕ್ಕೆ ನೆರವಾಗುವ ಕಾಳಜಿಯೂ ಇಲ್ಲ. ನಾವೇ ನಮ್ಮ ಕ್ಷೇತ್ರದ ಅಭಿವೃದ್ಧಿ ಮಾಡಿಕೊಳ್ಳಬೇಕು ಮತ್ತು ಅದಕ್ಕಾಗಿ ಸಿಎಂ ಮೊದಲಾದವರನ್ನು ಭೇಟಿಯಾಗಿ ಅನುದಾನ ತರುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ನೀಡಿದ್ದರಿಂದ ನನ್ನ ಮೇಲೆ ಮುನಿಸಿಕೊಂಡವರಂತೆ ಸಂಪರ್ಕವನ್ನೇ ಮಾಡುತ್ತಿಲ್ಲ. ನಾವೇ ತಪ್ಪು ಮಾಡಿದ್ದೇವೆ ಎನ್ನುವಂತೆ ಮಾಡುತ್ತಿದ್ದಾರೆ. ಆದರೆ, ಅವರು ಕೋಮುವಾದಿ ಬಿಜೆಪಿಗೆ ಬೆಂಬಲ ನೀಡುತ್ತಾರೆ. ಆಗ ಯಾರನ್ನೂ ಕೇಳುವುದೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT