ಈರುಳ್ಳಿ 
ರಾಜಕೀಯ

ಈರುಳ್ಳಿ ರೈತರಿಗೆ ಸರ್ಕಾರ ಅಭಯ

ಹೈದರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ನ.27ರಂದು ಸಂಪುಟ ಸಭೆ ನಡೆಸುವುದರ ...

ಬೆಂಗಳೂರು: ಹೈದರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು  ನ.27ರಂದು ಸಂಪುಟ ಸಭೆ ನಡೆಸುವುದರ ಜತೆಗೆ  ಮಳೆಯಿಂದ ಹಾನಿಗೆ ಒಳಗಾದ ಈರುಳ್ಳಿ ಬೆಳೆಗಾರರ ರಕ್ಷಣೆಗೆ ಧಾವಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಬುಧವಾರ ನಡೆದ ಸಚಿವ ಸಂಪುಟ  ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹಾನಿಗೊಂಡ ಈರುಳ್ಳಿ ಬೆಲೆಗೆ ರು.36 ರಿಂದ ರು.40 ಕೋಟಿ ಸಹಾಯಧನ  ನೀಡಲು ನಿರ್ಧರಿಸಲಾಗಿದೆ.

ದಾವಣಗೆರೆ , ಧಾರವಾಡ, ಚಿತ್ರದುರ್ಗ, ಗದಗ ಹಾಗೂ ಬಳ್ಳಾರಿಯಲ್ಲಿ ವಾರ್ಷಿಕ 83 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ  ಬಿತ್ತನೆ ನಡೆಯುತ್ತಿತ್ತು. ಆದರೆ ಈ ವರ್ಷ 85 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಅತಿವೃಷ್ಟಿಯಿಂದಾಗಿ 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಹಾನಿಯಾಗಿದ್ದು, ಕೇಂದ್ರ ಸರ್ಕಾರದ ನಿಯಮ ಪ್ರಕಾರ ವಾಣಿಜ್ಯ ಬೆಳೆಗೆ ಪರಿಹಾರ ನೀಡುವುದಕ್ಕೆ ಸಾಧ್ಯವಿಲ್ಲ. ಆದರೂ ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಲು ಮುಂದಾಗಿದ್ದು, ಸಂಪುಟ ಉಪಸಮಿತಿ ನೀಡಿದ ವರದಿ ಆಧರಿಸಿ 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾದ ರೈತರಿಗೆ ಸಹಾಯಧನ ನೀಡಲಾಗುತ್ತದೆ.

ಪ್ರತಿ ಹೆಕ್ಟೇರ್‌ಗೆ ರು.9000 ನೀಡಲಾಗುವುದು ಎಂದು ಸಂಪುಟ ಸಭೆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ಸಂಪುಟ ಸಭೆಯ ವಿವರ

ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸಲು ಕೊನೆಗೂ ಸರ್ಕಾರದ ಒಪ್ಪಿಗೆ . ಡಿಸೆಂಬರ್ 9 ರಿಂದ 20ರ ವರೆಗೆ ಹತ್ತು ದಿನಗಳ ಕಾಲ ನಡೆಯಲಿದೆ ಅಧಿವೇಶನ

ಭಾರತೀಯ ಉತ್ತರಾಧಿಕಾರಿ ಕಾಯ್ದೆ ತಿದ್ದುಪಡಿಗೆ ಕಾನೂನು ಆಯೋಗ ನೀಡಿದ್ದ ಶಿಫಾರಸಿಗೆ ಒಪ್ಪಿಗೆ

ವಿದ್ಯುತ್ ಪ್ರಸರಣ ಮಾರ್ಗ ರಚನೆಯ ರಹದಾರಿ ಪಡೆಯಲು ಭೂ ಮಾಲೀಕರಿಗೆ ನೀಡುತ್ತಿದ್ದ ಪರಿಹಾರದ ಜತೆಗೆ ಎಕ್ಸಗ್ರೇಷಿಯಾ ನೀಡಲು ಒಪ್ಪಿಗೆ. ತೋಟಗಾರಿಕಾ ಬೆಳೆ ಪ್ರದೇಶದಲ್ಲಿ ಟವರ್ ನಿರ್ಮಾಣಕ್ಕೆ ಮಾರ್ಗದರ್ಶಿ ಬೆಲೆಯ ಶೇ.100 , ಲೈನ್ ಎಳೆಯುವುದಕ್ಕೆ ಶೇ. 50 ನಗರ ಪ್ರದೇಶದಲ್ಲಿ ಟವರ್‌ಗೆ ಶೇ.100 ಹಾಗೂ ಲೈನ್ ಎಳೆಯುವುದಕ್ಕೆ ಶೇ.75ರಷ್ಟು ಎಕ್ಸಗ್ರೇಷಿಯಾ.

ಮಲೆ ಮಹದೇಶ್ವರ ಪ್ರಾಧಿಕಾರ ವ್ಯಪ್ತಿಯಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗೆ ರು. 37.37 ಕೋಟಿ ಬಿಡುಗಡೆ.
ರಾಜ್ಯದ 189 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಮ್ಮ ಊರು ನಮ್ಮ ಗ್ರಾಮ ಯೋಜನೆಗೆ ಅನುಮೋದನೆ
ಬಿಬಿಎಂಪಿ ನಗರೋತ್ಥಾನ  ಯೋಜನೆ ಅನ್ವಯ ರು.1000 ಕೋಟಿ ಬಿಡುಗಡೆ. ಪ್ರತಿ ಕ್ಷೇತ್ರಕ್ಕೆ ರು.40 ಲಕ್ಷ ಹಂಚಿಕೆ

ಶಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಇಲಾಖೆ ಆಸ್ತಿ ರಕ್ಷಿಸಿ ಅಭಿವೃದ್ಧಿಗೆ ಒಪ್ಪಿಗೆ. ಮೇಕೆದಾಟು ಹೊರತು ಪಡಿಸಿ ಒಟ್ಟು 18 ಸ್ವತ್ತು ಖಾಸಗಿಯವರಿಗೆ ಒಪ್ಪಿಸುವುದಕ್ಕೆ ನಿರ್ಧಾರ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT