ಚಿಕ್ಕಬಳ್ಳಾಪುರದ ಕಾಂಗ್ರೆಸ್ ಸಂಸದ ವೀರಪ್ಪಮೊಯ್ಲಿ ಮತ್ತು ಬಿಜೆಪಿ ಮುಖಂಡ ಬಚ್ಚೇಗೌಡ (ಸಂಗ್ರಹ ಚಿತ್ರ) 
ರಾಜಕೀಯ

ಸಂಸದ ಮೊಯ್ಲಿ ವಿರುದ್ಧ ಬಚ್ಚೇಗೌಡ ರಿಟ್ ಅರ್ಜಿ..!

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ವಿರುದ್ಧ ಬಿಜೆಪಿ ಮುಖಂಡ ಬಿಎನ್ ಬಚ್ಚೇಗೌಡ ಅವರು ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ವಿರುದ್ಧ ಬಿಜೆಪಿ ಮುಖಂಡ ಬಿಎನ್ ಬಚ್ಚೇಗೌಡ ಅವರು ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ಮತ್ತು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಸಂಸದ ವೀರಪ್ಪಮೊಯ್ಲಿ ಅವರಿಗೆ ಸಂಕಷ್ಟವೊಂದು ಎದುರಾಗಿದ್ದು, ಹೈಕೋರ್ಟ್‌ನಲ್ಲಿ ಅವರ ವಿರುದ್ಧ ರಿಟ್ ಅರ್ಜಿ ದಾಖಲಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೀರಪ್ಪ ಮೊಯ್ಲಿ ಅವರು ನಿಗದಿಗಿಂತ ಹೆಚ್ಚಿನ ಹಣವನ್ನು ಖರ್ಚು ಮಾಡಿದ್ದಾರೆ ಎಂದು ಬಿಜೆಪಿ ಪಕ್ಷದ ಮುಖಂಡ ಬಿಎನ್ ಬಚ್ಚೇಗೌಡ ಅವರು ಆರೋಪಿಸಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕು ಎಂದು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

'ಚುನಾವಣೆಯಲ್ಲಿ ಎಲ್ಲ ಪಕ್ಷಗಳ ಅಭ್ಯರ್ಥಿಗಳಿಗೆ 70 ಲಕ್ಷ ರು. ವೆಚ್ಚದ ಮಿತಿ ಇದ್ದರೂ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೀರಪ್ಪ ಮೊಯ್ಲಿ ಅವರು 73 ಲಕ್ಷದ 28 ಸಾವಿರ ರು.ಗಳನ್ನು ಖರ್ಚು ಮಾಡಿದ್ದಾರೆ ಎಂದು ರಿಟ್ ಅರ್ಜಿಯಲ್ಲಿ ಬಚ್ಚೇಗೌಡ ಅವರು ಆರೋಪಿಸಿದ್ದಾರೆ. ಮೂಲಗಳ ಪ್ರಕಾರ ಈ ಮೊದಲೇ ಚುನಾವಣಾ ಆಯೋಗಕ್ಕೆ ಬಚ್ಚೇಗೌಡ ಅವರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮೇಲ್ಮನವಿ ಸಲ್ಲಿಸಿದ್ದರಾದರೂ, ಆಯೋಗ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ವೀರಪ್ಪ ಮೊಯ್ಲಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಅರ್ಜಿಯಲ್ಲಿ ಬಚ್ಚೇಗೌಡ ಅವರು ಮನವಿ ಮಾಡಿದ್ದಾರೆ.

ಬಚ್ಚೇಗೌಡರ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಾಲಯ, ಪ್ರಸ್ತುತ ಚುನಾವಣಾ ಆಯೋಗ, ಮುಖ್ಯಚುನಾವಣಾ ಅಧಿಕಾರಿ ಸೇರಿದಂತೆ ವೀರಪ್ಪಮೊಯ್ಲಿ ಅವರಿಗೆ ವಿವರ ಕೋರಿ ನೋಟಿಸ್ ಜಾರಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT