ಸಿದ್ದರಾಮಯ್ಯ 
ರಾಜಕೀಯ

ಅಖಿಲ ಭಾರತ ನ್ಯಾಯಾಂಗ ಸೇವೆ ಬೇಡ: ಮುಖ್ಯಮಂತ್ರಿ

ಅಖಿಲ ಭಾರತ ನ್ಯಾಯಾಂಗ ಸೇವಾ ವ್ಯವಸ್ಥೆ ಸೃಷ್ಟಿಸುವುದಕ್ಕೆ ಒಪ್ಪುವುದಿಲ್ಲ ಎಂದು ಕರ್ನಾಟಕ ಸರ್ಕಾರ ಪುನರುಚ್ಚರಿಸಿದೆ. ಈ ಬಗ್ಗೆ ರಾಜ್ಯ ಹೈಕೋರ್ಟ್...

ನವದೆಹಲಿ: ಅಖಿಲ ಭಾರತ ನ್ಯಾಯಾಂಗ ಸೇವಾ ವ್ಯವಸ್ಥೆ ಸೃಷ್ಟಿಸುವುದಕ್ಕೆ ಒಪ್ಪುವುದಿಲ್ಲ ಎಂದು ಕರ್ನಾಟಕ ಸರ್ಕಾರ ಪುನರುಚ್ಚರಿಸಿದೆ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮತ್ತು ಸರ್ಕಾರ ಒಲವು ಹೊಂದಿಲ್ಲ ಎನ್ನುವುದನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಭಾನುವಾರ ದೆಹಲಿಯಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು  ನ್ಯಾಯಾ ಮೂರ್ತಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಸರ್ಕಾರದ ನಿಲುವನ್ನು ಪ್ರತಿಪಾದಿಸಿದ್ದಾರೆ. ನ್ಯಾಯಾಂಗ ಇಲಾಖೆಗೆ ಎಲ್ಲ ಮೂಲ ಸೌಲಭ್ಯವನ್ನು ರಾಜ್ಯ ಸರ್ಕಾರ ಒದಗಿಸಿದೆ.
ಪ್ರಸಕ್ತ ಬಜೆಟಲ್ಲಿ ರು. 344 ಕೋಟಿ ನೀಡಲಾಗಿದೆ ಎಂದರು. ಜಿಲ್ಲಾ  ನ್ಯಾಯಾಧೀಶರ ನೇಮಕ ಮಾಡಲು ಏಕರೂಪ ಮಾನದಂಡ ರೂಪಿಸಲುವ ನಿಟ್ಟಿನಲ್ಲಿ ಬಾರ್ ಕೌನ್ಸಿಲ್ ಮತ್ತು ನ್ಯಾಯಾಂಗ ಅಕಾಡೆಮಿ ನೆರವು ಪಡೆಯಲಾಗಿದೆ ಎಂದರು. ವ್ಯಾಜ್ಯಗಳಿವೆ: ಕರ್ನಾಟಕದಲ್ಲಿ 1.28 ಲಕ್ಷ ಚೆಕ್ ಬೌನ್ಸ್ ವ್ಯಾಜ್ಯಗಳಿವೆ. ಅವುಗಳನ್ನು ಪರ್ಯಾಯ ವ್ಯಾಜ್ಯ ಪರಿಹಾರ (ಎಡಿಆರ್) ವ್ಯವಸ್ಥೆ ಅಡಿ ಪರಿಹರಿಸಿಕೊಳ್ಳಲು ಅವಕಾಶ ಮಾಡಿಕೊಡುವ ನೆಗೊಷಿಯಬಲ್  ಇನ್
ಸ್ಟ್ರುಮೆಂಟ್ ಕಾಯ್ದೆಗೆ ತಿದ್ದುಪಡಿ ಮತ್ತು ವಾಹನ ಅಪಘಾತ ಪರಿಹಾರ ವ್ಯಾಜ್ಯಗಳ ಪರಿಹಾರಕ್ಕೆ ಅವಕಾಶ ಕೊಡುವ ಉದ್ದೇಶಿತ ಮೋಟಾರು ವಾಹನಗಳ ತಿದ್ದುಪಡಿ ಕಾಂುÉ್ದು
ಅಂಗೀಕಾರವಾಗುವುದನ್ನು ನಿರೀಕ್ಷಿಸುತ್ತಿ ದ್ದೇವೆ ಎಂದರು. ಹೈಕೋರ್ಟ್ ಸೂಚನೆ ಯಂತೆ ಕರ್ನಾಟಕ ಸರ್ಕಾರ ದೇಶಿಯ ಮತ್ತು ಅಂಕಾರಾಷ್ಟ್ರೀಯ ಪಂಚಾಯ್ತಿ ಕೇಂದ್ರವನ್ನು ಬೆಂಗಳೂರಿನಲ್ಲಿ ತೆರೆದಿದೆ. ರಾಜ್ಯದ 854 ಕೋರ್ಟ್‍ಗಳ ಪೈಕಿ 776 ಕೋರ್ಟ್‍ಗಳಲ್ಲಿ ಇ-ಕೋರ್ಟ್‍ಗ ವ್ಯವಸ್ಥೆ ಜಾರಿಗೆ ತರಲಾಗಿದೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.
ಮಾತುಕತೆ ಬೇಕು: ಬಾಕಿ ಪ್ರಕರಣಗಳು ಸೇರಿ ನ್ಯಾಯ ನೀಡಿಕೆಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರದ ವಿಚಾರದಲ್ಲಿ ನ್ಯಾಯಾಂ ಗ, ಶಾಸಕಾಂಗ ಹಾಗೂಕಾರ್ಯಾಂಗಗಳ ನಡುವೆ ಸಾಂಸ್ಥಿಕ ಮಾತುಕತೆ ಹಾಗೂ ಪರಸ್ಪರ ಸಹಭಾಗಿತ್ವದ ಪ್ರಯತ್ನ ಅತ್ಯಗತ್ಯ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್.ಎಲ್. ದತ್ತು ಹೇಳಿದ್ದಾರೆ. ನ್ಯಾಯಾಂಗ ಮತ್ತು ಸಂಸತ್ತು ಸಹೋದರರಿದ್ದಂತೆ. ಇವೆರಡೂ ಪ್ರಜಾಪ್ರಭುತ್ವದ ಕೂಸು. ಪ್ರಜಾಪ್ರಭುತ್ವದ ಮೂರು ಆಧಾರ ಸ್ತಂಭಗಳಾದ ನ್ಯಾಯಾಂಗ, ಶಾಸಕಾಂಗ ಹಾಗೂ ಕಾರ್ಯಾಂಗಗಳು ನ್ಯಾಯ ನೀಡಿಕೆಯಲ್ಲಿ ಸಮಾನ ಪಾಲುದಾರರು. ಮೂರೂ ಅಂಗಗಳು ಪರಸ್ಪರ ಕೈಜೋಡಿಸಬೇಕು ಎಂದು ನ್ಯಾ. ದತ್ತು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT