ರಾಮಲಿಂಗಾ ರೆಡ್ಡಿ 
ರಾಜಕೀಯ

ನಮ್ಮ ಕ್ಷೇತ್ರದ ಜವಾಬ್ದಾರಿ ನಮ್ಮದು ಉಳಿದ ಕಡೆ ನಮಗೆ ಸಂಬಂಧವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

ನಮ್ಮ ಕ್ಷೇತ್ರದ ಜವಾಬ್ದಾರಿಯನ್ನು ನಾವು ವಹಿಸಿಕೊಳ್ಳುತ್ತೇವೆ. ಉಳಿದ ಕ್ಷೇತ್ರಕ್ಕೂ ನಮಗೂ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ...

ಬೆಂಗಳೂರು: ಬಿಬಿಎಂಪಿ ಚುನಾವಣೆಯ ಜವಾಬ್ದಾರಿಯನ್ನು ಬೆಂಗಳೂರು ನಗರ ಪ್ರತಿನಿಧಿಸುವ ಐವರು ಸಚಿವರು ಮಾತ್ರ ವಹಿಸಿಕೊಳ್ಳಬೇಕೆಂಬ ವಾದದಲ್ಲಿ ಹುರುಳಿಲ್ಲ. ನಮ್ಮ ಕ್ಷೇತ್ರದ ಜವಾಬ್ದಾರಿಯನ್ನು ನಾವು ವಹಿಸಿಕೊಳ್ಳುತ್ತೇವೆ. ಉಳಿದ ಕ್ಷೇತ್ರಕ್ಕೂ ನಮಗೂ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಬೇಡ. ಬಿಎಂಪಿಯಲ್ಲಿ ಈ ವರ್ಷ ಕಾಂಗ್ರೆಸ್ ಮೇಯರ್ ಆಡಳಿತ ನಡೆಸುವುದು ನಿಶ್ಚಿತ. ಹೀಗಾಗಿ ಜವಾಬ್ದಾರಿಯನ್ನು ಬೇರೆಯವರ ಹೆಗಲಿಗೆ ವಹಿಸುವ ಪ್ರಶ್ನೆ ಉದ್ಭವಿಸುವುದೇ ಇಲ್ಲ ಎಂದು ಹೇಳಿದರು.

ಬಿಜೆಪಿ ನಡೆಸಿದ ಭ್ರಷ್ಟಾಚಾರದ ವಿರುದ್ಧ ಜನ ನಮಗೆ ಮತ ನೀಡುತ್ತಾರೆ. ಬೆಂಗಳೂರಿನಲ್ಲಿ ಯಾವ ಅಲೆಯೂ ಇಲ್ಲ. ಮೋದಿ ಎಲ್ಲಿದ್ದಾರೆ? ಅವರ ಪತ್ತೆಯೇ ಇಲ್ಲ. ದೇಶದಲ್ಲಿ ಇಷ್ಟೆಲ್ಲ ಹಗರಣ ನಡೆಯುತ್ತಿದ್ದರೂ ಅವರು ಮಾತ್ರ ಮೌನೇಂದ್ರರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ನಗರದಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. 1 ಕೋಟಿಗೂ ಹೆಚ್ಚು ಜನರು ವಾಸವಿದ್ದಾರೆ. ರಾಜ್ಯದ ರಾಜಧಾನಿಯಾಗಿರುವುದರಿಂದ ಬಿಬಿಎಂಪಿ ಚುನಾವಣೆಗೆ ವಿಶೇಷ ಅರ್ಥ ಬಂದಿದೆ. ಬಿಬಿಎಂಪಿಯಲ್ಲಿ ಬಿಜೆಪಿ ಮಾಡಿದ ತಪ್ಪು ಮತ್ತು ಅವ್ಯವಹಾರಕ್ಕೆ ರಾಜ್ಯ ಸರ್ಕಾರ ಕಾರಣ ಅಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಬಿಎಂಪಿಯಲ್ಲಿ ಯಾವುದೇ ಅವ್ಯವಹಾರ ನಡೆಯುವುದಕ್ಕೆ ನಾವು ಅವಕಾಶವನ್ನೇ ನೀಡಿಲ್ಲ. ಪೌರ ಕಾರ್ಮಿಕರ ಪಿಎಫ್ ಹಣವನ್ನೇ ದುರ್ಬಳಕೆ ಮಾಡಿಕೊಂಡವರಿಂದ ನಾವು ಪಾಠ ಕಲಿಯಬೇಕಿಲ್ಲ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಂಗಳೂರು ನಗರಕ್ಕೆ ಸ್ಥಾನ ದೊರಕದೇ ಇರುವುದಕ್ಕೂ ಇವರ ದುರಾಡಳಿತವೇ ಕಾರಣ ಎಂದು ರಾಮಲಿಂಗಾರೆಡ್ಡಿ ಆಪಾದಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT