ಸಿದ್ದರಾಮಯ್ಯ 
ರಾಜಕೀಯ

ಅನಂತ್‌ ಕುಮಾರ್ ಹೇಳಿಕೆ ಬೇಜವಾಬ್ದಾರಿತನದ್ದು: ಸಿಎಂ

ಬೆಂಗಳೂರು ಮಹಾನಗರಕ್ಕೆ ಸ್ಮಾರ್ಟ್ ಸಿಟಿ ಅವಕಾಶ ತಪ್ಪಿರುವುದಕ್ಕೆ ಮುಖ್ಯಮಂತ್ರಿಗಳೇ ಹೊಣೆ ಎಂದಿದ್ದ ಕೇಂದ್ರ ಸಚಿವ ಅನಂತ್ ಕುಮಾರ್...

ಬೆಂಗಳೂರು: ಬೆಂಗಳೂರು ಮಹಾನಗರಕ್ಕೆ ಸ್ಮಾರ್ಟ್ ಸಿಟಿ ಅವಕಾಶ ತಪ್ಪಿರುವುದಕ್ಕೆ ಮುಖ್ಯಮಂತ್ರಿಗಳೇ ಹೊಣೆ ಎಂದಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ತಿರುಗೇಟು ನೀಡಿರು ಸಿಎಂ ಸಿದ್ದರಾಮಯ್ಯ, ಅನಂತ್ ಕುಮಾರ್ ಹೇಳಿಕೆ ಬೇಜವಾಬ್ದಾರಿತನದ್ದು ಎಂದಿದ್ದಾರೆ.

ಆನಂತ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಸ್ಮಾರ್ಟ್ ಸಿಟಿ ಯೋಜನೆ ಬೆಂಗಳೂರು ಆಯ್ಕೆಗೊಳ್ಳದಿರಲು ತಾಂತ್ರಿಕ ಕಾರಣ ಇದೆ. ಅವರ ಹೇಳಿಕೆ ಬೇಜವಾಬ್ದಾರಿತನದ್ದಾಗಿದ್ದು, ಇದೊಂದು ಚುನಾವಣಾ ಗಿಮಿಕ್ ಎಂದರು.

ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಬಿಬಿಎಂಪಿಯಲ್ಲಿ ಬಿಜೆಪಿ ಕಳೆದ ಐದು ವರ್ಷಗಳಿಂದ ದುರಾಡಳಿತ ನಡೆಸಿದ್ದು, ಈ ಬಗ್ಗೆ ಜನತಾ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಕೊಡುತ್ತೇವೆ ಎಂದರು.

ನಗರಕ್ಕೆ ಸ್ಮಾರ್ಟ್ ಸಿಟಿ ತಪ್ಪಿಸುವ ಘೋರ ಅಪರಾಧವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ನಿನ್ನೆ ಅನಂತ ಕುಮಾರ್ ಗಂಭೀರ ಆರೋಪ ಮಾಡಿದ್ದರು.

ಸ್ಮಾರ್ಟ್ ಸಿಟಿಯೋಜನೆಗೆ ಬೆಂಗಳೂರನ್ನು ಸೇರಿಸುವಂತೆ ರಾಜ್ಯ ಸರ್ಕಾರದಿಂದ ಯಾವುದೇ ಮನವಿ ಬಂದಿಲ್ಲ. ತೆರಿಗೆ ವಸೂಲಾತಿ ಹಾಗೂ ಕೇಂದ್ರದ ಯೋಜನೆಗಳ ಅನುಷ್ಠಾನಗಳನ್ನು ಮುಂದಿನ ದಿನದಲ್ಲಿ ಸರಿಯಾಗಿ ನಿರ್ವಹಿಸುತ್ತೇವೆ ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಪತ್ರ ಬರೆಯುವ ಮೂಲಕ ಬೆಂಗಳೂರನ್ನು ಸ್ಮಾರ್ಟ್ ಸಿಟಿಗೆ ಸೇರಿಸಿಕೊಳ್ಳಲು ಮನವಿ ಮಾಡಬಹುದಾಗಿತ್ತು. ಆದರೆ ರಾಜಕೀಯ ಉದ್ದೇಶಕ್ಕೆ ಈ ಕೆಲಸವನ್ನು ರಾಜ್ಯ ಸರ್ಕಾರ ಮಾಡಿಲ್ಲ ಎಂದು ಅನಂತ್‌ಕುಮಾರ್ ಟೀಕಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT