ಕಾಂಗ್ರೆಸ್ ಅಭ್ಯರ್ಥಿಯಿಂದ ದುಂಡಾ ವರ್ತನೆ ಆರೋಪ 
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಯಿಂದ ದುಂಡಾ ವರ್ತನೆ: ಅವಧಿ ಮುಗಿದ ನಂತರವೂ ಮತದಾನ ಮಾಡಿಸಿದ ಆರೋಪ

ಕಾಂಗ್ರೆಸ್ ನ ಅಭ್ಯರ್ಥಿ ಎಂ. ಆಂಜನಪ್ಪ ವಿರುದ್ಧ ಮತದಾನ ಮುಕ್ತಾಯಗೊಂಡ ನಂತರವೂ ಇಬ್ಬರನ್ನು ಕರೆತಂದು ಮತದಾನ ಮಾಡಿಸಿರುವವ ಆರೋಪ ಕೇಳಿಬಂದಿದೆ.

ಬೇಗೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು ವಾರ್ಡ್ ನ ಕಾಂಗ್ರೆಸ್ ನ ಅಭ್ಯರ್ಥಿ ಎಂ. ಆಂಜನಪ್ಪ ವಿರುದ್ಧ ಮತದಾನ ಮುಕ್ತಾಯಗೊಂಡ ನಂತರವೂ ಇಬ್ಬರನ್ನು ಕರೆತಂದು ಮತದಾನ ಮಾಡಿಸಿರುವವ ಆರೋಪ ಕೇಳಿಬಂದಿದೆ.

ಖಾಸಗಿ ಮಾಧ್ಯಮವೊಂದಿ ಪ್ರಕಟಿಸಿರುವ ವರದಿ ಪ್ರಕಾರ, ಸಂತ ತೆರೇಸಾ ಹಿರಿಯ ಪ್ರಾಥಮಿಕ ಮತಗಟ್ಟ ಸಂಖ್ಯೆ 10 ರಲ್ಲಿ ಮತದಾನ ಮುಕ್ತಾಯಗೊಂಡ ನಂತರವೂ ಇಬ್ಬರನ್ನು ಕರೆತಂದ ಕಾಂಗ್ರೆಸ್ ಅಭ್ಯರ್ಥಿ ಆಂಜನಪ್ಪ, ಅಕ್ರಮವಾಗಿ ಮತದಾನ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ನಿಗದಿಯಾಗಿದ್ದ ಸಮಯ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತದಾನಕ್ಕೆ ಅವಕಾಶ ನೀಡಲು ನಿರಾಕರಿಸಿದ ಚುನಾವಣಾಧಿಕಾರಿಗಳಿಗೆ ಪೊಲೀಸರ ಎದುರೇ ಆಂಜನಪ್ಪ ಧಮ್ಕಿ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಅಂತಿಮವಾಗಿ ಇಬ್ಬರು ಮತದಾರರನ್ನು ಒತ್ತಾಯಪೂರ್ವಕವಾಗಿ ಮತದಾನ ಮಾಡಿಸುವಲ್ಲಿ ಆಂಜನಪ್ಪ ಯಶಸ್ವಿಯಾಗಿದ್ದಾರೆ.

ಚುನಾವಣಾಧಿಕಾರಿಗಳು ಮನವಿ ಮಾಡಿದರೂ ದುಂಡಾವರ್ತನೆ ತೋರಿದ ಆಂಜನಪ್ಪ ಮತಗಟ್ಟೆಯ ಬೀಗ ತೆಗೆಸಿ ಮತದಾನ ಮಾಡಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ. ಅಲ್ಲದೇ ಈ ಘಟನೆಯ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಕ್ಕೂ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT