ಕಾಂಗ್ರೆಸ್ ಅಭ್ಯರ್ಥಿಯಿಂದ ದುಂಡಾ ವರ್ತನೆ ಆರೋಪ 
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಯಿಂದ ದುಂಡಾ ವರ್ತನೆ: ಅವಧಿ ಮುಗಿದ ನಂತರವೂ ಮತದಾನ ಮಾಡಿಸಿದ ಆರೋಪ

ಕಾಂಗ್ರೆಸ್ ನ ಅಭ್ಯರ್ಥಿ ಎಂ. ಆಂಜನಪ್ಪ ವಿರುದ್ಧ ಮತದಾನ ಮುಕ್ತಾಯಗೊಂಡ ನಂತರವೂ ಇಬ್ಬರನ್ನು ಕರೆತಂದು ಮತದಾನ ಮಾಡಿಸಿರುವವ ಆರೋಪ ಕೇಳಿಬಂದಿದೆ.

ಬೇಗೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು ವಾರ್ಡ್ ನ ಕಾಂಗ್ರೆಸ್ ನ ಅಭ್ಯರ್ಥಿ ಎಂ. ಆಂಜನಪ್ಪ ವಿರುದ್ಧ ಮತದಾನ ಮುಕ್ತಾಯಗೊಂಡ ನಂತರವೂ ಇಬ್ಬರನ್ನು ಕರೆತಂದು ಮತದಾನ ಮಾಡಿಸಿರುವವ ಆರೋಪ ಕೇಳಿಬಂದಿದೆ.

ಖಾಸಗಿ ಮಾಧ್ಯಮವೊಂದಿ ಪ್ರಕಟಿಸಿರುವ ವರದಿ ಪ್ರಕಾರ, ಸಂತ ತೆರೇಸಾ ಹಿರಿಯ ಪ್ರಾಥಮಿಕ ಮತಗಟ್ಟ ಸಂಖ್ಯೆ 10 ರಲ್ಲಿ ಮತದಾನ ಮುಕ್ತಾಯಗೊಂಡ ನಂತರವೂ ಇಬ್ಬರನ್ನು ಕರೆತಂದ ಕಾಂಗ್ರೆಸ್ ಅಭ್ಯರ್ಥಿ ಆಂಜನಪ್ಪ, ಅಕ್ರಮವಾಗಿ ಮತದಾನ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ನಿಗದಿಯಾಗಿದ್ದ ಸಮಯ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತದಾನಕ್ಕೆ ಅವಕಾಶ ನೀಡಲು ನಿರಾಕರಿಸಿದ ಚುನಾವಣಾಧಿಕಾರಿಗಳಿಗೆ ಪೊಲೀಸರ ಎದುರೇ ಆಂಜನಪ್ಪ ಧಮ್ಕಿ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಅಂತಿಮವಾಗಿ ಇಬ್ಬರು ಮತದಾರರನ್ನು ಒತ್ತಾಯಪೂರ್ವಕವಾಗಿ ಮತದಾನ ಮಾಡಿಸುವಲ್ಲಿ ಆಂಜನಪ್ಪ ಯಶಸ್ವಿಯಾಗಿದ್ದಾರೆ.

ಚುನಾವಣಾಧಿಕಾರಿಗಳು ಮನವಿ ಮಾಡಿದರೂ ದುಂಡಾವರ್ತನೆ ತೋರಿದ ಆಂಜನಪ್ಪ ಮತಗಟ್ಟೆಯ ಬೀಗ ತೆಗೆಸಿ ಮತದಾನ ಮಾಡಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ. ಅಲ್ಲದೇ ಈ ಘಟನೆಯ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಕ್ಕೂ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ, ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

SCROLL FOR NEXT