ಬಿಜೆಪಿ ಕಚೇರಿಯಲ್ಲಿ ಬಿಬಿಎಂಪಿಯ ನೂತನ ಸದಸ್ಯರಿಗೆ ಪಕ್ಷದ ಹಿರಿಯ ನಾಯಕರು ನೀತಿಪಾಠ ಹೇಳಿಕೊಟ್ಟರು. 
ರಾಜಕೀಯ

ಮೊದಲ ದಿನ ಬಿಜೆಪಿ ಎಚ್ಚರಿಕೆ ಹೆಜ್ಜೆ

ಭ್ರಷ್ಟಾಚಾರರಹಿತವಾಗಿ ಕಾರ್ಯನಿರ್ವಹಿಸಬೇಕು, ಪಾರದರ್ಶಕತೆಗೆ ಒತ್ತು ನೀಡಬೇಕು, ವೈಯಕ್ತಿಕ ಕೆಲಸಗಳಿಗೆ ಅಧಿಕಾರ...

ಬೆಂಗಳೂರು: ಭ್ರಷ್ಟಾಚಾರರಹಿತವಾಗಿ ಕಾರ್ಯನಿರ್ವಹಿಸಬೇಕು, ಪಾರದರ್ಶಕತೆಗೆ ಒತ್ತು ನೀಡಬೇಕು, ವೈಯಕ್ತಿಕ ಕೆಲಸಗಳಿಗೆ ಅಧಿಕಾರ ಬಳಸಿಕೊಳ್ಳಬಾರದು, ನಗರ ಸೇವಕರಂತೆ
ಕೆಲಸ ಮಾಡಬೇಕು..ಹೀಗೆ ಹತ್ತು ಹಲವು ಕಟು ಸಂದೇಶದ ಪಾಠ ಕೇಳುವ ಯೋಗ ಪಾಲಿಕೆಯ ನೂತನ ಬಿಜೆಪಿ ಸದಸ್ಯರಿಗೆ ಬುಧವಾರ ಒದಗಿಬಂದಿತ್ತು.

ಫಲಿತಾಂಶ ಪ್ರಕಟಗೊಂಡ 24 ಗಂಟೆಯೊಳಗೆ ನೀತಿಪಾಠದ ತರಗತಿ ಹಮ್ಮಿಕೊಂಡಿದ್ದ ಬಿಜೆಪಿಯು ನೂತನ ಸದಸ್ಯರಿಗೆ ಮಾರ್ಗದರ್ಶನ ಮಾಡುವ ಮೂಲಕ ಆರಂಭದಿಂದಲೇ ಎಚ್ಚರಿಕೆ ಹೆಜ್ಜೆ ಇಟ್ಟಿದೆ.

ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ್,ಸದಾನಂದ ಗೌಡ ಸೇರಿದಂತೆ ಪಕ್ಷದ ಪ್ರಮುಖರು ಮಾತನಾಡಿ,ನೂತನ ಸದಸ್ಯರು ಹೇಗೆ  ನಡೆದುಕೊಳ್ಳಬೇಕೆಂಬ ಬಗ್ಗೆ ತಿಳಿಸಿಕೊಟ್ಟರು.

ನಗರ ಸೇವಕರಾಗಲು ಸೂಚನೆ:
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅನಂತಕುಮಾರ್, ನಗರ ಪಾಲಿಕೆ ಸದಸ್ಯರು ನಗರ ಸೇವಕರಂತೆ ಕೆಲಸ ಮಾಡ
ಬೇಕು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸೇವಕ ಎಂಬ ಕಲ್ಪನೆಯಂತೆಯೇ ನಗರದ ಪಾಲಿಕೆ ಸದಸ್ಯರು ಬೆಂಗಳೂರಿನ ಅಭಿವೃದ್ಧಿಗಾಗಿ ಪಾಲಿಕೆ ಸದಸ್ಯರಿಂದ ಹೆಚ್ಚಾಗಿ ನಗರ ಸೇವಕರಾಗಿ ಕೆಲಸ ಮಾಡಬೇಕಾಗಿದೆ ಎಂದು ಸಲಹೆ ನೀಡಿರುವುದಾಗಿ ತಿಳಿಸಿದರು.

ಜನರ ಪರವಾಗಿ, ವಿನಮೃತವಾಗಿ, ಜವಾಬ್ದಾರಿಯಿಂದ ಜನ ನೀಡಿರುವ ಆದೇಶವನ್ನು ಪಾಲಿಸಬೇಕಾದ ಅಗತ್ಯತೆ ಇದ್ದು, ಈ ಹಿನ್ನಲೆಯಲ್ಲಿ ಪ್ರತಿಯೊಬ್ಬ ಪಾಲಿಕೆ ಸದಸ್ಯರು ಹೆಜ್ಜೆ ಇಡಬೇಕಿದೆ. ಯಾವುದೇ ಕಾರಣಕ್ಕೂ ಸದಸ್ಯರು ತಮ್ಮ ಜವಾಬ್ದಾರಿಯನ್ನು ಮರೆತು
ವರ್ತಿಸಬಾರದು ಎಂದು ತಿಳಿಸಿರುವುದಾಗಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ