ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರ ಸ್ವಾಮಿ (ಸಂಗ್ರಹಚಿತ್ರ) 
ರಾಜಕೀಯ

ದಳ ಒಡೆದರೆ ರಾಜ್ಯಕ್ಕೇ ನಷ್ಟ

ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚುವ ಮೂಲಕ ಜೆಡಿಎಸ್ ಒಡೆಯುವ ಕೆಲಸ ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು...

ಮಾಗಡಿ: ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚುವ ಮೂಲಕ ಜೆಡಿಎಸ್ ಒಡೆಯುವ ಕೆಲಸ ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ  ವ್ಯಕ್ತಪಡಿಸಿದರು.

ಪಟ್ಟಣದ ಕೋಟೆ ಮೈದಾನದಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದ ವಿಜೇತ ಪ್ರಜಾಪ್ರತಿನಿಧಿಗಳು, ಸಹಕಾರಿಗಳ ಸಂಭ್ರಮೋತ್ಸವ ಹಾಗೂ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ, ನಮ್ಮ ಪಕ್ಷವನ್ನು ಒಡೆಯುವುದರಿಂದ ರಾಜ್ಯಕ್ಕೆ ನಷ್ಟ ಎಂಬುದನ್ನು ಮಾಧ್ಯಮಗಳು ಮತ್ತು ಜನತೆ ಅರ್ಥಮಾಡಿಕೊಳ್ಳಬೇಕು ಎಂದರು. ಶಾಸಕ ಬಾಲಕೃಷ್ಣ, ಜಮೀರ್ ಅಹಮದ್ ಹಾಗೂ  ಚಲುವರಾಯಸ್ವಾಮಿ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಕರೆದಿಲ್ಲ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಯನ್ನು ತಿರುಚಲಾಗಿದೆ. ಕೆಲ ಪತ್ರಿಕೆಗಳು ನನ್ನ ಹೇಳಿಕೆಗಳನ್ನು  ತಿರುಚಿಗೊಂದಲ ಮೂಡಿಸುತ್ತಿವೆ. ದೃಶ್ಯ ಮಾಧ್ಯಮಗಳು ಟಿಆರ್‍ಪಿಗೋಸ್ಕರ ಕೆಲವು ಪ್ರತಿಕ್ರಿಯೆಗಳನ್ನು ಸಂಪೂರ್ಣ ಅರ್ಥೈಸಿಕೊಳ್ಳದೆ ದೊಡ್ಡದಾಗಿ ಬಿಂಬಿಸಿ, ಸಮಾಜಕ್ಕೆ ತಪ್ಪು ಸಂದೇಶ  ರವಾನಿಸುತ್ತಿವೆ ಎಂದು ಹೇಳಿದರು.

ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ನನ್ನ ಮತ್ತು ಬಾಲಕೃಷ್ಣ ನಡುವಿನ ಸಂಬಂಧ ತುಂಬಾ ಚೆನ್ನಾಗಿದೆ. ನಮ್ಮ ಮಧ್ಯೆ ಬೆಂಕಿ ಹಚ್ಚುವ ಕೆಲಸವನ್ನು ಕೆಲ ಮಾಧ್ಯಮಗಳು ಮಾಡುತ್ತಿವೆ.  ಹಿಂದಿನ ವಿಧಾನಸಭೆ ಚುನಾವಣೆ ವೇಳೆಯೂ ಪಕ್ಷ ಕೇವಲ 13 ಸ್ಥಾನ ಗಳಿಸುತ್ತದೆಂದು ಸಮೀಕ್ಷೆ ಪ್ರಕಟಿಸಿ ಮತದಾರರಲ್ಲಿ ಗೊಂದಲ ಮೂಡಿಸಿದರು. ನೇರ ನಡೆ ನುಡಿ ವ್ಯಕ್ತಿತ್ವದ ಬಾಲಕೃಷ್ಣ  ಅವರು ನನ್ನ ಹೃದಯದಲ್ಲಿದ್ದಾರೆ. ಅವರಿಗೆ ಪಕ್ಷ ಬಿಟ್ಟು ಹೋಗುವಂತೆ ಎಂದೂ ಹೇಳಿಲ್ಲ. ಅವರು ಪಕ್ಷ ತೊರೆಯಲು ನಾನು ಬಿಡುವುದಿಲ್ಲ. ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಯಾರ ಮನೆ ಬಾಗಿಲಿಗೆ ಹೋದರೂ ತಪ್ಪಿಲ್ಲ ಎಂದು ಹೇಳಿದರು.

ಇಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಕುಮಾರಸ್ವಾಮಿ ಬರುತ್ತಾರೋ, ಇಲ್ಲವೋ ಎಂಬುದಾಗಿ ಮಾಧ್ಯಮದವರಲ್ಲಿ ಕುತೂಹಲ ಮೂಡಿತ್ತು. ಇದು ನನ್ನ ಮನೆ ಕಾರ್ಯಕ್ರಮವಾಗಿದ್ದು,  ತಪ್ಪಿಸಿಕೊಳ್ಳಲು ಹೇಗೆ ಸಾಧ್ಯ ಎಂದು ಹೇಳುವ ಮೂಲಕ ಗೊಂದಲಗಳಿಗೆ ಕುಮಾರಸ್ವಾಮಿ ತೆರೆ ಎಳೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT