ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ 
ರಾಜಕೀಯ

ಅಭ್ಯರ್ಥಿಗಳ ಬದಲಾವಣೆ: ಜೆಡಿಎಸ್ ಅತೃಪ್ತಿ ಸ್ಫೋಟ

ಬೂದಿ ಮುಚ್ಚಿದ ಕೆಂಡಂತಿದ್ದ ಜೆಡಿಎಸ್ ಒಳಗಿನ ಭಿನ್ನಮತ ಮತ್ತೆ ಸ್ಫೋಟಗೊಂಡಿದೆ. ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ...

ಬೆಂಗಳೂರು: ಬೂದಿ ಮುಚ್ಚಿದ ಕೆಂಡಂತಿದ್ದ ಜೆಡಿಎಸ್ ಒಳಗಿನ ಭಿನ್ನಮತ ಮತ್ತೆ ಸ್ಫೋಟಗೊಂಡಿದೆ. ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ನಾಯಕರು ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡಿದ್ದಾರೆ ಎಂದು ಕೆಲವು ಶಾಸಕರು ಗುಡುಗಿದ್ದಾರೆ. 
ಖಾಸಗಿ ಹೊಟೇಲ್ ನಲ್ಲಿ ದಿನವಿಡೀ ಪ್ರತ್ಯೇಕ ಸಭೆ ನಡೆಸಿ ಅವರು ಮುಂದಿನ ನಡೆಗಳನ್ನೂ ಚರ್ಚಿಸಿದ್ದಾರೆ. ಇದೇ ಧೋರಣೆ ಮುಂದುವರಿದರೆ ಸಮಸ್ಯೆ ಇನ್ನೂ ಹೆಚ್ಚಾಗುತ್ತದೆ ಎನ್ನುವ ಸಂದೇಶವನ್ನೂ ರವಾನಿಸಿ ದ್ದಾರೆ. ಇದರಿಂದ ಜೆಡಿಎಸ್ ಸ್ಪರ್ಧಿಸಿ ರುವ ಕಡೆ ಅತೃಪ್ತ ಶಾಸಕರ ಬೆಂಬಲವಿಲ್ಲದೆ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ. 
ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಬುಧ ವಾರ ಮತ್ತೆ 3 ಸ್ಥಾನಗಳಿಗೆ ಅಭ್ಯರ್ಥಿ ಗಳನ್ನು ಪ್ರಕಟಿಸಿದೆ. ವಿಜಯಪುರಕ್ಕೆ ಕಾಂತಪ್ಪ ಇಂಟಿಕೇರಿ, ಬೆಳಗಾವಿಗೆ ಟಿ.ಬಿ. ನಾಯಕ್, ಬಳ್ಳಾರಿಗೆ ಪ್ರದೀಪ್ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದು, ನಾಮಪತ್ರಗಳನ್ನೂ ಸಲ್ಲಿಸಿದ್ದಾರೆ. 
ಕೊನೇ ಕ್ಷಣದಲ್ಲಿ ಮಣೆ: 10 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಚಿಂತನೆ ನಡೆಸಿದ್ದ ಜೆಡಿಎಸ್ ಕೊನೆ ಹಂತದಲ್ಲಿ ಪಕ್ಷಕ್ಕೆ ಬಂದ ಉದ್ಯಮಿಗಳು, ರಾಜಕೀಯ ಮುಖಂಡರು ಮತ್ತು ಇತರ ನಾಯಕರಿಗೆ ಮಣೆ ಹಾಕಿ ಟಿಕೆಟ್ ನೀಡಿದೆ. 
ಇದರೊಂದಿಗೆ ಪಕ್ಷದಿಂದ ಕಣಕ್ಕಿಳಿದ ಅಭ್ಯರ್ಥಿಗಳ ಸಂಖ್ಯೆ 19ಕ್ಕೇರಿದೆ. ಬೆಂಗಳೂರು ನಗರ ಜಿಲ್ಲೆಯಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಆದರೆ, ಆಯ್ಕೆ ಮಾಡಿದ್ದ ಅಧಿಕೃತ ಅಭ್ಯರ್ಥಿಗಳನ್ನು ನಾಲ್ಕು ಕ್ಷೇತ್ರಗಳಲ್ಲಿ ದಿಢೀರ್ ಬದಲಿಸುವ ಮೂಲಕ ಅನುಮಾನಕ್ಕೆ ಎಡೆಯಾಗಿತ್ತು. ಅಷ್ಟೇ ಅಲ್ಲ. ಇದರಿಂದ ಪಕ್ಷದ ಕೆಲವು ಶಾಸಕರಿಗೆ ಅಸಮಾಧಾನವನ್ನೂ ತಂದಿತ್ತು.  
ಖಾಸಗಿ ಹೋಟೆಲ್‍ನಲ್ಲಿ ಸಭೆ: ಈ ಹಿನ್ನೆಲೆಯಲ್ಲಿ ಬುಧವಾರ ಖಾಸಗಿ ಹೊಟೇಲ್‍ನಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರಾದ ಚಲುವರಾಯಸ್ವಾಮಿ, ಗೋಪಾಲಯ್ಯ, ಬಾಲಕೃಷ್ಣ, ಅಖಂಡ ಶ್ರೀನಿವಾಸಮೂರ್ತಿ, ಪುಟ್ಟಣ್ಣ ಹಾಜರಿದ್ದರು. ಬೆಳಗ್ಗೆ 12ಕ್ಕೆ ಆರಂಭವಾದ ಸಭೆ ಸಂಜೆ 5 ಗಂಟೆವರೆಗೂ ನಡೆದಿತ್ತು. ಪಕ್ಷದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳು ಮತ್ತು ನಿರ್ಧಾರಗಳ ಬಗ್ಗೆ ಚರ್ಚಿಸಲಾಗಿತ್ತು. 
ಹಾಗೆಯೇ ಪರಿಷತ್ ಚುನಾವಣೆಯ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಶಾಸಕರ ಅಭಿಪ್ರಾಯಕ್ಕೆ ಬೆಲೆ ನೀಡುವುದಾಗಿ ಭರವಸೆ ನೀಡಿದ್ದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಉಲ್ಟಾ ಹೊಡೆದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಕೊಡಗು, ಧಾರವಾಡ, ಮಂಡ್ಯ ಕ್ಷೇತ್ರಗಳಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದ ಅಭ್ಯರ್ಥಿಗಳನ್ನು ರಾತ್ರೋರಾತ್ರಿ ಬದಲಿಸಿದ್ದ ಬಗ್ಗೆಯೂ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಗಿದೆ. 
ವಿಶೇಷವಾಗಿ ಮಂಡ್ಯದಲ್ಲಿ ಸ್ಥಳೀಯ ಶಾಸಕ ಚಲುವರಾಯಸ್ವಾಮಿ ಸಲಹೆಯಂತೆಯೇ ರಾಮಕೃಷ್ಣ ಅವರಿಗೆ ಟಿಕೆಟ್ ನೀಡಿ, ನಂತರದಲ್ಲಿ ಅಪ್ಪಾಜಿಗೌಡ ಎಂಬುವರಿಗೆ ಟಿಕೆಟ್ ನೀಡಿದ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT