ಡಿಕೆ ಶಿವಕುಮಾರ್ 
ರಾಜಕೀಯ

ಪರಿಷತ್ ಚುನಾವಣೆ: ಡಿಕೆಶಿ ಸಂಧಾನ ವಿಫಲ, 'ಕೈ'ಗೆ ಬಂಡಾಯದ ಬಿಸಿ

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಲ್ಲಿನ ಬಂಡಾಯ ಶಮನ ಮಾಡಲು ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ನಡೆಸಿದ ಸಂಧಾನ ಸಭೆ...

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಲ್ಲಿನ ಬಂಡಾಯ ಶಮನ ಮಾಡಲು ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ದಯಾನಂದ ರೆಡ್ಡಿ ಅವರು ನಾಮಪತ್ರ ಹಿಂಪಡೆಯಲು ನಿರಾಕರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಡಿಕೆ ಶಿವಕುಮಾರ್ ಅವರು ಇಂದು ದಯಾನಂದ ರೆಡ್ಡಿ ಮನವೊಲಿಕೆಗೆ ಯತ್ನಿಸಿದರು. ಆದರೆ ಡಿಕೆಶಿ ಸಂಧಾನ ವಿಫಲವಾಗಿದೆ. ಸಂಧಾನ ಸಭೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ವಿರುದ್ಧ ದಯಾನಂದ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ನನ್ನ ಮತ್ತು ರಾಮಲಿಂಗಾ ರೆಡ್ಡಿ ನಡುವಿನ ಪ್ರತಿಷ್ಠೆಯ ಪ್ರಶ್ನೆ. ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ. ಒಂದೋ ನಾನು ಗೆಲ್ಲಬೇಕು, ಇಲ್ಲ ಅವರು ಗೆಲ್ಲಬೇಕು ಎಂದು ರೆಡ್ಡಿ ಖಡಕ್ ಆಗಿ ಹೇಳಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ಉಡುಪಿ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ನಾಮಪತ್ರ ವಾಪಸ್ ಪಡೆಯಲು ನಿರಾಕರಿಸಿದ್ದಾರೆ. ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಾಳಯಕ್ಕೆ ಬಂಡಾಯದ ಬಿಸಿ ಮುಂದುವರಿದಂತಾಗಿದೆ.

25 ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು ಕಡೆಯ ದಿನವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘Delayed, not denied’: ಇಷ್ಟು ವರ್ಷ ಪಟ್ಟ ಪರಿಶ್ರಮ, ಬದ್ಧತೆಗೆ ದೊರೆತ ಪ್ರತಿಫಲ- ನಿಯೋಜಿತ ಸಿಎಂ ಡಿಕೆ ಶಿವಕುಮಾರ್

ಸಿನಿಮೀಯ ಶೈಲಿಯಲ್ಲಿ ಮಾಜಿ MLC ಕಿಡ್ನ್ಯಾಪ್: 3 ಕೋಟಿಗೆ ಡಿಮ್ಯಾಂಡ್; ದುಷ್ಟರಿಂದ ದಯಾನಂದ ರೆಡ್ಡಿ ಬಚಾವ್​​ ಆಗಿದ್ದೇ ರೋಚಕ!

ವಿಧಾನಸೌಧದಲ್ಲಿರುವ CM ಕಚೇರಿಗೆ ಜ್ಯೋತಿಷಿಗಳ ಭೇಟಿ; ಕುರ್ಚಿ ದಿಕ್ಕು ಬದಲು, ಅಜ್ಜಯ್ಯನ ಫೋಟೋ ಅಳವಡಿಕೆ!

ಸ್ಪೀಕರ್ ಯುಟಿ ಖಾದರ್ ರಿಂದ ಸಿಬ್ಬಂದಿಗೆ ಔತಣಕೂಟ; ಪಕ್ಕಾ ಆಯ್ತಾ ಸಚಿವ ಸ್ಥಾನ?

ಮುಖ್ಯಮಂತ್ರಿಯಾಗಿ ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಹೀಗಿದೆ ಕಾರ್ಯಕ್ರಮದ ಭದ್ರತೆ

SCROLL FOR NEXT