ಬಿಜೆಪಿ ಸದಸ್ಯರು ಧಿಕ್ಕಾರ ಕೂಗುತ್ತಾ ಸಭಾತ್ಯಾಗ ಮಾಡುತ್ತಿರುವುದು 
ರಾಜಕೀಯ

ಬಿಜೆಪಿ ಧರಣಿ, ಸಭಾತ್ಯಾಗ

ವಿಶ್ವ ಹಿಂದೂ ಪರಿಷತ್‍ನ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರ ನಗರ ಭೇಟಿ ನಿಷೇಧ ಕುರಿತಂತೆ ಬಿಜೆಪಿ ಧರಣಿ ....

ವಿಧಾನಸಭೆ: ವಿಶ್ವ ಹಿಂದೂ ಪರಿಷತ್‍ನ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ  ಅವರ ನಗರ ಭೇಟಿ ನಿಷೇಧ ಕುರಿತಂತೆ ಬಿಜೆಪಿ ಧರಣಿ ಗುರುವಾರ ಬೆಳಗ್ಗೆಯೂ ಮುಂದುವರಿದು, ಸರ್ಕಾರದ ನಿರ್ಧಾರ ಖಂಡಿಸಿ ಸಭಾತ್ಯಾಗ ಮಾಡುವ ಮೂಲಕ ಧರಣಿ ಅಂತ್ಯ ಗೊಂಡಿತು. ಗುರುವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಬಾವಿಗಿಳಿದು ಧರಣಿ ನಡೆಸಿದರು. `ದೇಶದ್ರೋಹಿಗಳಿಗೆ ಮಣೆ ಹಾಕುವ ಸರ್ಕಾರ, ಬಹುಸಂಖ್ಯಾತರಿಗೆ ಬರೆ ಹಾಕುತ್ತಿದೆ. ಸರ್ಕಾರದ ಸರ್ವಾಧಿಕಾರಿ ನೀತಿ ಧಿಕ್ಕಾರ' ಎಂದು ಕೂಗಿದರು. ಸ್ಪೀಕರ್ ಕಾಗೋಡು ತಿಮ್ಮಪ್ಪ ಸದನವನ್ನು 10 ನಿಮಿಷ ಮುಂದೂಡಿದರು. 15 ನಿಮಿಷದ ನಂತರ ಕಲಾಪ ಆರಂಭವಾದಾಗಲೂ ಧರಣಿ ಮುಂದುವರಿಯಿತು. ಸ್ಪೀಕರ್ ಅವರು ಸಾಕಷ್ಟು ಮನವಿ ಮಾಡಿಕೊಂಡರು. `ಸರ್ಕಾರಕ್ಕೆ ಬುದ್ದಿ ಹೇಳಿ, ಕಿವಿ ಹಿಂಡಿ' ಎಂದು ಬಿಜೆಪಿ ಸದಸ್ಯರು ಸ್ಪೀಕರ್ ಅವರಲ್ಲಿ ಮನವಿ ಮಾಡಿಕೊಂಡರು. ನಾನೇನು ಹೇಳೋಕೆ ಸಾಧ್ಯ ಇಲ್ಲ. ನಿಮ್ಮ ಪ್ರತಿಭಟನೆ ತೋರಿದ್ದೀರಿ ಸಾಕು ಮಾಡಿ ಎಂದು ಸ್ಪೀಕರ್ ನುಡಿದರು.
`ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ್ದು ಸರ್ಕಾರದ ಕರ್ತವ್ಯ ಹೌದು. ಆದರೆ ತೊಗಾಡಿಯಾ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಎಲ್ಲೂ ತೊಂದರೆ ಆಗಿಲ್ಲ. ಆದರೂ ನಿಷೇಧಿಸಲಾಗಿದೆ. ನಮಗೂ ಸದನ ನಡೆಯಬೇಕು, ಚರ್ಚೆ ಆಗಬೇಕು ಎಂಬ ಉದ್ದೇಶ ನಮ್ಮದೂ ಹೌದು. ಹೀಗಾಗಿ ತಮ್ಮ ಸಲಹೆ ಮೇರೆಗೆ ಸರ್ಕಾರದ ಈ ಕ್ರಮವನ್ನು ಖಂಡಿಸಿ, ಸಭಾತ್ಯಾಗ ಮಾಡುತ್ತೇವೆ' ಎಂದು ಜಗದೀಶ್ ಶೆಟ್ಟರ್ ಹೇಳಿದರು. ಬಿಜೆಪಿ ಸದಸ್ಯರು ಧಿಕ್ಕಾರ ಕೂಗುತ್ತಾ ಸಭಾತ್ಯಾಗ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT