ಬಿಜೆಪಿ ಸದಸ್ಯರು ಧಿಕ್ಕಾರ ಕೂಗುತ್ತಾ ಸಭಾತ್ಯಾಗ ಮಾಡುತ್ತಿರುವುದು 
ರಾಜಕೀಯ

ಬಿಜೆಪಿ ಧರಣಿ, ಸಭಾತ್ಯಾಗ

ವಿಶ್ವ ಹಿಂದೂ ಪರಿಷತ್‍ನ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರ ನಗರ ಭೇಟಿ ನಿಷೇಧ ಕುರಿತಂತೆ ಬಿಜೆಪಿ ಧರಣಿ ....

ವಿಧಾನಸಭೆ: ವಿಶ್ವ ಹಿಂದೂ ಪರಿಷತ್‍ನ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ  ಅವರ ನಗರ ಭೇಟಿ ನಿಷೇಧ ಕುರಿತಂತೆ ಬಿಜೆಪಿ ಧರಣಿ ಗುರುವಾರ ಬೆಳಗ್ಗೆಯೂ ಮುಂದುವರಿದು, ಸರ್ಕಾರದ ನಿರ್ಧಾರ ಖಂಡಿಸಿ ಸಭಾತ್ಯಾಗ ಮಾಡುವ ಮೂಲಕ ಧರಣಿ ಅಂತ್ಯ ಗೊಂಡಿತು. ಗುರುವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಬಾವಿಗಿಳಿದು ಧರಣಿ ನಡೆಸಿದರು. `ದೇಶದ್ರೋಹಿಗಳಿಗೆ ಮಣೆ ಹಾಕುವ ಸರ್ಕಾರ, ಬಹುಸಂಖ್ಯಾತರಿಗೆ ಬರೆ ಹಾಕುತ್ತಿದೆ. ಸರ್ಕಾರದ ಸರ್ವಾಧಿಕಾರಿ ನೀತಿ ಧಿಕ್ಕಾರ' ಎಂದು ಕೂಗಿದರು. ಸ್ಪೀಕರ್ ಕಾಗೋಡು ತಿಮ್ಮಪ್ಪ ಸದನವನ್ನು 10 ನಿಮಿಷ ಮುಂದೂಡಿದರು. 15 ನಿಮಿಷದ ನಂತರ ಕಲಾಪ ಆರಂಭವಾದಾಗಲೂ ಧರಣಿ ಮುಂದುವರಿಯಿತು. ಸ್ಪೀಕರ್ ಅವರು ಸಾಕಷ್ಟು ಮನವಿ ಮಾಡಿಕೊಂಡರು. `ಸರ್ಕಾರಕ್ಕೆ ಬುದ್ದಿ ಹೇಳಿ, ಕಿವಿ ಹಿಂಡಿ' ಎಂದು ಬಿಜೆಪಿ ಸದಸ್ಯರು ಸ್ಪೀಕರ್ ಅವರಲ್ಲಿ ಮನವಿ ಮಾಡಿಕೊಂಡರು. ನಾನೇನು ಹೇಳೋಕೆ ಸಾಧ್ಯ ಇಲ್ಲ. ನಿಮ್ಮ ಪ್ರತಿಭಟನೆ ತೋರಿದ್ದೀರಿ ಸಾಕು ಮಾಡಿ ಎಂದು ಸ್ಪೀಕರ್ ನುಡಿದರು.
`ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ್ದು ಸರ್ಕಾರದ ಕರ್ತವ್ಯ ಹೌದು. ಆದರೆ ತೊಗಾಡಿಯಾ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಎಲ್ಲೂ ತೊಂದರೆ ಆಗಿಲ್ಲ. ಆದರೂ ನಿಷೇಧಿಸಲಾಗಿದೆ. ನಮಗೂ ಸದನ ನಡೆಯಬೇಕು, ಚರ್ಚೆ ಆಗಬೇಕು ಎಂಬ ಉದ್ದೇಶ ನಮ್ಮದೂ ಹೌದು. ಹೀಗಾಗಿ ತಮ್ಮ ಸಲಹೆ ಮೇರೆಗೆ ಸರ್ಕಾರದ ಈ ಕ್ರಮವನ್ನು ಖಂಡಿಸಿ, ಸಭಾತ್ಯಾಗ ಮಾಡುತ್ತೇವೆ' ಎಂದು ಜಗದೀಶ್ ಶೆಟ್ಟರ್ ಹೇಳಿದರು. ಬಿಜೆಪಿ ಸದಸ್ಯರು ಧಿಕ್ಕಾರ ಕೂಗುತ್ತಾ ಸಭಾತ್ಯಾಗ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT