ದಿನೇಶ್ ಗುಂಡೂರಾವ್ 
ರಾಜಕೀಯ

ಹೊಸ ಪಡಿತರ ಚೀಟಿ ರೂಪುರೇಷೆ ಬಜೆಟ್‍ನಲ್ಲಿ

ರಾಜ್ಯದಲ್ಲಿ 1.60 ಲಕ್ಷ ಹೊಸ ಪಡಿತರ ಕಾರ್ಡ್‍ಗಳನ್ನು ವಿತರಿಸಿದ್ದು, ಪ್ರತಿ ನಿತ್ಯವೂ 3-4 ಸಾವಿರ ಕಾರ್ಡ್ ವಿತರಣೆ ಆಗುತ್ತಿದೆ. ಹೊಸ ಕಾರ್ಡ್‍ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ...

ವಿಧಾನಸಭೆ: ರಾಜ್ಯದಲ್ಲಿ 1.60 ಲಕ್ಷ ಹೊಸ ಪಡಿತರ ಕಾರ್ಡ್‍ಗಳನ್ನು ವಿತರಿಸಿದ್ದು, ಪ್ರತಿ ನಿತ್ಯವೂ 3-4 ಸಾವಿರ ಕಾರ್ಡ್ ವಿತರಣೆ ಆಗುತ್ತಿದೆ. ಹೊಸ ಕಾರ್ಡ್‍ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಬಗ್ಗೆ ಬಜೆಟ್‍ನಲ್ಲಿ ಘೋಷಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬಿಜೆಪಿಯ ಸುನೀಲ್ ಕುಮಾರ್ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, ಕಾರ್ಡ್ ಪಡೆಯಲು ಮತದಾನದ ಗುರುತಿನ ಚೀಟಿ ಮಾತ್ರ ಕಡ್ಡಾಯ. ಅಂತ್ಯೋದಯ ಕಾರ್ಡ್‍ಗಳನ್ನು ರದ್ದು ಮಾಡಿಲ್ಲ. ಇನ್ನೆರಡು ತಿಂಗಳಲ್ಲಿ ಅರ್ಜಿ ಸಲ್ಲಿಸಿದವರಿಗೆಲ್ಲ ಕಾರ್ಡ್ ನೀಡಲಾಗುತ್ತದೆ ಎಂದು ವಿವರಿಸಿದರು.

ಬೋಗಸ್ ಕಾರ್ಡ್‍ಗಳು ಹೆಚ್ಚಾಗಿದ್ದು, ಅರ್ಜಿ ಸಲ್ಲಿಸಿದವರಿಗೆಲ್ಲ ಕಾರ್ಡ್ ನೀಡಲಾಗಿದೆ ಎಂದು ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು. ಬೋಗಸ್ ಹಾಗೂ ವಿತರಣೆಯ ಅಕ್ರಮ ಮಾಡಿದ್ದೇ ನೀವು. ನಿಮ್ಮ ಸರ್ಕಾರ ಇದ್ದಾಗ ಅರ್ಜಿ ನೀಡಿದವರಿಗೆಲ್ಲ ಕಾರ್ಡ್ ನೀಡಿದ್ದೀರಿ ಎಂದು ಸಚಿವರು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದ್ರೆ ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ

Musharraf ನ್ನು ಲಕ್ಷಾಂತರ ಡಾಲರ್ ಎಸೆದು ಖರೀದಿಸಿದ್ದೆವು, ಪಾಕಿಸ್ತಾನ ಸಂಪೂರ್ಣ ಅಣ್ವಸ್ತ್ರ ನಿಯಂತ್ರಣವನ್ನು ಅಮೆರಿಕಾಗೆ ಒಪ್ಪಿಸಿತ್ತು : ಮಾಜಿ ಸಿಐಎ ಅಧಿಕಾರಿ

ಬೆಂಗಳೂರು ಟನಲ್ ವಿರುದ್ಧ ಪ್ರಕಾಶ್ ಬೆಳವಾಡಿ ಅರ್ಜಿ; ತೇಜಸ್ವಿ ಸೂರ್ಯ ವಾದ ಮಂಡನೆ

Cricket: ಟೀಂ ಇಂಡಿಯಾಗೆ ಗಾಯದ ಭೀತಿ, ಶ್ರೇಯಸ್ ಅಯ್ಯರ್ ಆಸ್ಪತ್ರೆಗೆ ದೌಡು.. 'ಸೂಪರ್ ಕ್ಯಾಚ್' ಬಳಿಕ ಆಗಿದ್ದೇನು?

SCROLL FOR NEXT