ಮುಖ್ಯಮಂತ್ರಿ, ಸಿದ್ದರಾಮಯ್ಯ 
ರಾಜಕೀಯ

ಪೂರ್ಣಾವಧಿಗೆ ನಾನೇ ಸಿಎಂ: ಸಿದ್ದರಾಮಯ್ಯ

ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ, ಮುಂದಿನ ಚುನಾವಣೆಯೂ ನನ್ನ ನಾಯಕತ್ವದಲ್ಲಿಯೇ ನಡೆಯಲಿದೆ...

ವಿಧಾನಸಭೆ: ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ, ಮುಂದಿನ ಚುನಾವಣೆಯೂ ನನ್ನ ನಾಯಕತ್ವದಲ್ಲಿಯೇ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸಿದ್ದರಾಮಯ್ಯ 5 ವರ್ಷ ಪೂರೈಸುವುದಿಲ್ಲ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎನ್ನುವುದೆಲ್ಲ ಹಗಲು ಕನಸು. ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ತಲೆ ಎತ್ತುವುದಿಲ್ಲ. ಇದನ್ನು ಬರೆದುಕೊಡುತ್ತೇನೆ, ಸುಮ್ಮನೇ ಮಾತನಾಡಬೇಡಿ ಎಂದು ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಆರೋಪಕ್ಕೆ ಉತ್ತರಿಸಿದರು.

ನನ್ನ ಅವಧಿಯಲ್ಲಿ ಅಕ್ರಮವಾಗಿ ಒಂದಿಂಚೂ ಡಿನೋಟಿಫಿಕೇಷನ್ ನಡೆದಿಲ್ಲ, ಡಿನೋಟಿಫಿಕೇಷನ್ ಅಕ್ರಮಗಳೆಲ್ಲ ಬಿಜೆಪಿ ಸರ್ಕಾರದ ಕೂಸುಗಳು. ನನಗೆ ಇದರ ಬಗ್ಗೆ ಯಾವುದೇ ಭಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಅರ್ಕಾವತಿ ಬಡಾವಣೆ ಅಕ್ರಮ ಕುರಿತ ಬಿಜೆಪಿ ಟೀಕೆಗೆ ಸಿದ್ದರಾಮಯ್ಯ ಅವರು ಏಕಾಂಗಿಯಾಗಿ ಸದನದಲ್ಲಿ ಹೋರಾಟ ನಡೆಸಬೇಕಾಯಿತು. ಸಚಿವ ಕೆ.ಜೆ ಜಾರ್ಜ್ ಹೊರತುಪಡಿಸಿ, ಮತ್ಯಾವುದೇ ಶಾಸಕರು ಹಾಗೂ ಸಚಿವರು ಸಿದ್ದರಾಮಯ್ಯ ನೆರವಿಗೆ ಬರಲಿಲ್ಲ. ನಿಮ್ಮ ಏಕಾಂಗಿ ಹೋರಾಟವೇ ಎಲ್ಲ ಸಂದೇಶ ನೀಡುತ್ತದೆ. ಈ ಹಿಂದೆ ನರೇಂದ್ರ ಮೋದಿ ಪ್ರಧಾನಿಯಾಗಲ್ಲ ಎಂದು ಬರೆದುಕೊಟ್ಟಿದ್ದೀರಿ. ನೀವು ಹೇಳಿದ್ದು ಯಾವುದೂ ಸಂಭವಿಸುವುದಿಲ್ಲ ಎಂದು ಬಿಜೆಪಿಯ ಸಿ.ಟಿ ರವಿ ಕಿಚಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT