ಕಿಮ್ಮನೆ ರತ್ನಾಕರ 
ರಾಜಕೀಯ

ಮಾತೃಭಾಷಾ ಶಿಕ್ಷಣ ಕಡ್ಡಾಯ: ಕಿಮ್ಮನೆ

ಮಾತೃಭಾಷಾ ಶಿಕ್ಷಣ ಕಡ್ಡಾಯಗೊಳಿಸುವುದಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ...

ಬೆಂಗಳೂರು: ಮಾತೃಭಾಷಾ ಶಿಕ್ಷಣ ಕಡ್ಡಾಯಗೊಳಿಸುವುದಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ. ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ವರ್ಷದಿಂದ ಮಾತೃಭಾಷಾ ಕಲಿಕೆ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಪ್ರತ್ಯೇಕ ಕಾನೂನು ರಚಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಅಧಿವೇಶನದಲ್ಲೇ ವಿಧೇಯಕ ಮಂಡನೆಗೆ ಪ್ರಯತ್ನ ನಡೆಸಲಾಗುವುದು ಎಂದರು.
ಪರೀಕ್ಷೆ  ಸಂದರ್ಭದಲ್ಲಿ ಸಾಮೂಹಿಕ ನಕಲು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪಿಯು ಪರೀಕ್ಷೆ ಸಂದರ್ಭದಲ್ಲಿ ನಕಲು ಪಿಡುಗುತಪ್ಪಿಸಲು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ
ಅಳವಡಿಸಲಾಗುವುದು ಎಂದು ಹೇಳಿದರು. ಕಡತ ವಿಲೇವಾರಿಯಲ್ಲಿ ನನ್ನ ಇಲಾಖೆ ಹಿಂದೆ ಬಿದ್ದಿಲ್ಲ. ಕಡತ ವಿಲೇವಾರಿಯಲ್ಲಿ ನಂಬರ್ ಒನ್ ನಾನೇ. ನಾನು 24 ಶೈಕ್ಷಣಿಕ
ಜಿಲ್ಲೆಗಳಲ್ಲಿ ಇದುವರೆಗೆ ಪ್ರವಾಸ ನಡೆಸಿದ್ದು, ಯಾವ ಕಡತವೂ ಇದುವರೆಗೆ ಬಾಕಿ ಇಲ್ಲ ಎಂದು ಹೇಳಿದರು. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಅನಧಿ ಕೃತ ಶಾಲೆಗಳು ಇವೆ. ಇದನ್ನು ನಿಯಂತ್ರಿಸುವುದಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ. ಯಾದಗಿರಿಯ ಶಾಲೆಯಲ್ಲಿ ಅನ್ನಕ್ಕಾಗಿ ಮಕ್ಕಳ ಗೋಳು ಪ್ರಕರಣದ ಬಗ್ಗೆ ಡಿಡಿಪಿಐ ಹಾಗೂ ಬಿಇಓಗಳಿಂದ ವರದಿ ಕೇಳಲಾಗಿದೆ ಎಂದರು.


ತೊಗಾಡಿಯಾ ಮಹಾತ್ಮರೇ?
ವಿಡಿಯೋ  ಕಾನ್ಪರೆನ್ಸ್ ಮೂಲಕ ಭಾಷಣ ಕೇಳುವುದಕ್ಕೆ ವಿಎಚ್‍ಪಿ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಮಹಾತ್ಮರೇ ಎಂದು ಸಚಿವ ಕಿಮ್ಮನೆ ರತ್ನಾಕರ ಪ್ರಶ್ನಿಸಿದ್ದಾರೆ. ಪ್ರವೇಶ ನಿರ್ಬಂಧಿಸಿ ನ್ಯಾಯಾಲಯ ಆದೇಶ ನೀಡಿದ ಮೇಲೆ ವಿಡಿಯೋ  ಕಾನ್ಪರೆನ್ಸ್ ಮೂಲಕ ಭಾಷಣ ಮಾಡುವುದಕ್ಕೆ ಅವಕಾಶವಿಲ್ಲ. ಅವರೇನು ಮಹಾತ್ಮರಲ್ಲ. ಬಿಜೆಪಿಯವರಿಗ್ಯಾಕೆ ಅವರ ಭಾಷಣಕೇಳುವ ಹುಚ್ಚು ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT