ಎಚ್.ಎಸ್.ಮಹದೇವಪ್ರಸಾದ್ 
ರಾಜಕೀಯ

ಕಬ್ಬು ಬೆಳೆಗಾರರಿಗೆ ಹಣ ಪಾವತಿ ಆರಂಭ

ಕಬ್ಬು ಬೆಳೆಗಾರರಿಗೆ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ಗೋದಾಮುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗುತ್ತಿದೆ...

ವಿಧಾನ ಪರಿಷತ್ತು: ಕಬ್ಬು ಬೆಳೆಗಾರರಿಗೆ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ಗೋದಾಮುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗುತ್ತಿದೆ.
ಇದರಿಂದ ಎಚ್ಚೆತ್ತ ಕಾರ್ಖಾನೆಗಳು ರೈತರಿಗೆ ಹಣ ಪಾವತಿ ಮಾಡಲಾರಂಭಿಸಿವೆ ಎಂದು ಸಕ್ಕರೆ ಖಾತೆ ಸಚಿವ ಎಚ್.ಎಸ್.ಮಹದೇವಪ್ರಸಾದ್ ಮಾಹಿತಿ ನೀಡಿದ್ದಾರೆ.
ಸದಸ್ಯ ಮಹಾಂತೇಶ್ ಶಿವಾನಂದ ಕೌಜಲಗಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಕ್ಕರೆ ತಯಾರಕರು ಕಬ್ಬು ಖರೀದಿಸಿದ 14 ದಿನಗಳ ಒಳಗಾಗಿ ಹಣ ಪಾವತಿಸಬೇಕೆಂದಿದ್ದರೂ ಯಾವುದೇ ಕಾರ್ಖಾನೆ ನಿಯಮ ಪಾಲಿಸಿಲ್ಲ. ಹೀಗಾಗಿ ನಿಯಮದಂತೆ ಹಣ ಪಾವತಿ ಮಾಡದ 63 ಕಾರ್ಖಾನೆಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ.
ನಿಗದಿತ ಅವಧಿಯೊ ಳಗೆ ಹಣ ಪಾವತಿ ಮಾಡದೇ ಇದ್ದಲ್ಲಿ ವಿಳಂಬದ ಅವಧಿಗೆ ಬಾಕಿ ಮೊತ್ತದ ಮೇಲೆ ಶೇ.15ರಷ್ಟು ಬಡ್ಡಿ ಸೇರಿಸಿ ಪಾವತಿಸಲು ಕಾರ್ಖಾನೆಗಳಿಗೆ ಅವಕಾಶ ಇರುವುದರಿಂದ ಏಕಾಏಕಿ ಕಾರ್ಖಾನೆಗಳ ಮೇಲೆ ಕ್ರಮಕೈಗೊಳ್ಳಲಾಗುತ್ತಿಲ್ಲ ಎಂದು ಸಚಿವರು ವಿವರಿಸಿದರು.
ಬೆಳಗಾವಿ ಅಧಿವೇಶನದಲ್ಲೂ ಇದೇ ಉತ್ತರ ಕೊಟ್ಟಿದ್ದೀರ, ರೈತರಿಗೆ ಹಣ ಯಾವಾಗ ಕೊಡಿಸುತ್ತೀರಾ ಎಂಬುದನ್ನು ಸ್ಪಷ್ಟಪಡಿಸಿ ಎಂದು ಪ್ರತಿಪಕ್ಷ ಸದಸ್ಯರು
ಪಟ್ಟು ಹಿಡಿದರು. ಅದಕ್ಕೆ ಉತ್ತರಿಸಿದ ಸಚಿವರು, ಆರಂಭದಲ್ಲಿ ರೈತರಿಗೆ 1750 ಕೋಟಿ ರುಪಾಯಿ ಬಾಕಿ ಇತ್ತು, ಇದೀಗ 1230 ಕೋಟಿ ರುಪಾಯಿಗೆ ಇಳಿದಿದೆ. 2-3 ಗೋದಾಮುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ನಂತರ ಕಾರ್ಖಾನೆಗಳು ಹಣ ಪಾವತಿಗೆ ಮುಂದಾಗಿವೆ ಎಂದರು.
ಕಡಿತ ಮಾಡೋಹಾಗಿಲ್ಲ ಕಬ್ಬಿನ ತೂಕದಲ್ಲಿ ಶೇ.1ರಷ್ಟು ಬೈಂಡಿಂಗ್ ಮೆಟೀರಿಯಲ್ ಕಡಿತಗೊಳಿಸಲು ಅವಕಾಶವಿದೆ. ಬಾಗಲಕೋಟೆ ಜಿಲ್ಲೆಯ ನಾಲ್ಕು ಸಕ್ಕರೆ ಕಾರ್ಖಾನೆಗಳು ಶೇ.2.5ರಷ್ಟು ಕಡಿತಗೊಳಿಸಿರುವುದು ಕಂಡುಬಂದಿದೆ. ಈ ಸಂಬಂಧ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ. ಈ ಮಧ್ಯೆ ಕಾರ್ಖಾನೆಯವರು ಸಲ್ಲಿಸಿರುವ ಉತ್ತರದಲ್ಲಿ ರೈತರು ಬೆಳೆದ 91010 ಕಬ್ಬಿನ ತಳಿಯ ಸಿಪ್ಪೆ ದಪ್ಪವಿದ್ದು, ಈ ತಳಿ ಕಬ್ಬಿನ ಸಿಪ್ಪೆ ಹೆಚ್ಚಿಗೆ ಇರುವುದರಿಂದ ಕೇವಲ ಶೇ.1ರಷ್ಟು ಕಟಾವು ಮಾಡಿದಲ್ಲಿ ಕಾರ್ಖಾನೆಗೆ ನಷ್ಟವಾಗುತ್ತದೆ ಮತ್ತು ರೈತ ಮುಖಂಡರೂ ಚರ್ಚಿಸಿ ಶೇ.2.5 ಕಡಿತಕ್ಕೆ ಸಮ್ಮತಿ ನೀಡಿದ್ದಾರೆ. ಪರಿಶೀಲನೆ ನಂತರ ಅಗತ್ಯಬಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT