ಸಿದ್ದರಾಮಯ್ಯ 
ರಾಜಕೀಯ

ಕೆಂಪಣ್ಣ ಆಯೋಗಕ್ಕೆ ಕೊನೆಗೂ ಕಡತ ಸಲ್ಲಿಕೆ

ಅರ್ಕಾವತಿ ಡಿನೋಟಿಫಿ ಕೇಷನ್ ಪ್ರಕರಣದ ತನಿಖೆಗೆ ನೇಮಿಸಲಾಗಿರುವ ನ್ಯಾ. ಕೆಂಪಣ್ಣ ಆಯೋಗಕ್ಕೆ ಕೊನೆಗೂ ರಾಜ್ಯ ...

ಬೆಂಗಳೂರು: ಅರ್ಕಾವತಿ ಡಿನೋಟಿಫಿ ಕೇಷನ್ ಪ್ರಕರಣದ ತನಿಖೆಗೆ ನೇಮಿಸಲಾಗಿರುವ ನ್ಯಾ. ಕೆಂಪಣ್ಣ ಆಯೋಗಕ್ಕೆ ಕೊನೆಗೂ ರಾಜ್ಯ ಸರ್ಕಾರ ಕಡತವನ್ನು ಸಲ್ಲಿಸಿದೆ. ಆಯೋಗದ ಅವಧಿ ಮುಕ್ತಾಯ ಗೊಳ್ಳುತ್ತಾ ಬಂದಿದ್ದರೂ ಬಿಡಿಎ ಹಾಗೂ ನಗರಾಭಿವೃದ್ಧಿ ಇಲಾಖೆಯಿಂದ ಯಾವುದೇ ಕಡತ ಸಲ್ಲಿಕೆಯಾಗಿರಲಿಲ್ಲ. ಹೀಗಾಗಿ ನೆಪ ಮಾತ್ರಕ್ಕೆ ತನಿಖೆ ನಡೆಸುವ ಪ್ರಯತ್ನ ನಡೆ ಯುತ್ತಿದೆ ಎಂಬ ಆರೋಪ ವ್ಯಕ್ತವಾಗಿತ್ತು. ಜತೆಗೆ ಅವಧಿ ವಿಸ್ತರಿಸುವಂತೆ ಆಯೋ ಗ ಪತ್ರ
ಬರೆದಿತ್ತು. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ತಮ್ಮ ದೆಹಲಿ ಭೇಟಿ ಸಂದರ್ಭದಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೋಮವಾರ ಆಯೋಗಕ್ಕೆ ಕಡತ ಸಲ್ಲಿಕೆ ಮಾಡಲಾಗುವುದು ಎಂದು ಕಳೆದ ಶನಿವಾರ ಹೇಳಿಕೆ ನೀಡಿದ್ದರು. ಆದರೆ ಕಡತ ಬಿಡಿಎ ಕಚೇರಿಯಿಂದ ರವಾನೆಯಾಗಿರಲಿಲ್ಲ. ಆದರೆ ಗುರುವಾರ ಮಧ್ಯಾಹ್ನ 12 ಗಂಟೆಗೆ ಡಿವೈಎಸ್ಪಿ ಯೋಗಣ್ಣ ನೇತೃತ್ವದಲ್ಲಿ ಸುಮಾರು 23 ಟ್ರಂಕ್ಗಳಲ್ಲಿ 1.30 ಲಕ್ಷ ಕಡತಗಳನ್ನು ಬಿಗಿ ಭದ್ರತೆಯೊಂದಿಗೆ  ಆಯೋಗದ ಕಚೇರಿಗೆ ಕಳುಹಿಸಿಕೊಡಲಾಗಿದೆ. 2004ರಿಂದ 2014ರವರೆಗೆ ಅರ್ಕಾವತಿ ಬಡಾವಣೆ ಸಂಬಂಧ ನಡೆಸಿದ ನೋಟಿಫಿಕೇಷನ್, ಡಿನೋಟಿಫಿಕೇಷನ್ ಸೇರಿದಂತೆ ಹಲವು ಮಹತ್ವದ ಅಂಶಗಳು ಈ ಟ್ರಂಕ್ಗಳಲ್ಲಿ ಅಡಕವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT