ಸರ್ಕಾರದ ವಿರುದ್ಧ ಪ್ರತಿಪಕ್ಷ ಸದಸ್ಯರ ಸಿಡಿಮಿಡಿ 
ರಾಜಕೀಯ

ಆರಂಭದಲ್ಲೇ ಸರ್ಕಾರದ ವಿರುದ್ಧ ಸಿಡಿಮಿಡಿ

ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸರಿಯಾದ ಕ್ರಮದಲ್ಲಿ ಉತ್ತರ ನೀಡದ ಸರ್ಕಾರದ ವಿರುದ್ಧ ಪ್ರತಿಪಕ್ಷ ಸದಸ್ಯರು ತೀವ್ರ ವಾಗ್ದಾಳಿ ನಡೆಸಿದ ಪ್ರಸಂಗ ನಡೆಯಿತು...

ವಿಧಾನಪರಿಷತ್ತು: ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸರಿಯಾದ ಕ್ರಮದಲ್ಲಿ ಉತ್ತರ ನೀಡದ ಸರ್ಕಾರದ ವಿರುದ್ಧ ಪ್ರತಿಪಕ್ಷ ಸದಸ್ಯರು ತೀವ್ರ ವಾಗ್ದಾಳಿ ನಡೆಸಿದ ಪ್ರಸಂಗ ನಡೆಯಿತು.

ಸದನ ಆರಂಭವಾಗುತ್ತಿದ್ದಂತೆ ಸದಸ್ಯರ ಪ್ರಶ್ನೆಗಳಿಗೆ ಸರ್ಕಾರದಿಂದ ಉತ್ತರ ಮಂಡನೆಯಾಯಿತು. ಆದರೆ, ಪ್ರಶ್ನೆಗಳ ಸಂಖ್ಯೆಗೂ ಉತ್ತರಗಳ ಸಂಖ್ಯೆಗೂ ಅಜಗಜಾಂತರ ವ್ಯತ್ಯಾಸವಿತ್ತು. ಇದು ಪ್ರತಿಪಕ್ಷ ಸದಸ್ಯರ ಕೆಂಗಣ್ಣಿಗೆ ಗುರಿಯಾಯಿತು. 140 ಪ್ರಶ್ನೆಗಳ ಪೈಕಿ 43ಕ್ಕೆ ಮಾತ್ರ ಸರ್ಕಾರದಿಂದ ಉತ್ತರ ಬಂದಿತ್ತು. ಹಾಗೆಯೇ ಲಿಖಿತ ಮೂಲಕ ಕೇಳಲಾದ 15 ಪ್ರಶ್ನೆಗೆ 10ಕ್ಕೆ ಮಾತ್ರ ಉತ್ತರ ಬಂದಿತ್ತು.

ಈ ವೇಳೆ ಮುಖ್ಯಮಂತ್ರಿಯವರನ್ನುದ್ದೇಶಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಇಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರ ಸಿಗುವುದಿಲ್ಲ ಎಂದರೆ ಏನರ್ಥ. ನೀವು ಸದನಕ್ಕೆ ಬರಬೇಡಿ ಎಂದರೆ ಬರುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಅವರಿಗೆ ಪ್ರತ್ಯುತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ನಿಮ್ಮನ್ನು ಜನ ಆಯ್ಕೆ ಮಾಡಿಕಳಿಸಿದ್ದಾರೆ ಅಥವಾ ನಿಮ್ಮ ಪಕ್ಷದವರು ಇಲ್ಲಿಗೆ ಕಳಿಸಿದ್ದಾರೆ.

ನಿಮ್ಮನ್ನು ಬರಬೇಡಿ ಎಂದು ಹೇಳುವ ಅಧಿಕಾರ ನಮಗಿಲ್ಲ ಎಂದರು. ವಾದ ತಾರಕಕ್ಕೇರುತ್ತಿದ್ದಂತೆ ಮುಖ್ಯಮಂತ್ರಿಯವರೇ ಸಮಾಧಾನ ಗೊಂಡು, ಮುಂದೆ ಈ ರೀತಿ ಆಗದಂತೆ ಕ್ರಮಕೈಗೊಳ್ಳಲಾಗುತ್ತದೆ. ಉತ್ತರ ಕೊಡಬೇಕೆಂಬ ಕಳಕಳಿ ನಮಗಿದೆ. ಅವಶ್ಯಬಿದ್ದರೆ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುತ್ತೇವೆ ಎಂದು ಪ್ರತಿಪಕ್ಷಗಳಿಗೆ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT