ವಿದ್ಯುತ್ ತಂತಿ 
ರಾಜಕೀಯ

ನಗರದೊಳಗೆ ಲೈನ್ ಕಷ್ಟ

ನಗರಕ್ಕೆ ಅಗತ್ಯವಿರುವ ವಿದ್ಯುತ್ ಪೂರೈಸಲಾಗುತ್ತಿಲ್ಲ. ವರ್ಷಗಳ ಹಿಂದೆ ಸರಿಯಾದ ಯೋಜನೆ ರೂಪಿಸಿಲ್ಲ. ನಮ್ಮ ಬಳಿ ವಿದ್ಯುತ್ ಇದ್ದರೂ...

ಬೆಂಗಳೂರು: ನಗರಕ್ಕೆ ಅಗತ್ಯವಿರುವ ವಿದ್ಯುತ್ ಪೂರೈಸಲಾಗುತ್ತಿಲ್ಲ. ವರ್ಷಗಳ ಹಿಂದೆ ಸರಿಯಾದ ಯೋಜನೆ ರೂಪಿಸಿಲ್ಲ. ನಮ್ಮ ಬಳಿ ವಿದ್ಯುತ್ ಇದ್ದರೂ ಅದನ್ನು ನಗರದೊಳಗೆ ತರಲು ವಿದ್ಯುತ್ ತಂತಿ ಹಾಕಲು ಆಗುತ್ತಿಲ್ಲ ಹಾಗಾಗಿ ಕೆಪಿಟಿಸಿಎಲ್ ಅಧಿಕಾರಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಭೂಮಿಯ ಬೆಲೆ ಗಗನಕ್ಕೇರಿರುವುದರಿಂದ ಸಾರ್ವಜನಿಕರು ಕಂಬಗಳನ್ನು ನೆಡಲು ಜಾಗ ನೀಡುತ್ತಿಲ್ಲ. ಅದನ್ನು ನಾವೇ ಖರೀದಿಸಿ ಹಣ ಪರಿಹಾರ ನೀಡುವುದು ಕಷ್ಟವಾಗುತ್ತದೆ. ಹಾಗಾಗಿ ಬಾಡಿಗೆಗೆ ತಮ್ಮ ಜಮೀನು ಅಥವಾ ಸ್ಥಳ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ನಗರದಲ್ಲಿ ಎಲ್ಲೇ ವಿದ್ಯುತ್ ತಂತಿ ಹಾದುಬಂದರೆ ಮಾರುಕಟ್ಟೆ ದರದಲ್ಲಿ ಶೇ.75ರಷ್ಟು, ಟವರ್ ನಿರ್ಮಾಣ ಮಾಡಿದಲ್ಲಿ ಶೇ.100ರಷ್ಟು ಪರಿಹಾರ ನೀಡಲಾಗುವುದು.

ಗ್ರಾಮೀಣ ಪ್ರದೇಶಗಳಲ್ಲಾದರೆ ತಂತಿ ಹಾದುಬಂದಿರುವ ನಿರ್ದಿಷ್ಟ ಪ್ರದೇಶಕ್ಕೆ ಶೇ.50 ಹಾಗೂ ಟವರ್ ಇದ್ದಲ್ಲಿ ಶೇ.100 ಪರಿಹಾರ ನೀಡಲಾಗುವುದು ಎಂದರು. ವಿವಿಧೆಡೆಯಿಂದ ಆಗಮಿಸಿದ್ದ ಕೈಗಾರಿಕೋದ್ಯಮಿಗಳು ವಿದ್ಯುತ್ ಕೊರತೆ ಬಗ್ಗೆ ಅಹವಾಲು ತೋಡಿಕೊಂಡರು. ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ್ ನಾಯಕ್, ಕಾಸಿಯಾ ಅಧ್ಯಕ್ಷ ಸಿ.ಎ .ರಾಜಮನೆ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT