ಜಗದೀಶ ಶೆಟ್ಟರ್ 
ರಾಜಕೀಯ

ದುರಹಂಕಾರಿ ಸಿದ್ದುಗೆ ತಕ್ಕ ಶಾಸ್ತಿ: ಜಗದೀಶ್ ಶೆಟ್ಟರ್

ದಲಿತ ಮುಖ್ಯಮಂತ್ರಿ ವಿಚಾರದಿಂದ ಕಾಂಗ್ರೆಸ್‍ನಲ್ಲಿನ ಒಳಜಗಳ ಬೀದಿಗೆ ಬಂದಿದ್ದು ಇದು ಯಾವಾಗ ಬೇಕಾದರೂ ಸ್ಪೋಟಗೊಳ್ಳಬಹುದು...

ತಿಪಟೂರು: ದಲಿತ ಮುಖ್ಯಮಂತ್ರಿ ವಿಚಾರದಿಂದ ಕಾಂಗ್ರೆಸ್‍ನಲ್ಲಿನ ಒಳಜಗಳ ಬೀದಿಗೆ ಬಂದಿದ್ದು ಇದು ಯಾವಾಗ ಬೇಕಾದರೂ ಸ್ಪೋಟಗೊಳ್ಳಬಹುದು. ದುರಹಂಕಾರಿ ಮುಖ್ಯಮಂತ್ರಿ ತಕ್ಕ ಶಾಸ್ತಿ ಅನುಭವಿಸುವುದು ಖಚಿತ ಎಂದು ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಹೇಳಿದರು. ನಗರದ ಷಡಕ್ಷರ ಮಠದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸಶಕ್ತವಾಗಿದ್ದು 2018ರಲ್ಲಿ ರಾಜ್ಯದಲ್ಲಿ ಪುನಃ ಸರ್ಕಾರ ರಚಿಸಲಿದೆ. ಅರ್ಕಾವತಿ ಡಿನೋಟಿಫಿಕೇಶನ್ ಕುರಿತು ಪ್ರಬಲ ಕಾನೂನಾತ್ಮಕ ಹೋರಾಟ ಮುಂದುವರೆಸಿದ್ದು ರಾಜ್ಯಪಾಲರ ಅನುಮತಿಗಾಗಿ ಕಾಯುತ್ತಿದ್ದೇವೆ. ಬಿಜೆಪಿ ಸರ್ಕಾರ ಘೋಷಣೆ ಮಾಡಿದ ಸಾವಿರಾರು ಕೋಟಿ ರು. ಯೋಜನೆಗಳ ಮುಂದುವರಿದ ಭಾಗವನ್ನೇ ಕಾಂಗ್ರೆಸ್ ತನ್ನ ಯೋಜನೆ ಎಂದು ಬಿಂಬಿಸಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕತ್ವದ ಕುರಿತು ಗೊಂದಲ, ಅಸಮಾಧಾನದ ಗೂಡಾಗಿದೆ. ಸಿದ್ದರಾಮಯ್ಯ ತಮ್ಮ ದುರಹಂಕಾರಕ್ಕೆ ಕೆಲವೇ ಸಮಯದಲ್ಲಿ ತಕ್ಕ ಶಾಸ್ತಿ ಅನುಭವಿಸಲಿದ್ದಾರೆ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT