ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ (ಸಂಗ್ರಹ ಚಿತ್ರ) 
ರಾಜಕೀಯ

'ಕೈ' 'ಹೈ' 'ಸ್ಪೈ'

ಕೊನೆಗೂ ರಾಜ್ಯ ಸರ್ಕಾರದ ಬಗ್ಗೆ ನಿಗಾವಹಿಸಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಸಚಿವರ..

ರಾಜ್ಯ ಸರ್ಕಾರದ ಮೇಲೆ ನಿಗಾ ವಹಿಸಲು ಹೈಕಮಾಂಡ್ ಸಿದ್ಧತೆ
ಸಚಿವರು, ಶಾಸಕರ ಕಾರ್ಯ ನಿರ್ವಹಣೆ ವಿವರ ಕೋರಿದ ವರಿಷ್ಠರು
ಕೆಪಿಸಿಸಿ ಕಾರ್ಯಕಾರಿ ಸಭೆಯಲ್ಲಿ ಮಾಹಿತಿ ನೀಡಿದ ಪರಮೇಶ್ವರ

ಬೆಂಗಳೂರು:
ಕೊನೆಗೂ ರಾಜ್ಯ ಸರ್ಕಾರದ ಬಗ್ಗೆ ನಿಗಾವಹಿಸಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಸಚಿವರ ಕಾರ್ಯ ನಿರ್ವಹಣೆ ಬಗ್ಗೆ ಗುಪ್ತ ವರದಿ ನೀಡುವಂತೆ ರಾಜ್ಯ ಘಟಕವನ್ನು ಕೋರಿದೆ.

ವರದಿಯಲ್ಲಿ ಸಚಿವರು ಮತ್ತು ಶಾಸಕರ ಕಾರ್ಯ ನಿರ್ವಹಣೆ ಜತೆಗೆ ಕಾಂಗ್ರೆಸ್ ಹಿನ್ನಡೆಗೆ ಕಾರಣಗಳೇನು ಮತ್ತು 21ನೇ ಶತಮಾನದಲ್ಲಿ ಕಾಂಗ್ರೆಸ್ ಸಿದ್ಧಾಂತದಲ್ಲಿ ಬದಲಾಗಬೇಕಾದ ಅಂಶಗಳೇನು ಎಂಬ ಬಗ್ಗೆ ವರದಿಯಲ್ಲಿ ನಮೂದಿಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಘಟಕಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ನಡೆದ ಕೆಪಿಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರೇ ಈ ವಿಷಯ ಪ್ರಕಟಿಸಿದ್ದು, ಪಕ್ಷದ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಹಿರಿಯ ಜತೆ ಚರ್ಚೆ
ದೇಶದ ಎಲ್ಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಹಾಗೂ ಹಿರಿಯ ಮುಖಂಡರ ಜತೆ ಹೈಕಮಾಂಡ್ ಚರ್ಚೆ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣಗಳನ್ನು ಹುಡುಕಲಾಗುತ್ತಿದೆ. ಪಕ್ಷದಲ್ಲಿ ಬದಲಾವಣೆ ಅಗತ್ಯವಾ ಎಂದು ಮಾಹಿತಿ ಕೇಳಿದೆ. ಇದ ಜತೆಗೆ ರಾಜ್ಯ ಸರ್ಕಾರದ ಸಚಿವರು, ಶಾಸಕರಿಗೆ ಉತ್ತರದಾಯಿತ್ವ ಇರಬೇಕು ಎಂದು ಸೋನಿಯಾ ಸೂಚಿಸಿದ್ದು, ಈ ಎಲ್ಲ ಅಂಶ ಆಧರಿಸಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ವರದಿ ಕೇಳಲಾಗಿದೆ ಎಂದು ಹೇಳಿದರು.

ಫೆಬ್ರವರಿ ಅಂತ್ಯದ ವೇಳೆಗೆ ಹೈಕಮಾಂಡ್ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ವರದಿ ಸಿದ್ಧಪಡಿಸಬೇಕು. ಸೀಲು ಮಾಡಿದ ಲಕೋಟೆಯಲ್ಲಿ ಈ ವರದಿಯನ್ನು ಪ್ರದೇಶ ಕಾಂಗ್ರೆಸ್ ಸಮಿತಿಗೆ ನೀಡಬೇಕಾಗಿದ್ದು, ನಂತರ ಇದನ್ನು ಎಐಸಿಸಿಗೆ ರವಾನೆ ಮಾಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT