ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ (ಸಂಗ್ರಹ ಚಿತ್ರ) 
ರಾಜಕೀಯ

'ಕೈ' 'ಹೈ' 'ಸ್ಪೈ'

ಕೊನೆಗೂ ರಾಜ್ಯ ಸರ್ಕಾರದ ಬಗ್ಗೆ ನಿಗಾವಹಿಸಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಸಚಿವರ..

ರಾಜ್ಯ ಸರ್ಕಾರದ ಮೇಲೆ ನಿಗಾ ವಹಿಸಲು ಹೈಕಮಾಂಡ್ ಸಿದ್ಧತೆ
ಸಚಿವರು, ಶಾಸಕರ ಕಾರ್ಯ ನಿರ್ವಹಣೆ ವಿವರ ಕೋರಿದ ವರಿಷ್ಠರು
ಕೆಪಿಸಿಸಿ ಕಾರ್ಯಕಾರಿ ಸಭೆಯಲ್ಲಿ ಮಾಹಿತಿ ನೀಡಿದ ಪರಮೇಶ್ವರ

ಬೆಂಗಳೂರು:
ಕೊನೆಗೂ ರಾಜ್ಯ ಸರ್ಕಾರದ ಬಗ್ಗೆ ನಿಗಾವಹಿಸಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಸಚಿವರ ಕಾರ್ಯ ನಿರ್ವಹಣೆ ಬಗ್ಗೆ ಗುಪ್ತ ವರದಿ ನೀಡುವಂತೆ ರಾಜ್ಯ ಘಟಕವನ್ನು ಕೋರಿದೆ.

ವರದಿಯಲ್ಲಿ ಸಚಿವರು ಮತ್ತು ಶಾಸಕರ ಕಾರ್ಯ ನಿರ್ವಹಣೆ ಜತೆಗೆ ಕಾಂಗ್ರೆಸ್ ಹಿನ್ನಡೆಗೆ ಕಾರಣಗಳೇನು ಮತ್ತು 21ನೇ ಶತಮಾನದಲ್ಲಿ ಕಾಂಗ್ರೆಸ್ ಸಿದ್ಧಾಂತದಲ್ಲಿ ಬದಲಾಗಬೇಕಾದ ಅಂಶಗಳೇನು ಎಂಬ ಬಗ್ಗೆ ವರದಿಯಲ್ಲಿ ನಮೂದಿಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಘಟಕಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ನಡೆದ ಕೆಪಿಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರೇ ಈ ವಿಷಯ ಪ್ರಕಟಿಸಿದ್ದು, ಪಕ್ಷದ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಹಿರಿಯ ಜತೆ ಚರ್ಚೆ
ದೇಶದ ಎಲ್ಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಹಾಗೂ ಹಿರಿಯ ಮುಖಂಡರ ಜತೆ ಹೈಕಮಾಂಡ್ ಚರ್ಚೆ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣಗಳನ್ನು ಹುಡುಕಲಾಗುತ್ತಿದೆ. ಪಕ್ಷದಲ್ಲಿ ಬದಲಾವಣೆ ಅಗತ್ಯವಾ ಎಂದು ಮಾಹಿತಿ ಕೇಳಿದೆ. ಇದ ಜತೆಗೆ ರಾಜ್ಯ ಸರ್ಕಾರದ ಸಚಿವರು, ಶಾಸಕರಿಗೆ ಉತ್ತರದಾಯಿತ್ವ ಇರಬೇಕು ಎಂದು ಸೋನಿಯಾ ಸೂಚಿಸಿದ್ದು, ಈ ಎಲ್ಲ ಅಂಶ ಆಧರಿಸಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ವರದಿ ಕೇಳಲಾಗಿದೆ ಎಂದು ಹೇಳಿದರು.

ಫೆಬ್ರವರಿ ಅಂತ್ಯದ ವೇಳೆಗೆ ಹೈಕಮಾಂಡ್ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ವರದಿ ಸಿದ್ಧಪಡಿಸಬೇಕು. ಸೀಲು ಮಾಡಿದ ಲಕೋಟೆಯಲ್ಲಿ ಈ ವರದಿಯನ್ನು ಪ್ರದೇಶ ಕಾಂಗ್ರೆಸ್ ಸಮಿತಿಗೆ ನೀಡಬೇಕಾಗಿದ್ದು, ನಂತರ ಇದನ್ನು ಎಐಸಿಸಿಗೆ ರವಾನೆ ಮಾಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT