ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ 
ರಾಜಕೀಯ

ಆರೋಪ ಮಾಡುವವರು ದಾಖಲೆ ಕೊಡಲಿ: ಪರಮ್

ಕಾಂಗ್ರೆಸ್ ಸರ್ಕಾರದ ಸಚಿವರ ಮೇಲೆ ಆರೋಪಗಳಿದ್ದರೆ ದಾಖಲೆ ಸಮೇತ ಸಾಬೀತುಪಡಿಸಲಿ...

ಮೈಸೂರು: ಕಾಂಗ್ರೆಸ್ ಸರ್ಕಾರದ ಸಚಿವರ ಮೇಲೆ ಆರೋಪಗಳಿದ್ದರೆ ದಾಖಲೆ ಸಮೇತ ಸಾಬೀತುಪಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಬಿಜೆಪಿ ಮುಖಂಡರಿಗೆ ಸವಾಲು ಹಾಕಿದರು.

ಭಾನುವಾರ ನಗರದ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಸರ್ಕಾರದ ಸಚಿವರ ಮೇಲೆ ಯಾವುದೇ ಆರೋಪಗಳಿದ್ದರೂ ದಾಖಲೆ ಸಮೇತ ಸಾಬೀತುಪಡಿಸಿ, ಕಾನೂನು ಹೋರಾಟ ನಡೆಸಲಿ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಎಷ್ಟು ಮಂದಿ ಭ್ರಷ್ಟಾಚಾರದ ಆರೋಪದ ಮೇಲೆ ಜೈಲು ಸೇರಿದ್ದರು ಎಂಬುದು ಗೊತ್ತಿದೆ ಎಂದು ಕಿಡಿಕಾರಿದರು.

ಶಾಸಕರು, ಸಚಿವರು ತಪ್ಪು ಮಾಡಿದ್ದರೆ ಲೋಕಾಯುಕ್ತದಂತಹ ಸಂಸ್ಥೆಯ ಮುಂದೆ ಹೋಗಲಿ. ಅದು ಬಿಟ್ಟು ಬೀದಿಯಲ್ಲಿ ನಿಂತು ಮಾತನಾಡುವುದು ಒಳ್ಳೆಯದಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಬರುವುದಕ್ಕೂ ನಮಗೂ ಸಂಬಂಧ ಇಲ್ಲ.

ಕರ್ನಾಟಕದಲ್ಲಿಯೇ ಪಕ್ಷವೊಂದರ ರಾಷ್ಟ್ರೀಯ ಅಧ್ಯಕ್ಷರು ಇದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬಂದಾಗ ಬೇಡ ಎನ್ನಲು ಆಗುತ್ತದೆಯೇ? ಅಮಿತ್ ಶಾ ಅಂಥ ನೂರು ಜನ ಬಂದರೂ ಏನೂ ಮಾಡಲು ಆಗುವುದಿಲ್ಲ ಎಂದು ಅವರು ತಿಳಿಸಿದರು.

ದಲಿತ ನಾಯಕರು ಮುಖ್ಯಮಂತ್ರಿ ಆಗಬೇಕು ಎಂಬ ಅಭಿಪ್ರಾಯದ ಬಗ್ಗೆ ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಅನಿಸಿಕೆ ಮತ್ತು ಭಾವನೆಯನ್ನು ಸಂದರ್ಭ ಬಂದಾಗ ಹೇಳುತ್ತೇನೆ. ಸಚಿವರಾದ ವಿ.ಶ್ರೀನಿವಾಸಪ್ರಸಾದ್ ಮತ್ತು ಎಚ್. ಆಂಜನೇಯ ಅವರು ತಮ್ಮದೆ ಅನಿಸಿಕೆ ಹೇಳಿದ್ದಾರೆ ಎಂದರು.

ಸುತ್ತೂರು ಶ್ರೀಗಳೊಂದಿಗೆ ಶಿಕ್ಷಣ ಸಂಸ್ಥೆಗಳ ವಿಚಾರದ ಬಗ್ಗೆ ಚರ್ಚಿಸಲಾಗಿದೆಯೇ ಹೊರತು ರಾಜಕೀಯ ಚರ್ಚೆ ಇಲ್ಲ. ಸ್ವಾಮೀಜಿಗಳೊಂದಿಗೆ ಇದುವರೆಗೂ ರಾಜಕೀಯ ಮಾತನಾಡಿಲ್ಲ. ಅವರೂ ಮಾತನಾಡಿಲ್ಲ. 2006ರ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಬಗ್ಗೆ ಅನೇಕ ಸಲಹೆ, ಸೂಚನೆ ನೀಡಿದ್ದಾರೆ. ಅದನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT