ಚಿಕ್ಕಪೇಟೆ ಶಾಸಕ ಆರ್‌ವಿ ದೇವರಾಜ್ (ಸಂಗ್ರಹ ಚಿತ್ರ) 
ರಾಜಕೀಯ

ಆರ್‌ವಿ ದೇವರಾಜ್ ಸೇರಿ 8 ಮಂದಿ ವಿರುದ್ಧ ದೂರು ದಾಖಲು

ಸಿದ್ದಯ್ಯ ರಸ್ತೆ ಸಮೀಪ ಭೂಕಬಳಿಕೆ ಮಾಡಿದ ಆರೋಪದನ್ವಯ ಶಾಸಕ ಆರ್‌ವಿ ದೇವರಾಜ್, ಅವರ ಪತ್ನಿ...

ಬೆಂಗಳೂರು: ಸಿದ್ದಯ್ಯ ರಸ್ತೆ ಸಮೀಪ ಭೂಕಬಳಿಕೆ ಮಾಡಿದ ಆರೋಪದನ್ವಯ ಶಾಸಕ ಆರ್‌ವಿ ದೇವರಾಜ್, ಅವರ ಪತ್ನಿ ಸೇರಿದಂತೆ 8 ಮಂದಿ ವಿರುದ್ಧ ಕಲಾಸಿಪಾಳ್ಯ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಕೃಂಬಿಗಲ್ ರಸ್ತೆ ಹಾಗೂ ಸಿದ್ದಯ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಗೆ ಸೇರಿದ ಹಾಗೂ ಆ ಜಾಗದ ಪಕ್ಕದ ನಿವೇಶನವನ್ನು ಇವರು ನಕಲಿ ದಾಖಲೆ ಸೃಷ್ಟಿಸಿ ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದರು.

2 ಸ್ಥಳ ಬಿಬಿಎಂಪಿಗೆ ಸೇರಿದ್ದು, ಈ ಸಂಬಂಧ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎನ್‌ಆರ್ ರಮೇಶ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 8 ಎಸಿಎಂಎಂ ನ್ಯಾಯಾಲಯದ ನ್ಯಾಯಮೂರ್ತಿ ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸುವಂತೆ ಆದೇಶಿಸಿದ್ದರು. ತನಿಖೆ ನಡೆಸಿದ ಕಲಾಸಿ ಪಾಳ್ಯ ಠಾಣೆ ಪೊಲೀಸರು ಶಾಸಕ ಆರ್‌ವಿ ದೇವರಾಜು, ಮಮತಾ ರಾಜ್, ಟಿವಿ ಪ್ರಭು, ಜ್ಯೋತಿರಾಣಿ, ಜೋಗಿಂದರ್ ಸಿಂಗ್ ಸಬರ್‌ವಾಲ್, ಕೆಕೆ ಸಬರ್ ವಾಲ್, ಗುರುಪ್ರೀತ್ ಸಿಂಗ್, ಎಚ್‌ಎ ಕೃಷ್ಣಮೂರ್ತಿ ಅವರ ವಿರುದ್ಧ ನಕಲಿ ದಾಖಲೆ ತಯಾರಿಕೆ, ವಂಚನೆ, ಅಧಿಕಾರ ದುರುಪಯೋಗ, ಸರ್ಕಾರಿ ಭೂಮಿ ಕಬಳಿಕೆ ಆರೋಪದಡಿ ಶನಿವಾರ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT