ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಕೈಗಾರಿಕೆ ಅಭಿವೃದ್ಧಿಗೆ ನೆರವು

ರಾಜ್ಯದ ಕೈಗಾರಿಕೆ ಅಭಿವೃದ್ಧಿಗೆ`ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ನಿಗಮ'ವು ಅಪಾರ ಕೊಡುಗೆ ನೀಡಿದೆ ಎಂದು...

ಬೆಂಗಳೂರು: ರಾಜ್ಯದ ಕೈಗಾರಿಕೆ ಅಭಿವೃದ್ಧಿಗೆ`ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ನಿಗಮ'ವು ಅಪಾರ ಕೊಡುಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ಫೋಸಿಸ್ ಸೇರಿದಂತೆ ಸಾಕಷ್ಟು ಕಂಪನಿಗಳ ಸ್ಥಾಪನೆ ಹಾಗೂ ಅಭಿವೃದ್ಧಿಯಲ್ಲಿ ನಿಗಮದ ಪಾತ್ರ ದೊಡ್ಡದಿದೆ. ಸುಮಾರು 2300 ಕಂಪನಿಗಳ ಹುಟ್ಟಿಗೆ ಕಾರಣವಾದ ಸಂಸ್ಥೆಯು ರು. 2200 ಕೋಟಿಗೂ ಅಧಿಕ ಆರ್ಥಿಕ ನೆರವು ನೀಡಿದೆ. ಇನ್ಫೋಸಿಸ್ ನ ನಾರಾಯಣಮೂರ್ತಿ ಅವರು ಎಂದಿಗೂ ಇದನ್ನು ಸ್ಮರಿಸಿಕೊಳ್ಳುತ್ತಾರೆ ಎಂದು ಕರ್ನಾಟಕ ರಾಜ್ಯ ಕೈಗಾರಿಕೆ ಹಾಗೂ ಮೂಲಸೌಕರ್ಯ ನಿಗಮದ ಸುವರ್ಣ ಮಹೋತ್ಸವದಲ್ಲಿ ಅವರು ಅಭಿಪ್ರಾಯ ಪಟ್ಟರು.
ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಿಗೆ ನಿಗಮದಿಂದ ಆರ್ಥಿಕ ನೆರವು ನೀಡಲಾಗಿದೆ. ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆ ಹಾಗೂ ಬೆಳವಣಿಗೆಯಾಗಿದ್ದರೆ ನಿಗಮದ ಪಾತ್ರ ಮುಖ್ಯವಾಗಿದೆ. ಭವಿಷ್ಯದಲ್ಲಿಯೂ ಇದೇ ಸಹಕಾರ ಮುಂದುವರಿಯಲಿದೆ. ಹೊಸ ಕಂಪನಿಗಳ ಪಾಲಿಗೆ ಕೆಎಸ್‍ಐಐಡಿಸಿ ಸಂಸ್ಥೆಯು ಮಾರ್ಗದರ್ಶಕನಂತೆ ಕೆಲಸ ಮಾಡುತ್ತಿದೆ ಎಂದು ಹೇಳಿದರು. ರಾಜ್ಯವು ಮೊದಲಿನಿಂದಲೂ ಕೈಗಾರಿಕೆ ಸ್ನೇಹಿಯಾಗಿದೆ. ಈಗ ಮತ್ತಷ್ಟು ಕೈಗಾರಿಕೆ ಸ್ನೇಹಿ ನೀತಿಗಳನ್ನು  ರಾಜ್ಯ ಸರ್ಕಾರ ಪ್ರಕಟಿಸಿದೆ  ಎಂದು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT