ಶಂಕರ ಬಿದರಿ 
ರಾಜಕೀಯ

ಸಂದಾಯವಾಗದೆ ಕಡತ ಚಲಿಸದು: ಆರೋಪ

ರಾಜ್ಯವನ್ನು ಒಬ್ಬ ವ್ಯಕ್ತಿ ಹಾಗೂ ಅವರ ಸಹಚರ ಆಳುತ್ತಿದ್ದಾರೆ. ಸಂದಾಯವಿಲ್ಲದೇ ಯಾವೊಂದು ಕಡತವೂ ಕದಲುವುದಿಲ್ಲ...

ಬೆಂಗಳೂರು: ರಾಜ್ಯವನ್ನು ಒಬ್ಬ ವ್ಯಕ್ತಿ ಹಾಗೂ ಅವರ ಸಹಚರ ಆಳುತ್ತಿದ್ದಾರೆ. ಸಂದಾಯವಿಲ್ಲದೇ ಯಾವೊಂದು ಕಡತವೂ ಕದಲುವುದಿಲ್ಲ. ಬಹಳ ಬುದ್ಧಿವಂತಿಕೆಯಿಂದ ಸರ್ಕಾರ ದಲ್ಲಿ ವ್ಯವಹಾರ ನಡೆಯುತ್ತಿದೆ ಎಂದುನಿವೃತ್ತ ಡಿಜಿಪಿ ಶಂಕರ ಬಿದರಿ ಆರೋಪಿಸಿದ್ದಾರೆ. ಕರ್ನಾಟಕವು ಇಂದು ಭ್ರಷ್ಟಾಚಾರದಲ್ಲಿ ನಂ.1 ಆಗಿದೆ.ಹಿಂದಿನ ಸರ್ಕಾರಗಳ ತಪ್ಪಿನಿಂದ ಪಾಠ ಕಲಿತಿರುವುದರಿಂದಎಲ್ಲ ಸಂದಾಯಗಳನ್ನು ಸೂಕ್ಷ್ಮವಾಗಿ ಮಾಡಲಾಗುತ್ತಿದೆ. ಕೆಲ ಅಧಿಕಾರಿಗಳ ಮೂಲಕ ಕಡತ ವಿಲೇವಾರಿಯಾಗುತ್ತಿದ್ದು, ನಿರೀಕ್ಷಿತ ವ್ಯವಹಾರ ನಡೆದು ಸಂದಾಯ ವಾಗದಿದ್ದರೆ ಆ ಕಡತಕ್ಕೆ ಮುಕ್ತಿಯೇ  ಸಿಗುತ್ತಿಲ್ಲ. ಆದರೆ, ಪ್ರಚಾರಕ್ಕೆ ಕಡತ ವಿಲೇವಾರಿ ಯಜ್ಞ ಎಂದು ಹೇಳುತ್ತಿದ್ದಾರೆ.
ಅದರಲ್ಲೂ  ಮುಖ್ಯ ಮಂತ್ರಿಗಳ ಬಳಿ ಇರುವ ಇಲಾಖೆಯಲ್ಲಿ ಈ ಸಂದಾಯ ವ್ಯವಹಾರ ಹೆಚ್ಚಿದೆ ಎಂದುರಾಜ್ಯ ಬಿಜೆಪಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಸಿ ತಿಳಿಸಿದರು. ಹಿಂದಿನ ಸರ್ಕಾರದಲ್ಲಿ ಸಚಿವರೇ ಸಿಕ್ಕಿಹಾಕಿಕೊಂಡಿರುವುದರಿಂದ ಜಾಣತನದಿಂದ ಅ„ಕಾರಿಗಳ ನೇತೃತ್ವದಲ್ಲೇ ಸಮಿತಿರಚಿಸಲಾಗಿದೆ. ಈ ಮೂಲಕ ಜಾಣತನದಿಂದ ಸೂಕ್ಷ್ಮವಾಗಿ ವ್ಯವಹಾರ ನಡೆಸಲಾಗುತ್ತಿದೆ. ದೇಶ, ಮನೆಯನ್ನೇ ಲೂಟಿ ಮಾಡಲು ನಿಂತರೆ ಪರಿಸ್ಥಿತಿ ಏನಾಗಬೇಕು? ರಾಜ್ಯದಲ್ಲಿ ಅದೇ ಕೆಲಸ ಪ್ರಾರಂಭವಾಗಿದೆ. ಇದಕ್ಕೆ ನಿಯಂತ್ರಣ ಹೇರಬೇಕಿದೆ ಎಂದು ಅವರು ಹೇಳಿದರು. ನಿಸ್ವಾರ್ಥ ಸೇವೆಗೆಂದು ರಾಜಕೀಯಕ್ಕೆ ಬರಬೇಕು. ಡೀಲ್ ನಡೆಸುವುದಾದರೆ ರಿಯಲ್ ಎಸ್ಟೇಟ್‍ನಂತಹ ಸಾಕಷ್ಟುಉದ್ಯಮಗಳಿವೆ. ರಾಜಕೀಯವನ್ನು ಇಂತಹ ಕಾರ್ಯಗಳಿಗೆ  ಬಳಸಿಕೊಳ್ಳಬಾರದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT