ವಸತಿ ಸಚಿವ ಅಂಬರೀಷ್ ಮತ್ತು ಮಾಜಿ ಸಂಸದ ಎಚ್.ವಿಶ್ವನಾಥ್ (ಸಂಗ್ರಹ ಚಿತ್ರ) 
ರಾಜಕೀಯ

ಅಂಬಿ-ವಿಶಿ ದೋಷಾರೋಪ

ವಸತಿ ಸಚಿವ ಅಂಬರೀಷ್ ಮತ್ತು ಮಾಜಿ ಸಂಸದ ಎಚ್.ವಿಶ್ವನಾಥ್ ನಡುವಿನ ಅಸಮಾಧಾನ ಈಗ ಅಕ್ಷರಶಃ ಬೀದಿ..

ಬೆಂಗಳೂರು: ವಸತಿ ಸಚಿವ ಅಂಬರೀಷ್ ಮತ್ತು ಮಾಜಿ ಸಂಸದ ಎಚ್.ವಿಶ್ವನಾಥ್ ನಡುವಿನ ಅಸಮಾಧಾನ ಈಗ ಅಕ್ಷರಶಃ ಬೀದಿಗೆ ಬಿದ್ದಿದ್ದು, ಪ್ರದೇಶ ಕಾಂಗ್ರೆಸ್ ಕಚೇರಿ ಎದುರೇ ಇಬ್ಬರೂ ಪರಸ್ಪರ ದೋಷಾರೋಪಣೆ ಮಾಡಿಕೊಂಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸಂಘಟನೆ ಸಂಬಂಧ ನಡೆಯುತ್ತಿರುವ ಸಭೆಗೆ ಆಗಮಿಸಿದ್ದ ಇವರಿಬ್ಬರೂ ಪ್ರತ್ಯೇಕವಾಗಿ ಮಾಧ್ಯಮದ ಜತೆ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಎಚ್.ವಿಶ್ವನಾಥ್‍ಗೆ ಬುದ್ಧಿ ಹೇಳುವಂತೆ ಸಚಿವ ಅಂಬರೀಷ್ ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದ ಹಿನ್ನೆಲೆಯಲ್ಲಿ ವಿವಾದ ಬುಗಿಲೆದ್ದಿದೆ.

ಸಮನ್ವಯ ಸಮಿತಿ ಸಭೆಯ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಪಕ್ಷದ ಕಚೇರಿಗೆ ಬಂದ ಕೆಲವೇ ನಿಮಿಷದಲ್ಲಿ ಆಗಮಿಸಿದ ವಿಶ್ವನಾಥ್ ಮೊದಲು ಅಂಬರೀಷ್ ವಿರುದ್ಧ ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದರು.

`ನಾನು ಕಲಾವಿದ ಅಂಬರೀಷ್ ಅವರ ಬಗ್ಗೆ ಮಾತನಾಡಿಲ್ಲ. ಮಂತ್ರಿ ಅಂಬರೀಷ್ ಬಗ್ಗೆ ಟೀಕೆ ಮಾಡಿದ್ದೇನೆ. ಮುಖ್ಯಮಂತ್ರಿಯಾಗಲಿ, ಸಚಿವರಾಗಲಿ ತಪ್ಪಿ ನಡೆದಾಗ ಪ್ರಶ್ನಿಸುವ ಅಧಿಕಾರ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನಿಗೂ ಇದೆ. ನಾನು ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತ. ಹೀಗಾಗಿ ಸಚಿವರ ವರ್ತನೆ ಪ್ರಶ್ನಿಸಿದ್ದೇನೆ. ಸಿದ್ದರಾಮಯ್ಯ  ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯದ 11.5 ಲಕ್ಷ ಕುಟುಂಬಗಳನ್ನು ಋಣಮುಕ್ತಗೊಳಿಸಲು ರು.2480 ಕೋಟಿ ವಸತಿ ಸಾಲವನ್ನು ಮನ್ನಾ ಮಾಡಿದರು.

ಆದರೆ ವಸತಿ ಸಚಿವ ಅಂಬರೀಷ್ ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಬಗ್ಗೆ ಏನನ್ನೂ ಮಾತನಾಡುತ್ತಿಲ್ಲ. ಏಕೆ ಅವರು ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾತನಾಡುತ್ತಿಲ್ಲ? ಕಾಂಗ್ರೆಸ್ ಕಾರ್ಯಕರ್ತನಾಗಿ ನಾನು ಇದನ್ನು ಪ್ರಶ್ನಿಸಬಾರದೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಪಕ್ಷ ನಾಯಕನೇ?
ಇದಾದ ಬಳಿಕ ಕೆಪಿಸಿಸಿ ಕಚೇರಿಗೆ ಆಗಮಿಸಿದ ಸಚಿವ ಅಂಬರೀಷ್, `ವಿಶ್ವನಾಥ್‍ಗೆ ನನ್ನ ಮೇಲೆ ಜಾಸ್ತಿ ಪ್ರೀತಿ ಇರಬಹುದು. ಆದರೆ ಹಾದಿ ಬೀದಿಯಲ್ಲಿ ಈ ರೀತಿ ಮಾತನಾಡುವುದಕ್ಕೆ ಅವರೇನು ಪ್ರತಿಪಕ್ಷ ನಾಯಕರೇ?' ಎಂದು ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ 10 ವರ್ಷಗಳ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.

ಸರ್ಕಾರ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡುವುದಕ್ಕೆ ಅನುಗುಣವಾಗಿ ಮುಖಂಡರು ವರ್ತಿಸಬೇಕು. ಇವರ ಸಲಹೆ ಮತ್ತು ಪ್ರಶ್ನೆಯನ್ನು ಸೂಕ್ತ ವೇದಿಕೆಯಲ್ಲಿ ನೀಡಲಿ. ಹಾದಿಬೀದಿಯಲ್ಲಿ ಮಾತನಾಡಿದರೆ ಸಹಿಸಿಕೊಳ್ಳುವುದಿಲ್ಲ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT