ಡಿ.ವಿ. ಸದಾನಂದಗೌಡ 
ರಾಜಕೀಯ

ಅರ್ಕಾವತಿ ಕಡತಗಳನ್ನೇ ಮುಟ್ಟಿಲ್ಲ: ಡಿ.ವಿ. ಸದಾನಂದಗೌಡ

ತಾವು ಮುಖ್ಯಮಂತ್ರಿಯಾ ಗಿದ್ದ ವೇಳೆ ಅರ್ಕಾವತಿ ಡಿನೋಟಿಪಿsಕೇಷನ್ ಕಡತಗಳನ್ನೇ ಮುಟ್ಟಿಲ್ಲ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ...

ತುಮಕೂರು: ತಾವು ಮುಖ್ಯಮಂತ್ರಿಯಾ ಗಿದ್ದ ವೇಳೆ ಅರ್ಕಾವತಿ ಡಿನೋಟಿಪಿsಕೇಷನ್ ಕಡತಗಳನ್ನೇ ಮುಟ್ಟಿಲ್ಲ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದಗೌಡ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ಅವಧಿಯಲ್ಲಿ ಯಾವುದೇ ಡಿನೋಟಿಪಿsಕೇಷನ್ ಮಾಡಿಲ್ಲ. ಕೇವಲ 22 ಗುಂಟೆ ಜಮೀನನ್ನು ಸಚಿವ ಸಂಪುಟದ ಅನುಮತಿ ಪಡೆದು ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿರುವ ಡಿನೋಟಿಫಿಕೇಷನ್, ಆಡಳಿತ ವೈಫಲ್ಯ ಸೇರಿದಂತೆ ಇತರೆ ವಿಷಯಗಳ ಕುರಿತು ಹಂತ-ಹಂತವಾಗಿ ಬಿಜೆಪಿ ಹೋರಾಟ ಮಾಡುತ್ತಿದೆ. ರಾಜ್ಯಪಾಲರು ಮುಂಬರುವ ಫೆ . 2 ಅಧಿವೇಶನದ ಹಿನ್ನೆಲೆಯಲ್ಲಿ ಬ್ಯುಸಿಯಾಗಿದ್ದರು. ಹೀಗಾಗಿ ಡಿನೋಟಿಫಿಕೇಷನ್ ಸಂಬಂಧ ಬಿಜೆಪಿ ಮುಖಂಡರ ಭೇಟಿಗೆ ಅನುಮತಿ ನೀಡಿರಲಿಲ್ಲ ಅಷ್ಟೆ. ಹಾಗಂತ ಡಿನೋಟಿಫಿಕೇಷನ್ ಸಂಬಂಧ ಹೋರಾಟ ಕೈ ಬಿಡುವ ಪ್ರಶ್ನೆಯೇ  ಇಲ್ಲ. ಕಾನೂನಿನ ಚೌಕಟ್ಟಿನಲ್ಲಿ ಯಾವ ರೀತಿಯ ಹೋರಾಟ ಸಾಧ್ಯವೋ ಅದನ್ನು ಮಾಡಿಯೇ ತೀರುತ್ತೇವೆ ಎಂದು ಸದಾನಂದಗೌಡರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT