ಸಿದ್ದರಾಮಯ್ಯ 
ರಾಜಕೀಯ

ವಿಧಾನ ಪರಿಷತ್‌ ವಿಸರ್ಜನೆ ಇಲ್ಲ: ಸಿಎಂ ಸಿದ್ದರಾಮಯ್ಯ

ತೀವ್ರ ಚರ್ಚೆಗೆ ಕಾರಣವಾಗಿದ್ದ ವಿಧಾನ ಪರಿಷತ್ ಅನ್ನು ವಿಸರ್ಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ/ಸುವರ್ಣಸೌಧ: ತೀವ್ರ ಚರ್ಚೆಗೆ ಕಾರಣವಾಗಿದ್ದ ವಿಧಾನ ಪರಿಷತ್ ಅನ್ನು ವಿಸರ್ಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಇಂದು ವಿಧಾನ ಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ಮೇಲ್ಮನೆ ವಿಸರ್ಜನೆ ಬಗ್ಗೆ ನಿಮ್ಮ ಪಕ್ಷದಲ್ಲಿ ಚರ್ಚೆಯಾಗಿದೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಹೊರಟ್ಟಿ ನಮ್ಮ ಪಕ್ಷದಲ್ಲಿ ಚರ್ಚೆಯಾಗಿಲ್ಲ, ಅದು ಖಾಸಗಿ ನಿರ್ಣಯವಾದ್ದರಿಂದ ಮಂಡಿಸಲಾಗಿದೆ ಎಂದರು.

ಮೊದಲು ನಿಮ್ಮ ಪಕ್ಷದಲ್ಲಿ ಚರ್ಚಿಸಿ ಎಂದು ಸಿದ್ದರಾಮಯ್ಯ ಹೊರಟ್ಟಿ ಅವರಿಗೆ ಸಲಹೆ ನೀಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರು, ವಿಧಾನ ಪರಿಷತ್ ವಿಸರ್ಜಿಸುವ ಬಗ್ಗೆ ನಮ್ಮ ಪಕ್ಷದಲ್ಲಿ ಚರ್ಚೆಯಾಗಿದ್ದು, ವಿಸರ್ಜನೆ ಮಾಡಬಾರದು ಎಂದು ತೀರ್ಮಾನಿಸಿದ್ದೇವೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ನಾವೂ ವಿಸರ್ಜನೆ ಮಾಡಬಾರದು ಎಂದು ತೀರ್ಮಾನಿಸಿದ್ದೇವೆ ಎಂದರು.

ವಿಧಾನ ಪರಿಷತ್ ಅನ್ನು ವಿಸರ್ಜಿಸಬೇಕು ಎಂದು ನಿನ್ನೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ವಿಧಾನಸಭೆಯಲ್ಲಿ ಖಾಸಗಿ ನಿರ್ಣಯ ಮಂಡಿಸಿದ್ದರು. ಅಲ್ಲದೆ ರಹಸ್ಯ ಮತದಾನದ ಮೂಲಕ ನಿರ್ಣಯಕ್ಕೆ ಅನುಮೋದನೆ ಪಡೆಯುವಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಿದ್ದರು.

ನಿರ್ಣಯ ಮಂಡಿಸಿ ಮಾತನಾಡಿದ್ದ  ಕೃಷ್ಣಪ್ಪ, ವಾರ್ಷಿಕ 300 ಕೋಟಿ ರೂ. ವೆಚ್ಚಕ್ಕೆ ಕಾರಣವಾಗಿ ರಾಜ್ಯ ಸರಕಾರದ ಪಾಲಿಗೆ ಬಿಳಿ ಆನೆಯಾಗಿರುವ ವಿಧಾನಪರಿಷತ್ತಿನಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ಹಿಂದೆ ವಿಧಾನಪರಿಷತ್ತಿಗೆ ಇದ್ದ ಘನತೆ ಈಗಿಲ್ಲ. ಪ್ರಸ್ತುತ ಪರಿಷತ್ತು ಲ್ಯಾಂಡ್‌ ಮಾಫಿಯಾ, ಲಿಕ್ಕರ್‌ ಮಾಫಿಯಾ, ಮೆಡಿಕಲ್‌-ಎಂಜಿನಿಯರಿಂಗ್‌ ಕಾಲೇಜು ಸೀಟು ಮಾಫಿಯಾದವರಿಗೆ ಆಶ್ರಯ ನೀಡುವ "ರಾಜಕೀಯ ನಿರಾಶ್ರಿತರ ಶಿಬಿರ' ಆಗಿದೆ. ಹೀಗಾಗಿ, ರಾಜ್ಯದಲ್ಲಿ ಅದರ ಆವಶ್ಯಕತೆ ಇಲ್ಲ ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT